ನಮ್ಮ ಮೈಸೂರ ದಸರಾ 2025

Mysuru Dasara | ದಸರಾಗೆ ಮತ್ತಷ್ಟು ಮೆರಗು ತಂದ ಏರ್‌ ಶೋ ; ಸಾಹಸಮಯ ಪ್ರದರ್ಶನ

ಮೈಸೂರು : ಬಾನಂಗಳದಲ್ಲಿ ಹಾರುವ ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮತ್ತಷ್ಟು ಕಳೆ ತಂದಿದೆ.

ಗುರುವಾರ ಬನ್ನಿಮಂಟಪ(ಕವಾಯತು) ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವೈಮಾನಿಕ ಪ್ರದರ್ಶನದ ಪೂರ್ವಭ್ಯಾಸದ ರೋಮನಾಚರಣಕಾರಿ ಪ್ರದರ್ಶನವನ್ನು ಕಂಡು ಮೈಸೂರಿನ ಜನತೆ ಕುಣಿದು ಕುಪ್ಪಳಿಸಿದರು.

ಸಾರಂಗ ಕೇಂದ್ರ ವೈಮಾನಿಕ ಪ್ರದರ್ಶನದ 5 ಹೆಲಿಕ್ಯಾಪ್ಟರ್ ಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದು, ಮಿಂಚಿನ ರೀತಿ ಶರವೇಗದಲ್ಲಿ ಹಾರುವ ಪ್ರದರ್ಶನದ ಚಿತ್ತಾರವನ್ನು ಜನ ಕಣ್ತುಂಬಿಕೊಂಡರು.

ಇದನ್ನು ಓದಿ : ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಪಾರಂಪರಿಕ ಸೈಕಲ್ ಸವಾರಿ

ನೀಲಿ ಗಗನದಲ್ಲಿ ಓಲಾಡಿ- ತೇಲಾಡಿದ ಲೋಹದ ಹಕ್ಕಿಗಳು ಬಣ್ಣ ಬಣ್ಣದ ಹೊಗೆಯ ಮೂಲಕ ಹೃದಯ ಬಿಳಿ ಗೆರೆಗಳನ್ನು ಬರೆಯುವುದರ ಮೂಲಕ ರೋಮಾಂಚನಕಾರಿ ದೃಶ್ಯಕ್ಕೆ ಪಾತ್ರವಾದವು.

ಆಗಸದಲ್ಲಿ ಮೈನವಿರೇಳುವ ಮೈಮಾನಿಕ ಪ್ರದರ್ಶನವನ್ನು ಕಂಡು ಪ್ರೇಕ್ಷಕರು ಪುಳಕಿತಗೊಂಡರು. ಅನೇಕ ರೋಮಾಂಚನಕಾರಿ ಅನುಭವಕ್ಕೆ ಇಂದು ನಡೆದ ವೈಮಾನಿಕ ಪ್ರದರ್ಶನ ಸಾಕ್ಷಿಯಾದವು. ಬಾನಂಗಳಕ್ಕೆ ಹೇರಿ ನೆಲಕ್ಕೆ ರಪ್ಪನೆ ಬೀಳುವ ರೀತಿಯಲ್ಲಿ ಪ್ರದರ್ಶನ ನೀಡಿ ನೋಡುಗರನ್ನು ಅಚ್ಚರಿ ಗೊಳಿಸಿದವು.

ಪೂರ್ವಬ್ಯಾಸ ಪ್ರದರ್ಶನಕ್ಕೆ ಇಡೀ ಕವಾಯತು ಮೈದಾನ ಭರ್ತಿ ಆಗಿದ್ದು, ಸೆಪ್ಟೆಂಬರ್ 27 ರಂದು ಸಂಜೆ 5 ಗಂಟೆಗೆ ನಡೆಯುವ ವೈಮಾನಿಕ ಪ್ರದರ್ಶನಕ್ಕೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವೈಮಾನಿಕ ಪ್ರದರ್ಶನ ಕಣ್ತುಂಬಿಕೊಳ್ಳಲು ಮೈಸೂರಿನ ಜನತೆ ಕಾಯುತ್ತಿದ್ದಾರೆ, ಒಟ್ಟಾರೆ ಈ ಬಾರಿಯ ವೈಮಾನಿಕ ಪ್ರದರ್ಶನ ದಸರಾ ಮಹೋತ್ಸವಕ್ಕೆ ಇನ್ನಷ್ಟು ಮೆರುಗನ್ನು ತರಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago