ನಮ್ಮ ಮೈಸೂರ ದಸರಾ 2025

Mysuru dasara | ಬನ್ನಿಮಂಟಪದಲ್ಲಿ ಏರೋ ಶೋ, ಡ್ರೋನ್‌ ಶೋ

ಮೈಸೂರು : ದಸರಾ ಮಹೋತ್ಸವದ ಪ್ರಯುಕ್ತ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆ.೨೭ರಿಂದ ಅ.೨ರವರೆಗೆ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸೆ.೨೭ರಂದು ಸಂಜೆ ೪ಕ್ಕೆ ವೈಮಾನಿಕ ಪ್ರದರ್ಶನ, ಸೆ.೨೮ ಮತ್ತು ೨೯ರಂದು ಸಂಜೆ ೬ಕ್ಕೆ ಡ್ರೋನ್ ಶೋ, ಅ.೧ರಂದು ಸಂಜೆ ೪ಕ್ಕೆ ವೈಮಾನಿಕ ಪ್ರದರ್ಶನ ಮತ್ತು ಪಂಜಿನ ಕವಾಯತು ಪೂರ್ವಾಭ್ಯಾಸ ಕಾರ್ಯಕ್ರಮ, ಅ.೨ರಂದು ಸಂಜೆ ೬ ಗಂಟೆಗೆ ಪಂಜಿನ ಕವಾಯತು ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.

ಬನ್ನಿಮಂಟಪ ಮೈದಾನದಲ್ಲಿನ ಆಸನಗಳ ವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಹಿತದೃಷ್ಟಿಯಿಂದ ಕಾರ್ಯಕ್ರಮ ವೀಕ್ಷಣೆಗೆ ಅನುವಾಗುವಂತೆ ಆಯಾ ದಿನಗಳಿಗೆ ಸೀಮಿತವಾಗಿ ಪಾಸ್‌ಗಳನ್ನು ವಿತರಿಸಲಾಗುವುದು.

ಒಳಾಂಗಣಕ್ಕೆ ಪಾಸ್‌ಗಳನ್ನು ಹೊಂದಿರುವವರಿಗೆ ಮಾತ್ರವೇ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಬನ್ನಿಮಂಟಪದ ಮೈದಾನದ ಮಿತ ಸಾಮರ್ಥ್ಯವನ್ನು ಗಮನದಲ್ಲಿರಿಸಿ ಕೊಂಡು ಪಾಸ್ ಇಲ್ಲದವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

52 mins ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

2 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

2 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

2 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

6 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

6 hours ago