ಮೈಸೂರು : ವನ್ಯಜೀವಿ -ಮಾನವ ಸಂಘರ್ಷ ನಿಯಂತ್ರಣದಲ್ಲಿ ಮಾವುತರು ಮತ್ತು ಕಾವಾಡಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
ಮೈಸೂರು ಅರಮನೆಯಲ್ಲಿಂದು ಜಂಬೂಸವಾರಿಯ ಪ್ರಧಾನ ಆಕರ್ಷಣೆಯಾದ ದಸರಾ ಆನೆಗಳ ನಿರ್ವಹಣೆಯ ಜವಾಬ್ದಾರಿ ಹೊತ್ತ ಮಾವುತರು ಮತ್ತು ಕಾವಾಡಿಗಳು ಹಾಗೂ ಅವರ ಕುಟುಂಬ ವರ್ಗದವರಿಗೆ ಭೋಜನ ಬಡಿಸುದ ಬಳಿಕ ಮಾತನಾಡಿದ ಅವರು, ಆನೆ ಪಳಗಿಸುವ ಕಲೆಯನ್ನು ವಂಶಪಾರಂಪರ್ಯವಾಗಿ ಕರಗತ ಮಾಡಿಕೊಂಡಿರುವ ಮಾವುತರು ಹಾಗೂ ಕಾವಾಡಿಗಳು ಪುಂಡಾನೆ, ನರಭಕ್ಷಕ ಹುಲಿ ಸೆರೆ ಕಾರ್ಯಾಚರಣೆಗಳಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ ಎಂದರು.
ಇದನ್ನು ಓದಿ : ವಿಜಯದಶಮಿ ಜಂಬೂಸವಾರಿಗೆ ನಾಲ್ಕು ದಿನ ಬಾಕಿ: ಅರಮನೆ ಆವರಣದಲ್ಲಿ ಭರದ ಸಿದ್ಧತೆ
ಇಡೀ ದೇಶದಲ್ಲಿಯೇ ಆನೆಗಳನ್ನು ಪಳಗಿಸುವಲ್ಲಿ ಕರ್ನಾಟಕದ ಮಾವುತ ಮತ್ತು ಕಾವಾಡಿಗಳಿಗೆ ವಿಶೇಷ ಕೌಶಲ್ಯವಿದೆ ಹೀಗಾಗಿಯೇ ನೆರೆಯ ಆಂಧ್ರಪ್ರದೇಶ, ಗೋವಾ ಮೊದಲಾದ ರಾಜ್ಯಗಳು ಸಹ ಕುಮ್ಕಿ ಆನೆಯ ಸಹಾಯಕ್ಕೆ ರಾಜ್ಯಕ್ಕೆ ಮನವಿ ಮಾಡುತ್ತವೆ ಎಂದರು.
ಮಾವುತರು ಮತ್ತು ಕಾವಾಡಿಗಳಿಗೆ ಆನೆಗಳನ್ನು ಸೆರೆ ಹಿಡಿಯುವ ಮತ್ತು ಪಳಗಿಸುವ, ನಿಯಂತ್ರಿಸುವ, ಪಾಲನೆ ಹಾಗೂ ಪೋಷಣೆ ಮಾಡುವ ಕಲೆ ರಕ್ತಗತವಾಗಿ ಬಂದಿದೆ. ಈ ಕಲೆಯನ್ನು ಪಠ್ಯ ಪುಸ್ತಕದಿಂದ ಅಥವಾ ಶಾಲಾ-ಕಾಲೇಜಿನಲ್ಲಿ ಕಲಿ ಸಲುಸಾಧ್ಯವಿಲ್ಲ ಎಂದ ಈಶ್ವರ ಖಂಡ್ರೆ, ನಮ್ಮ ರಾಜ್ಯದ ಮಾವುತರು ಹಾಗೂ ಕಾವಾಡಿಗಳಿಗೆ ವಂಶಪಾರಂಪರ್ಯವಾಗಿ ಕೌಶಲ್ಯವಿದ್ದರೂ, ಅವರಿಗೆ ತಜ್ಞರಿಂದ ವೃತ್ತಿ ತರಬೇತಿಯನ್ನೂ ಕೊಡಿಸಲಾಗುತ್ತಿದ್ದು, ಇದು ಅವರ ನೈಪುಣ್ಯತೆಯನ್ನು ಮತ್ತಷ್ಟು ಹೆಚ್ಚಿಸುತ್ತಿದೆ ಎಂದರು.
ಮಾವುತರು, ಕಾವಾಡಿಗಳ ನ್ಯಾಯಯುತ ಬೇಡಿಕೆಯ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವ ಭರವಸೆ ನೀಡಿದರು.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…