ನಮ್ಮ ಮೈಸೂರ ದಸರಾ 2025

Mysuru dasara | ದಸರಾ ಕುಸ್ತಿ ಪಂದ್ಯಾವಳಿಗೆ ಸಿಎಂ ಚಾಲನೆ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ರ ಕುಸ್ತಿ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಸ್ತಿಪಟುಗಳಿಗೆ ಬೆನ್ನು ತಟ್ಟುವ ಮೂಲಕ ಚಾಲನೆ ನೀಡಿದರು.

ನಗರದ ಕರ್ನಾಟಕ ವಸ್ತು ಪ್ರದರ್ಶನದ ಪ್ರಾಧಿಕಾರ ಆವರಣ ಡಿ.ದೇವರಾಜು ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಆಯೋಜಿಸಿರುವ ದಸರಾ ಕುಸ್ತಿ ಪಂದ್ಯಾವಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀಕ್ಷಿಸಿ ಕುಸ್ತಿ ಪಟುಗಳಿಗೆ ಪ್ರೋತ್ಸಾಹ ನೀಡಿದರು.

ಮೈಸೂರಿನ ಮಹದೇಪುರ ಪೈಲ್ವಾನ್ ವಿಕಾಸ್ ಹಾಗೂ ದಾವಣಗೆರೆ ಕ್ರೀಡಾನಿಲಯದ ಪೈಲ್ವಾನ್ ಕಿರಣ್ ನಡುವೆ ನಡೆದ 30 ನಿಮಿಷದ ಮೊದಲ ಕುಸ್ತಿಯು ಪೈಪೋಟಿಯಿಂದ ನಡೆಯಿತು. ಅಂತಿಮವಾಗಿ 22 ನಿಮಿಷದಲ್ಲಿ ಪೈಲ್ವಾನ್ ವಿಕಾಸ್ ಜಯಶೀಲರಾದರು.

ಇದನ್ನು ಓದಿ : ಮೈಸೂರು ದಸರಾ ಮಹೋತ್ಸವ: ಆಹಾರ ಮೇಳ ಉದ್ಘಾಟನೆ

ಮಹಿಳಾ ಕುಸ್ತಿ ಪಟುಗಳಾದ ಬೆಂಗಳೂರಿನ ಪುಷ್ಪ ಹಾಗೂ ಬೆಳಗಾವಿಯ ನಂದಿನಿ ನಡುವೆ ನಡೆದ ಕುಸ್ತಿಯಲ್ಲಿ 1 ನಿಮಿಷ 10 ಸೆಕೆಂಡ್ ನಲ್ಲಿ ನಂದಿನಿ ಜಯಗಳಿಸಿದರು. ಅಥಣಿಯ ಪೈಲ್ವಾನ್ ಸುರೇಶ್ ಲಂಕೋಟಿ ಹಾಗೂ ದಾವಣಗೆರೆ ಕ್ರೀಡಾ ನಿಲಯದ ಪೈಲ್ವಾನ್ ಹನುಮಂಥ ವಿಠಲ ಬೇವಿನ ಮರ ನಡುವೆ ಕುಸ್ತಿ ರೋಚಕತೆಯಿಂದ ಕೂಡಿತ್ತು.

ಕಾರ್ಯಕ್ರಮದಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಚಾಮರಾಜ ನಗರ ಲೋಕಸಭಾ ಸದಸ್ಯರಾದ ಸುನೀಲ್ ಬೋಸ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ರವಿಶಂಕರ್ ಡಿ, ಶ್ರೀವತ್ಸ, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಗ್ಯಾರೆಂಟಿ ಯೋಜನೆ ರಾಜ್ಯ ಉಪಾಧ್ಯಕ್ಷರಾದ ಡಾ.ಪುಷ್ಪಾವತಿ ಅಮರನಾಥ್, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್, ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ಸೇರಿದಂತೆ ಇತರರು ಇದ್ದರು

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

5 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

5 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

5 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

5 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

5 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago