ಮೈಸೂರು : ದಸರಾ ಮಹೋತ್ಸವದ ಪ್ರಯುಕ್ತ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆ.೨೭ರಿಂದ ಅ.೨ರವರೆಗೆ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಸೆ.೨೭ರಂದು ಸಂಜೆ ೪ಕ್ಕೆ ವೈಮಾನಿಕ ಪ್ರದರ್ಶನ, ಸೆ.೨೮ ಮತ್ತು ೨೯ರಂದು ಸಂಜೆ ೬ಕ್ಕೆ ಡ್ರೋನ್ ಶೋ, ಅ.೧ರಂದು ಸಂಜೆ ೪ಕ್ಕೆ ವೈಮಾನಿಕ ಪ್ರದರ್ಶನ ಮತ್ತು ಪಂಜಿನ ಕವಾಯತು ಪೂರ್ವಾಭ್ಯಾಸ ಕಾರ್ಯಕ್ರಮ, ಅ.೨ರಂದು ಸಂಜೆ ೬ ಗಂಟೆಗೆ ಪಂಜಿನ ಕವಾಯತು ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.
ಬನ್ನಿಮಂಟಪ ಮೈದಾನದಲ್ಲಿನ ಆಸನಗಳ ವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಹಿತದೃಷ್ಟಿಯಿಂದ ಕಾರ್ಯಕ್ರಮ ವೀಕ್ಷಣೆಗೆ ಅನುವಾಗುವಂತೆ ಆಯಾ ದಿನಗಳಿಗೆ ಸೀಮಿತವಾಗಿ ಪಾಸ್ಗಳನ್ನು ವಿತರಿಸಲಾಗುವುದು.
ಒಳಾಂಗಣಕ್ಕೆ ಪಾಸ್ಗಳನ್ನು ಹೊಂದಿರುವವರಿಗೆ ಮಾತ್ರವೇ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಬನ್ನಿಮಂಟಪದ ಮೈದಾನದ ಮಿತ ಸಾಮರ್ಥ್ಯವನ್ನು ಗಮನದಲ್ಲಿರಿಸಿ ಕೊಂಡು ಪಾಸ್ ಇಲ್ಲದವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…