ನಮ್ಮ ಮೈಸೂರ ದಸರಾ 2025

Mysuru Dasara | ಗಾಯಕ ಶ್ರೀಹರ್ಷ ಭಾವಗೀತೆಗೆ ತಲೆದೂಗಿದ ಪ್ರೇಕ್ಷಕರು

ಮೈಸೂರು : ಬಣ್ಣ ಬಣ್ಣಗಳ ವಿದ್ಯುತ್ ಬೆಳಕು, ಕಣ್ಮನ ಸೆಳೆಯುವ ವೇದಿಕೆಯಲ್ಲಿ ಮೈಸೂರಿನ ಶ್ರೀಹರ್ಷ ಹಾಗೂ ರಶ್ಮಿ ಚಿಕ್ಕಮಗಳೂರು ಅವರು ಭಾವಗೀತೆಗಳ ಗಾನಸುಧೆಯ ಮೂಲಕ ನಗರದ ಅಂಬಾವಿಲಾಸ ಅರಮನೆ ಆವರಣದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮ ವೇದಿಕೆಯಲ್ಲಿ ಪ್ರೇಕ್ಷಕರ ಮನತಣಿಸಿದರು.

ಗಾಯಕ ಶ್ರೀ ಹರ್ಷ ಮೈಸೂರು ರಾಜ ಮನೆತನದ ಗೀತೆ ಕಾಯೋ ಶ್ರೀ ಗೌರಿ ಗಾಯನದ ಮೂಲಕ ಪ್ರಾರಂಭಿಸಿ ರಾಷ್ಟ್ರ ಕವಿ ಕುವೆಂಪುರವರ ಬಾ ಇಲ್ಲಿ ಸಂಭವಿಸು ನಿತ್ಯಾವತಾರ, ಎಲ್ಲಿ ಜಾರಿತು ಮನವೂ ಎಲ್ಲೆ ಮೀರಿತು, ನಿಸ್ಸಾರ್ ಅಹಮದ್ ಅವರ ನಿತ್ಯೋತ್ಸವ ತಾಯಿ ನಿತ್ಯೋತ್ಸವ, ಕುರಿಗಳು ಸರ್ ಕುರಿಗಳು, ನರಸಿಂಹ ಸ್ವಾಮಿ ಅವರ ದೀಪವು ನಿನ್ನದೇ ಗಾಳಿಯೂ ನಿನ್ನದೇ, ಜಿ ಪಿ ರಾಜರತ್ನಂ ಹೆಂಡ ಹೆಂಡ್ತಿ ಕನ್ನಡ ಪದದೂಲ್‌ಅವರ ಹೀಗೆ ಹಲವು ಕನ್ನಡ ಸಾಹಿತ್ಯ ಲೋಕದ ಖ್ಯಾತ ಕವಿಗಳ ಭಾವಗೀತೆಗಳನ್ನು ಹಾಡಿ ಎಲ್ಲರನ್ನೂ ಮೂಕ ವಿಸ್ಮಿತರನ್ನಾಗಿಸಿದರು.

ಇದಕ್ಕೂ ಮುನ್ನ ಡಾ.ಮೋಹಿಸಿನ್ ಖಾನ್ ಮತ್ತು ತಂಡದಿಂದ ಸಿತಾರ್ ವಾದನ ನಡೆಯಿತು ಹಾಗೂ ಮೈಸೂರಿನ ವಿದ್ವಾನ್ ರಘು ನಂದನ್ ಹಾಗೂ ಸುಮುಖ ತಂಡದಿಂದ ಕರ್ನಾಟಕ ಶಾಸ್ತ್ರಿಯ ಸಂಗೀತದ ಮೂಲಕ ಪ್ರೇಕ್ಷಕರನ್ನು ತಲೆದೂಗುವಂತೆ ಮಾಡಿದರು.

ಇದನ್ನೂ ಓದಿ:-Mysuru Dasara | ದಸರಾಗೆ ಮತ್ತಷ್ಟು ಮೆರಗು ತಂದ ಏರ್‌ ಶೋ ; ಸಾಹಸಮಯ ಪ್ರದರ್ಶನ

ಇದೇ ವೇಳೆ ಅರಮನೆ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಸಂಪತ್ ಕೃಷ್ಣ ಅಯ್ಯಂಗಾರ್ ದಂಪತಿಗಳಿಗೆ ಸಾಂಸ್ಕ ತಿಕ ಕಾರ್ಯಕ್ರಮ ಉಪ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ ಅವರು, ವಿಧಾನಪರಿಷತ್ ಸದಸ್ಯರಾದ ಶಿವಕುಮಾರ್ ಹಾಗೂ ಉಪ ಸಮಿತಿ ಅಧ್ಯಕ್ಷರು, ಸದಸ್ಯರು ಉಪಸ್ಥಿತಿದ್ದರು.

ರಂಜಿಸಿದ ಶಿವತಾಂಡವ ವೈಭವ ಬಳಿಕ ಮೈಸೂರಿನ ಹೆಸರಾಂತ ಭರತನಾಟ್ಯ ಕಲಾವಿದ ಶ್ರೀಧರ್ ಜೈನ್ ತಂಡದಿಂದ ಶಿವ ತಾಂಡವ ನೃತ್ಯ ಮಾಡಲಾಯಿತು. ಅವರ ನೃತ್ಯಕ್ಕೆ ಇಡೀ ಪ್ರೇಕ್ಷಕರು ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಅಭಿನಂದಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

6 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

6 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

6 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

6 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

6 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

6 hours ago