ನಮ್ಮ ಮೈಸೂರ ದಸರಾ 2025

Mysuru dasara | ದಸರಾ ಆನೆಗಳಿಗೆ ಕಮಾಂಡೋ ಕಾವಲು

ಮೈಸೂರು : ವನ್ಯಜೀವಿ -ಮಾನವ ಸಂಘರ್ಷ ನಿಯಂತ್ರಣದಲ್ಲಿ ಮಾವುತರು ಮತ್ತು ಕಾವಾಡಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರು ಅರಮನೆಯಲ್ಲಿಂದು ಜಂಬೂಸವಾರಿಯ ಪ್ರಧಾನ ಆಕರ್ಷಣೆಯಾದ ದಸರಾ ಆನೆಗಳ ನಿರ್ವಹಣೆಯ ಜವಾಬ್ದಾರಿ ಹೊತ್ತ ಮಾವುತರು ಮತ್ತು ಕಾವಾಡಿಗಳು ಹಾಗೂ ಅವರ ಕುಟುಂಬ ವರ್ಗದವರಿಗೆ ಭೋಜನ ಬಡಿಸುದ ಬಳಿಕ ಮಾತನಾಡಿದ ಅವರು, ಆನೆ ಪಳಗಿಸುವ ಕಲೆಯನ್ನು ವಂಶಪಾರಂಪರ್ಯವಾಗಿ ಕರಗತ ಮಾಡಿಕೊಂಡಿರುವ ಮಾವುತರು ಹಾಗೂ ಕಾವಾಡಿಗಳು ಪುಂಡಾನೆ, ನರಭಕ್ಷಕ ಹುಲಿ ಸೆರೆ ಕಾರ್ಯಾಚರಣೆಗಳಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ ಎಂದರು.

ಇದನ್ನು ಓದಿ :  ವಿಜಯದಶಮಿ ಜಂಬೂಸವಾರಿಗೆ ನಾಲ್ಕು ದಿನ ಬಾಕಿ: ಅರಮನೆ ಆವರಣದಲ್ಲಿ ಭರದ ಸಿದ್ಧತೆ

ಇಡೀ ದೇಶದಲ್ಲಿಯೇ ಆನೆಗಳನ್ನು ಪಳಗಿಸುವಲ್ಲಿ ಕರ್ನಾಟಕದ ಮಾವುತ ಮತ್ತು ಕಾವಾಡಿಗಳಿಗೆ ವಿಶೇಷ ಕೌಶಲ್ಯವಿದೆ ಹೀಗಾಗಿಯೇ ನೆರೆಯ ಆಂಧ್ರಪ್ರದೇಶ, ಗೋವಾ ಮೊದಲಾದ ರಾಜ್ಯಗಳು ಸಹ ಕುಮ್ಕಿ ಆನೆಯ ಸಹಾಯಕ್ಕೆ ರಾಜ್ಯಕ್ಕೆ ಮನವಿ ಮಾಡುತ್ತವೆ ಎಂದರು.

ಮಾವುತರು ಮತ್ತು ಕಾವಾಡಿಗಳಿಗೆ ಆನೆಗಳನ್ನು ಸೆರೆ ಹಿಡಿಯುವ ಮತ್ತು ಪಳಗಿಸುವ, ನಿಯಂತ್ರಿಸುವ, ಪಾಲನೆ ಹಾಗೂ ಪೋಷಣೆ ಮಾಡುವ ಕಲೆ ರಕ್ತಗತವಾಗಿ ಬಂದಿದೆ. ಈ ಕಲೆಯನ್ನು ಪಠ್ಯ ಪುಸ್ತಕದಿಂದ ಅಥವಾ ಶಾಲಾ-ಕಾಲೇಜಿನಲ್ಲಿ ಕಲಿ ಸಲುಸಾಧ್ಯವಿಲ್ಲ ಎಂದ ಈಶ್ವರ ಖಂಡ್ರೆ, ನಮ್ಮ ರಾಜ್ಯದ ಮಾವುತರು ಹಾಗೂ ಕಾವಾಡಿಗಳಿಗೆ ವಂಶಪಾರಂಪರ್ಯವಾಗಿ ಕೌಶಲ್ಯವಿದ್ದರೂ, ಅವರಿಗೆ ತಜ್ಞರಿಂದ ವೃತ್ತಿ ತರಬೇತಿಯನ್ನೂ ಕೊಡಿಸಲಾಗುತ್ತಿದ್ದು, ಇದು ಅವರ ನೈಪುಣ್ಯತೆಯನ್ನು ಮತ್ತಷ್ಟು ಹೆಚ್ಚಿಸುತ್ತಿದೆ ಎಂದರು.

ಮಾವುತರು, ಕಾವಾಡಿಗಳ ನ್ಯಾಯಯುತ ಬೇಡಿಕೆಯ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವ ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಜೆಫ್ರಿ ಜತೆ ಸಂಪರ್ಕ : ಬ್ರಿಟನ್‌ ಮಾಜಿ ರಾಜಕುಮಾರ ಆ್ಯಂಡ್ರೂ ಬಂಧನ

ಲಂಡನ್ : ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್‌ಬ್ಯಾಟನ್-ವಿಂಡ್ಸರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಲೈಂಗಿಕ ಅಪರಾಧಿ…

32 mins ago

ಕೂಡುಮಂಗಳೂರು | ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಅಪಘಾತ : ಸವಾರ ಸಾವು, ಪತ್ನಿ ಗಂಭೀರ

ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ,…

47 mins ago

ಸಫಾರಿ ಪುನರಾರಂಭ : ಮೈಸೂರು ಅರಣ್ಯಭವನಕ್ಕೆ ರೈತ ಮುಖಂಡರ ಮುತ್ತಿಗೆ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ…

1 hour ago

32 ಕ್ಷೇತ್ರಗಳ ಟಾರ್ಗೆಟ್‌: ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು 2ನೇ ಹಂತದ…

3 hours ago

1.60 ಕೋಟಿ ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಬಡ್ತಿ: ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…

3 hours ago

ಫೆಬ್ರವರಿ.25ರಂದು ಅಜ್ಜಿಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ: ಬಡಗಲಪುರ ನಾಗೇಂದ್ರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…

3 hours ago