ನಮ್ಮ ಮೈಸೂರ ದಸರಾ 2025

Mysuru Dasara | ದಸರಾ ಪುಸ್ತಕ ಮೇಳಕ್ಕೆ ಚಾಲನೆ

ಮೈಸೂರು : ವಿವಿಧ ವಿಷಯ, ಭಾಷೆ ಹಾಗೂ ಸಾಹಿತ್ಯ ಪ್ರಕಾರಗಳನ್ನೊಳಗೊಂಡ ಪುಸಕ್ತಗಳು ಒಂದೇ ಸೂರಿನಡಿ ಅನಾವರಣಗೊಳ್ಳವ ದಸಾರ ಪುಸ್ತಕ ಮೇಳಕ್ಕೆ ಕನ್ನಡ ಮತ್ತು ಸಂಸ್ಕ ತಿ ಇಲಾಖೆಯ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಚಾಲನೆ ನೀಡಿದರು.

ದಸರಾ ಮಹೋತ್ಸವ ಅಂಗವಾಗಿ ಕನ್ನಡ ಮತ್ತು ಸಂಸ್ಕ ತಿ ಇಲಾಖೆ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ನಗರದ ಭಾರತ್ ಸೈಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ಹಮ್ಮಿಕೊಂಡಿರುವ ಪುಸ್ತಕ ಮೇಳವನ್ನು ಸಚಿವರು ಉದ್ಘಾಟಿಸಿದರು.

ಬಾನು ಮುಸ್ತಾಕ್ ಬದುಕು ಬರಹ ಕೃತಿ ಬಿಡುಗಡೆ
ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ಬಿ.ಶಿವಾನಂದ್ ಆವರು ರಚಿಸಿರುವ ‘ಬುಕರ್ ಬಾನು’ ಬಾನು ಮುಷ್ತಾಕರ ಬದುಕು ಬರಹ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ ಆವರು ಬಿಡುಗಡೆಗೊಳಿಸಿದರು.

ಇದನ್ನೂ ಓದಿ:-https://andolana.in/mysore-dasara-2025/mysuru-dasara-cm-inaugurates-the-dasara-wrestling-tournament/

ರಿಯಾಯಿತಿ:
ಪುಸ್ತಕ ಮೇಳದಲ್ಲಿ ಭಾಗವಹಿಸುವ ಪ್ರಕಾಶನಗಳು ವಿಶೇಷ ರಿಯಾಯಿತಿ ನೀಡಿವೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಸಾರದ ಪುಸ್ತಕಗಳಿಗೆ ೫೦% ರಿಯಾಯಿತಿ ನೀಡಿವೆ. ಶ್ರವಣ ಬೆಳಗೊಳದ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಪ್ರಕಾಶನವು ೨೦% ರಿಯಾಯಿತಿ ನೀಡಿವೆ. ಅಲ್ಲದೆ ಉಳಿದ ಪ್ರಕಾಶನಗಳು ಅವರದೇ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ನೀಡುತ್ತೇವೆ. ರಾಜಕೀಯ ಆಸಕ್ತರಿಗೆ ನರೇಂದ್ರ ಮೋದಿ ಯಾರೂ ತುಳಿಯದ ಹಾದಿ, ಸದನದಲ್ಲಿ ಸಿದ್ಧರಾಮಯ್ಯ ಸೇರಿದಂತೆ , ಮಹಿಳೆಯರಿಗಾಗಿ ರುಚಿಕರ ವಿವಿಧ ಖಾದ್ಯಗಳನ್ನು ವಿವಿರಿಸುವ ಪುಸ್ತಕಗಳು, ಪುರಾಣ ಕಥೆಗಳು, ಮಕ್ಕಳ ಕಥೆಗಳು, ಸಾಮಾಜಿಕ ಕ್ರಾಂತಿ, ಗಾಂದಿಜೀ, ಅಂಬೇಡ್ಕರ್ ಮುಂತಾದ ಪುಸ್ತಕಗಳು ಸಾಹಿತ್ಯಕ್ತರನ್ನು ಕೈ ಬಿಸಿ ಕರೆಯುತ್ತಿವೆ.

93 ಮಳಿಗೆಗಳು
ನಾಡಿನ ಹೆಸರಾಂತ ಪ್ರಕಾಶನ ಸಂಸ್ಥೆಗಳು ದಸರಾ ಪುಸ್ತಕ ಮೇಳದಲ್ಲಿ ಭಾಗವಿಸಿವೆ. ಚೇತನ ಚಿತ್ತಾರ ಮೈಸೂರು, ಸ್ನೇಹ ಬುಕ್ ಹೌಸ್ ಮೈಸೂರು, ಅನುಷಾ ಬುಕ್ ಸ್ಟೋರ್ ಬೆಂಗಳೂರು, ಬುಕ್ಸ್ ಲೋಕ ಮೈಸೂರು, ಆರ್ಯ ಸಮಾಜ ನೇರಳೆ ಕಟ್ಟೆ ದಕ್ಷಿಣ ಕನ್ನಡ, ರೂಪಶ್ರೀ ಪ್ರಕಾಶನ ಮೈಸೂರು ಸೇರಿದಂತೆ 93 ಪ್ರಕಾಶನಗಳು ಮೇಳದಲ್ಲಿವೆ.

ಆಂದೋಲನ ಡೆಸ್ಕ್

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

7 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago