ನಮ್ಮ ಮೈಸೂರ ದಸರಾ 2025

Mysuru dasara | ದಸರಾ ಆನೆಗಳಿಗೆ ಕಮಾಂಡೋ ಕಾವಲು

ಮೈಸೂರು : ವನ್ಯಜೀವಿ -ಮಾನವ ಸಂಘರ್ಷ ನಿಯಂತ್ರಣದಲ್ಲಿ ಮಾವುತರು ಮತ್ತು ಕಾವಾಡಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರು ಅರಮನೆಯಲ್ಲಿಂದು ಜಂಬೂಸವಾರಿಯ ಪ್ರಧಾನ ಆಕರ್ಷಣೆಯಾದ ದಸರಾ ಆನೆಗಳ ನಿರ್ವಹಣೆಯ ಜವಾಬ್ದಾರಿ ಹೊತ್ತ ಮಾವುತರು ಮತ್ತು ಕಾವಾಡಿಗಳು ಹಾಗೂ ಅವರ ಕುಟುಂಬ ವರ್ಗದವರಿಗೆ ಭೋಜನ ಬಡಿಸುದ ಬಳಿಕ ಮಾತನಾಡಿದ ಅವರು, ಆನೆ ಪಳಗಿಸುವ ಕಲೆಯನ್ನು ವಂಶಪಾರಂಪರ್ಯವಾಗಿ ಕರಗತ ಮಾಡಿಕೊಂಡಿರುವ ಮಾವುತರು ಹಾಗೂ ಕಾವಾಡಿಗಳು ಪುಂಡಾನೆ, ನರಭಕ್ಷಕ ಹುಲಿ ಸೆರೆ ಕಾರ್ಯಾಚರಣೆಗಳಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ ಎಂದರು.

ಇದನ್ನು ಓದಿ :  ವಿಜಯದಶಮಿ ಜಂಬೂಸವಾರಿಗೆ ನಾಲ್ಕು ದಿನ ಬಾಕಿ: ಅರಮನೆ ಆವರಣದಲ್ಲಿ ಭರದ ಸಿದ್ಧತೆ

ಇಡೀ ದೇಶದಲ್ಲಿಯೇ ಆನೆಗಳನ್ನು ಪಳಗಿಸುವಲ್ಲಿ ಕರ್ನಾಟಕದ ಮಾವುತ ಮತ್ತು ಕಾವಾಡಿಗಳಿಗೆ ವಿಶೇಷ ಕೌಶಲ್ಯವಿದೆ ಹೀಗಾಗಿಯೇ ನೆರೆಯ ಆಂಧ್ರಪ್ರದೇಶ, ಗೋವಾ ಮೊದಲಾದ ರಾಜ್ಯಗಳು ಸಹ ಕುಮ್ಕಿ ಆನೆಯ ಸಹಾಯಕ್ಕೆ ರಾಜ್ಯಕ್ಕೆ ಮನವಿ ಮಾಡುತ್ತವೆ ಎಂದರು.

ಮಾವುತರು ಮತ್ತು ಕಾವಾಡಿಗಳಿಗೆ ಆನೆಗಳನ್ನು ಸೆರೆ ಹಿಡಿಯುವ ಮತ್ತು ಪಳಗಿಸುವ, ನಿಯಂತ್ರಿಸುವ, ಪಾಲನೆ ಹಾಗೂ ಪೋಷಣೆ ಮಾಡುವ ಕಲೆ ರಕ್ತಗತವಾಗಿ ಬಂದಿದೆ. ಈ ಕಲೆಯನ್ನು ಪಠ್ಯ ಪುಸ್ತಕದಿಂದ ಅಥವಾ ಶಾಲಾ-ಕಾಲೇಜಿನಲ್ಲಿ ಕಲಿ ಸಲುಸಾಧ್ಯವಿಲ್ಲ ಎಂದ ಈಶ್ವರ ಖಂಡ್ರೆ, ನಮ್ಮ ರಾಜ್ಯದ ಮಾವುತರು ಹಾಗೂ ಕಾವಾಡಿಗಳಿಗೆ ವಂಶಪಾರಂಪರ್ಯವಾಗಿ ಕೌಶಲ್ಯವಿದ್ದರೂ, ಅವರಿಗೆ ತಜ್ಞರಿಂದ ವೃತ್ತಿ ತರಬೇತಿಯನ್ನೂ ಕೊಡಿಸಲಾಗುತ್ತಿದ್ದು, ಇದು ಅವರ ನೈಪುಣ್ಯತೆಯನ್ನು ಮತ್ತಷ್ಟು ಹೆಚ್ಚಿಸುತ್ತಿದೆ ಎಂದರು.

ಮಾವುತರು, ಕಾವಾಡಿಗಳ ನ್ಯಾಯಯುತ ಬೇಡಿಕೆಯ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವ ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

5 hours ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

5 hours ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

5 hours ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

6 hours ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

9 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

9 hours ago