ಮೈಸೂರು : ಬಾನಂಗಳದಲ್ಲಿ ಹಾರುವ ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮತ್ತಷ್ಟು ಕಳೆ ತಂದಿದೆ.
ಗುರುವಾರ ಬನ್ನಿಮಂಟಪ(ಕವಾಯತು) ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವೈಮಾನಿಕ ಪ್ರದರ್ಶನದ ಪೂರ್ವಭ್ಯಾಸದ ರೋಮನಾಚರಣಕಾರಿ ಪ್ರದರ್ಶನವನ್ನು ಕಂಡು ಮೈಸೂರಿನ ಜನತೆ ಕುಣಿದು ಕುಪ್ಪಳಿಸಿದರು.
ಸಾರಂಗ ಕೇಂದ್ರ ವೈಮಾನಿಕ ಪ್ರದರ್ಶನದ 5 ಹೆಲಿಕ್ಯಾಪ್ಟರ್ ಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದು, ಮಿಂಚಿನ ರೀತಿ ಶರವೇಗದಲ್ಲಿ ಹಾರುವ ಪ್ರದರ್ಶನದ ಚಿತ್ತಾರವನ್ನು ಜನ ಕಣ್ತುಂಬಿಕೊಂಡರು.
ಇದನ್ನು ಓದಿ : ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಪಾರಂಪರಿಕ ಸೈಕಲ್ ಸವಾರಿ
ನೀಲಿ ಗಗನದಲ್ಲಿ ಓಲಾಡಿ- ತೇಲಾಡಿದ ಲೋಹದ ಹಕ್ಕಿಗಳು ಬಣ್ಣ ಬಣ್ಣದ ಹೊಗೆಯ ಮೂಲಕ ಹೃದಯ ಬಿಳಿ ಗೆರೆಗಳನ್ನು ಬರೆಯುವುದರ ಮೂಲಕ ರೋಮಾಂಚನಕಾರಿ ದೃಶ್ಯಕ್ಕೆ ಪಾತ್ರವಾದವು.
ಆಗಸದಲ್ಲಿ ಮೈನವಿರೇಳುವ ಮೈಮಾನಿಕ ಪ್ರದರ್ಶನವನ್ನು ಕಂಡು ಪ್ರೇಕ್ಷಕರು ಪುಳಕಿತಗೊಂಡರು. ಅನೇಕ ರೋಮಾಂಚನಕಾರಿ ಅನುಭವಕ್ಕೆ ಇಂದು ನಡೆದ ವೈಮಾನಿಕ ಪ್ರದರ್ಶನ ಸಾಕ್ಷಿಯಾದವು. ಬಾನಂಗಳಕ್ಕೆ ಹೇರಿ ನೆಲಕ್ಕೆ ರಪ್ಪನೆ ಬೀಳುವ ರೀತಿಯಲ್ಲಿ ಪ್ರದರ್ಶನ ನೀಡಿ ನೋಡುಗರನ್ನು ಅಚ್ಚರಿ ಗೊಳಿಸಿದವು.
ಪೂರ್ವಬ್ಯಾಸ ಪ್ರದರ್ಶನಕ್ಕೆ ಇಡೀ ಕವಾಯತು ಮೈದಾನ ಭರ್ತಿ ಆಗಿದ್ದು, ಸೆಪ್ಟೆಂಬರ್ 27 ರಂದು ಸಂಜೆ 5 ಗಂಟೆಗೆ ನಡೆಯುವ ವೈಮಾನಿಕ ಪ್ರದರ್ಶನಕ್ಕೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವೈಮಾನಿಕ ಪ್ರದರ್ಶನ ಕಣ್ತುಂಬಿಕೊಳ್ಳಲು ಮೈಸೂರಿನ ಜನತೆ ಕಾಯುತ್ತಿದ್ದಾರೆ, ಒಟ್ಟಾರೆ ಈ ಬಾರಿಯ ವೈಮಾನಿಕ ಪ್ರದರ್ಶನ ದಸರಾ ಮಹೋತ್ಸವಕ್ಕೆ ಇನ್ನಷ್ಟು ಮೆರುಗನ್ನು ತರಲಿದೆ.
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ…
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಶಾಸಕ…