ನಮ್ಮ ಮೈಸೂರ ದಸರಾ 2025

Mysuru Dasara | ಗಾಯಕ ಶ್ರೀಹರ್ಷ ಭಾವಗೀತೆಗೆ ತಲೆದೂಗಿದ ಪ್ರೇಕ್ಷಕರು

ಮೈಸೂರು : ಬಣ್ಣ ಬಣ್ಣಗಳ ವಿದ್ಯುತ್ ಬೆಳಕು, ಕಣ್ಮನ ಸೆಳೆಯುವ ವೇದಿಕೆಯಲ್ಲಿ ಮೈಸೂರಿನ ಶ್ರೀಹರ್ಷ ಹಾಗೂ ರಶ್ಮಿ ಚಿಕ್ಕಮಗಳೂರು ಅವರು ಭಾವಗೀತೆಗಳ ಗಾನಸುಧೆಯ ಮೂಲಕ ನಗರದ ಅಂಬಾವಿಲಾಸ ಅರಮನೆ ಆವರಣದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮ ವೇದಿಕೆಯಲ್ಲಿ ಪ್ರೇಕ್ಷಕರ ಮನತಣಿಸಿದರು.

ಗಾಯಕ ಶ್ರೀ ಹರ್ಷ ಮೈಸೂರು ರಾಜ ಮನೆತನದ ಗೀತೆ ಕಾಯೋ ಶ್ರೀ ಗೌರಿ ಗಾಯನದ ಮೂಲಕ ಪ್ರಾರಂಭಿಸಿ ರಾಷ್ಟ್ರ ಕವಿ ಕುವೆಂಪುರವರ ಬಾ ಇಲ್ಲಿ ಸಂಭವಿಸು ನಿತ್ಯಾವತಾರ, ಎಲ್ಲಿ ಜಾರಿತು ಮನವೂ ಎಲ್ಲೆ ಮೀರಿತು, ನಿಸ್ಸಾರ್ ಅಹಮದ್ ಅವರ ನಿತ್ಯೋತ್ಸವ ತಾಯಿ ನಿತ್ಯೋತ್ಸವ, ಕುರಿಗಳು ಸರ್ ಕುರಿಗಳು, ನರಸಿಂಹ ಸ್ವಾಮಿ ಅವರ ದೀಪವು ನಿನ್ನದೇ ಗಾಳಿಯೂ ನಿನ್ನದೇ, ಜಿ ಪಿ ರಾಜರತ್ನಂ ಹೆಂಡ ಹೆಂಡ್ತಿ ಕನ್ನಡ ಪದದೂಲ್‌ಅವರ ಹೀಗೆ ಹಲವು ಕನ್ನಡ ಸಾಹಿತ್ಯ ಲೋಕದ ಖ್ಯಾತ ಕವಿಗಳ ಭಾವಗೀತೆಗಳನ್ನು ಹಾಡಿ ಎಲ್ಲರನ್ನೂ ಮೂಕ ವಿಸ್ಮಿತರನ್ನಾಗಿಸಿದರು.

ಇದಕ್ಕೂ ಮುನ್ನ ಡಾ.ಮೋಹಿಸಿನ್ ಖಾನ್ ಮತ್ತು ತಂಡದಿಂದ ಸಿತಾರ್ ವಾದನ ನಡೆಯಿತು ಹಾಗೂ ಮೈಸೂರಿನ ವಿದ್ವಾನ್ ರಘು ನಂದನ್ ಹಾಗೂ ಸುಮುಖ ತಂಡದಿಂದ ಕರ್ನಾಟಕ ಶಾಸ್ತ್ರಿಯ ಸಂಗೀತದ ಮೂಲಕ ಪ್ರೇಕ್ಷಕರನ್ನು ತಲೆದೂಗುವಂತೆ ಮಾಡಿದರು.

ಇದನ್ನೂ ಓದಿ:-Mysuru Dasara | ದಸರಾಗೆ ಮತ್ತಷ್ಟು ಮೆರಗು ತಂದ ಏರ್‌ ಶೋ ; ಸಾಹಸಮಯ ಪ್ರದರ್ಶನ

ಇದೇ ವೇಳೆ ಅರಮನೆ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಸಂಪತ್ ಕೃಷ್ಣ ಅಯ್ಯಂಗಾರ್ ದಂಪತಿಗಳಿಗೆ ಸಾಂಸ್ಕ ತಿಕ ಕಾರ್ಯಕ್ರಮ ಉಪ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ ಅವರು, ವಿಧಾನಪರಿಷತ್ ಸದಸ್ಯರಾದ ಶಿವಕುಮಾರ್ ಹಾಗೂ ಉಪ ಸಮಿತಿ ಅಧ್ಯಕ್ಷರು, ಸದಸ್ಯರು ಉಪಸ್ಥಿತಿದ್ದರು.

ರಂಜಿಸಿದ ಶಿವತಾಂಡವ ವೈಭವ ಬಳಿಕ ಮೈಸೂರಿನ ಹೆಸರಾಂತ ಭರತನಾಟ್ಯ ಕಲಾವಿದ ಶ್ರೀಧರ್ ಜೈನ್ ತಂಡದಿಂದ ಶಿವ ತಾಂಡವ ನೃತ್ಯ ಮಾಡಲಾಯಿತು. ಅವರ ನೃತ್ಯಕ್ಕೆ ಇಡೀ ಪ್ರೇಕ್ಷಕರು ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಅಭಿನಂದಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

34 mins ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

51 mins ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

1 hour ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

1 hour ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

1 hour ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

2 hours ago