ನಮ್ಮ ಮೈಸೂರ ದಸರಾ 2025

Mysuru dasara | ದಸರಾ ಆನೆಗಳಿಗೆ ಕಮಾಂಡೋ ಕಾವಲು

ಮೈಸೂರು : ವನ್ಯಜೀವಿ -ಮಾನವ ಸಂಘರ್ಷ ನಿಯಂತ್ರಣದಲ್ಲಿ ಮಾವುತರು ಮತ್ತು ಕಾವಾಡಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರು ಅರಮನೆಯಲ್ಲಿಂದು ಜಂಬೂಸವಾರಿಯ ಪ್ರಧಾನ ಆಕರ್ಷಣೆಯಾದ ದಸರಾ ಆನೆಗಳ ನಿರ್ವಹಣೆಯ ಜವಾಬ್ದಾರಿ ಹೊತ್ತ ಮಾವುತರು ಮತ್ತು ಕಾವಾಡಿಗಳು ಹಾಗೂ ಅವರ ಕುಟುಂಬ ವರ್ಗದವರಿಗೆ ಭೋಜನ ಬಡಿಸುದ ಬಳಿಕ ಮಾತನಾಡಿದ ಅವರು, ಆನೆ ಪಳಗಿಸುವ ಕಲೆಯನ್ನು ವಂಶಪಾರಂಪರ್ಯವಾಗಿ ಕರಗತ ಮಾಡಿಕೊಂಡಿರುವ ಮಾವುತರು ಹಾಗೂ ಕಾವಾಡಿಗಳು ಪುಂಡಾನೆ, ನರಭಕ್ಷಕ ಹುಲಿ ಸೆರೆ ಕಾರ್ಯಾಚರಣೆಗಳಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ ಎಂದರು.

ಇದನ್ನು ಓದಿ :  ವಿಜಯದಶಮಿ ಜಂಬೂಸವಾರಿಗೆ ನಾಲ್ಕು ದಿನ ಬಾಕಿ: ಅರಮನೆ ಆವರಣದಲ್ಲಿ ಭರದ ಸಿದ್ಧತೆ

ಇಡೀ ದೇಶದಲ್ಲಿಯೇ ಆನೆಗಳನ್ನು ಪಳಗಿಸುವಲ್ಲಿ ಕರ್ನಾಟಕದ ಮಾವುತ ಮತ್ತು ಕಾವಾಡಿಗಳಿಗೆ ವಿಶೇಷ ಕೌಶಲ್ಯವಿದೆ ಹೀಗಾಗಿಯೇ ನೆರೆಯ ಆಂಧ್ರಪ್ರದೇಶ, ಗೋವಾ ಮೊದಲಾದ ರಾಜ್ಯಗಳು ಸಹ ಕುಮ್ಕಿ ಆನೆಯ ಸಹಾಯಕ್ಕೆ ರಾಜ್ಯಕ್ಕೆ ಮನವಿ ಮಾಡುತ್ತವೆ ಎಂದರು.

ಮಾವುತರು ಮತ್ತು ಕಾವಾಡಿಗಳಿಗೆ ಆನೆಗಳನ್ನು ಸೆರೆ ಹಿಡಿಯುವ ಮತ್ತು ಪಳಗಿಸುವ, ನಿಯಂತ್ರಿಸುವ, ಪಾಲನೆ ಹಾಗೂ ಪೋಷಣೆ ಮಾಡುವ ಕಲೆ ರಕ್ತಗತವಾಗಿ ಬಂದಿದೆ. ಈ ಕಲೆಯನ್ನು ಪಠ್ಯ ಪುಸ್ತಕದಿಂದ ಅಥವಾ ಶಾಲಾ-ಕಾಲೇಜಿನಲ್ಲಿ ಕಲಿ ಸಲುಸಾಧ್ಯವಿಲ್ಲ ಎಂದ ಈಶ್ವರ ಖಂಡ್ರೆ, ನಮ್ಮ ರಾಜ್ಯದ ಮಾವುತರು ಹಾಗೂ ಕಾವಾಡಿಗಳಿಗೆ ವಂಶಪಾರಂಪರ್ಯವಾಗಿ ಕೌಶಲ್ಯವಿದ್ದರೂ, ಅವರಿಗೆ ತಜ್ಞರಿಂದ ವೃತ್ತಿ ತರಬೇತಿಯನ್ನೂ ಕೊಡಿಸಲಾಗುತ್ತಿದ್ದು, ಇದು ಅವರ ನೈಪುಣ್ಯತೆಯನ್ನು ಮತ್ತಷ್ಟು ಹೆಚ್ಚಿಸುತ್ತಿದೆ ಎಂದರು.

ಮಾವುತರು, ಕಾವಾಡಿಗಳ ನ್ಯಾಯಯುತ ಬೇಡಿಕೆಯ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವ ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

4 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

4 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

4 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

4 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

4 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago