ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ರ ಕುಸ್ತಿ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಸ್ತಿಪಟುಗಳಿಗೆ ಬೆನ್ನು ತಟ್ಟುವ ಮೂಲಕ ಚಾಲನೆ ನೀಡಿದರು.
ನಗರದ ಕರ್ನಾಟಕ ವಸ್ತು ಪ್ರದರ್ಶನದ ಪ್ರಾಧಿಕಾರ ಆವರಣ ಡಿ.ದೇವರಾಜು ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಆಯೋಜಿಸಿರುವ ದಸರಾ ಕುಸ್ತಿ ಪಂದ್ಯಾವಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀಕ್ಷಿಸಿ ಕುಸ್ತಿ ಪಟುಗಳಿಗೆ ಪ್ರೋತ್ಸಾಹ ನೀಡಿದರು.
ಮೈಸೂರಿನ ಮಹದೇಪುರ ಪೈಲ್ವಾನ್ ವಿಕಾಸ್ ಹಾಗೂ ದಾವಣಗೆರೆ ಕ್ರೀಡಾನಿಲಯದ ಪೈಲ್ವಾನ್ ಕಿರಣ್ ನಡುವೆ ನಡೆದ 30 ನಿಮಿಷದ ಮೊದಲ ಕುಸ್ತಿಯು ಪೈಪೋಟಿಯಿಂದ ನಡೆಯಿತು. ಅಂತಿಮವಾಗಿ 22 ನಿಮಿಷದಲ್ಲಿ ಪೈಲ್ವಾನ್ ವಿಕಾಸ್ ಜಯಶೀಲರಾದರು.
ಇದನ್ನು ಓದಿ : ಮೈಸೂರು ದಸರಾ ಮಹೋತ್ಸವ: ಆಹಾರ ಮೇಳ ಉದ್ಘಾಟನೆ
ಮಹಿಳಾ ಕುಸ್ತಿ ಪಟುಗಳಾದ ಬೆಂಗಳೂರಿನ ಪುಷ್ಪ ಹಾಗೂ ಬೆಳಗಾವಿಯ ನಂದಿನಿ ನಡುವೆ ನಡೆದ ಕುಸ್ತಿಯಲ್ಲಿ 1 ನಿಮಿಷ 10 ಸೆಕೆಂಡ್ ನಲ್ಲಿ ನಂದಿನಿ ಜಯಗಳಿಸಿದರು. ಅಥಣಿಯ ಪೈಲ್ವಾನ್ ಸುರೇಶ್ ಲಂಕೋಟಿ ಹಾಗೂ ದಾವಣಗೆರೆ ಕ್ರೀಡಾ ನಿಲಯದ ಪೈಲ್ವಾನ್ ಹನುಮಂಥ ವಿಠಲ ಬೇವಿನ ಮರ ನಡುವೆ ಕುಸ್ತಿ ರೋಚಕತೆಯಿಂದ ಕೂಡಿತ್ತು.
ಕಾರ್ಯಕ್ರಮದಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಚಾಮರಾಜ ನಗರ ಲೋಕಸಭಾ ಸದಸ್ಯರಾದ ಸುನೀಲ್ ಬೋಸ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ರವಿಶಂಕರ್ ಡಿ, ಶ್ರೀವತ್ಸ, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಗ್ಯಾರೆಂಟಿ ಯೋಜನೆ ರಾಜ್ಯ ಉಪಾಧ್ಯಕ್ಷರಾದ ಡಾ.ಪುಷ್ಪಾವತಿ ಅಮರನಾಥ್, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್, ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ಸೇರಿದಂತೆ ಇತರರು ಇದ್ದರು
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…