ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | ದಸರಾ ಸಂಭ್ರಮದ ಜತೆಗೆ ಸುರಕ್ಷತೆಗೂ ನಿಗಾವಹಿಸಿ : ಸೆಸ್ಕ್‌ ಮನವಿ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಅಳವಡಿಸಿರುವ ವಿದ್ಯುತ್‌ ದೀಪಾಲಂಕಾರಗಳನ್ನು ಕಣ್ತುಂಬಿಕೊಳ್ಳುವ ಜತೆಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ದಸರಾ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ಮೈಸೂರಿನ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಾಕರ್ಷಕ ವಿದ್ಯುತ್‌ ದೀಪಾಲಂಕಾರ ಮಾಡಲಾಗುತ್ತಿದೆ. ನಗರದ ಸೌಂದರ್ಯ ಹೆಚ್ಚಿಸುವ ಹಾಗೂ ದಸರೆಯ ಸಂಭ್ರಮ, ಸಡಗರವನ್ನು ಇಮ್ಮಡಿಗೊಳಿಸುವ ವಿದ್ಯುತ್‌ ದೀಪಾಲಂಕಾರ ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸುತ್ತಾರೆ. ಆದ್ದರಿಂದ ದೀಪಾಲಂಕಾರದ ಅಂದ ಕಣ್ತುಂಬಿಕೊಳ್ಳುವ ಸಂದರ್ಭದಲ್ಲಿ ಸುರಕ್ಷತೆಗೂ ಆದ್ಯತೆ ನೀಡುವುದು ಅತ್ಯಂತ ಅವಶ್ಯಕವಾಗಿದೆ ಎಂದು ಹೇಳಿದೆ.

ಇದನ್ನು ಓದಿ: ನಾಳೆಯಿಂದ ದಸರಾ ಯುವ ಸಂಭ್ರಮ: ರಾಜ್ಯದ ವಿವಿಧ ಕಾಲೇಜಿನ ತಂಡಗಳು ಭಾಗಿ

ವಿದ್ಯುತ್‌ ಗ್ರಾಹಕರು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುತ್ತಿರುವ ಸೆಸ್ಕ್‌ ವತಿಯಿಂದಲೂ ಸಾಕಷ್ಟು ಸುರಕ್ಷತಾ ಕ್ರಮ ಕೈಗೊಂಡು ದಸರಾ ದೀಪಾಲಂಕಾರ ಮಾಡಲಾಗಿದೆ. ಆದರೂ ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾವಹಿಸುವುದು ಸಾರ್ವಜನಿಕರ ಕರ್ತವ್ಯವಾಗಿದೆ. ಇದಕ್ಕಾಗಿ ನಿಗಮದ ವತಿಯಿಂದ ಸಾರ್ವಜನಿಕರ ಸುರಕ್ಷತೆ ಕೆಲವು ಸಲಹೆಗಳನ್ನು ನೀಡಲಾಗಿದ್ದು, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ದಸರಾ ದೀಪಾಲಂಕಾರದ ಸಂಭ್ರಮವನ್ನು ನಿರಾತಂಕವಾಗಿ ಆನಂದಿಸುವಂತೆ ಸೆಸ್ಕ್‌ ಪ್ರಕಟಣೆಯಲ್ಲಿ ಕೋರಿದೆ.

ಸುರಕ್ಷತಾ ಸಲಹೆಗಳು
• ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳಿ.

• ದೀಪಾಲಂಕಾರದ ಕಂಬಗಳ ಹತ್ತಿರ ನಿಂತು ಫೋಟೋ/ವಿಡಿಯೋ ಶೂಟ್‌ ಮಾಡುವುದನ್ನು ತಪ್ಪಿಸಿ.

• ಮಳೆ ಸಂದರ್ಭದಲ್ಲಿ ವಿದ್ಯುತ್‌/ದೀಪಾಲಂಕಾರದ ಕಂಬಗಳ ಹತ್ತಿರ ಹೋಗದೆ ಎಚ್ಚರವಹಿಸಿ.

• ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರಕ್ಕಾಗಿ ಕಂಬಗಳನ್ನು ಅಳವಡಿಸಿದ್ದು, ಕೆಲವು ಕಡೆಗಳಲ್ಲಿ ದೀಪಾಲಂಕಾರದ ಪ್ರತಿಕೃತಿಗಳನ್ನು ಇರಿಸಲಾಗಿದೆ. ಆದ್ದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಇವುಗಳನ್ನು ಗಮನಿಸಿ ಸುರಕ್ಷಿತವಾಗಿ ಸಂಚರಿಸಲು ಕೋರಲಾಗಿದೆ.

• ವಿದ್ಯುತ್‌ ಸಂಬಂಧಿತ ದೂರು/ದೀಪಾಲಂಕಾರದಿಂದ ತೊಂದರೆ ಆದಲ್ಲಿ 24×7 ಸಹಾಯವಾಣಿ 1912 ಸಂಪರ್ಕಿಸಿ.

ಆಂದೋಲನ ಡೆಸ್ಕ್

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

39 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

12 hours ago