ಮೈಸೂರು : ವಿವಿಧ ವಿಷಯ, ಭಾಷೆ ಹಾಗೂ ಸಾಹಿತ್ಯ ಪ್ರಕಾರಗಳನ್ನೊಳಗೊಂಡ ಪುಸಕ್ತಗಳು ಒಂದೇ ಸೂರಿನಡಿ ಅನಾವರಣಗೊಳ್ಳವ ದಸಾರ ಪುಸ್ತಕ ಮೇಳಕ್ಕೆ ಕನ್ನಡ ಮತ್ತು ಸಂಸ್ಕ ತಿ ಇಲಾಖೆಯ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಚಾಲನೆ ನೀಡಿದರು.
ದಸರಾ ಮಹೋತ್ಸವ ಅಂಗವಾಗಿ ಕನ್ನಡ ಮತ್ತು ಸಂಸ್ಕ ತಿ ಇಲಾಖೆ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ನಗರದ ಭಾರತ್ ಸೈಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ಹಮ್ಮಿಕೊಂಡಿರುವ ಪುಸ್ತಕ ಮೇಳವನ್ನು ಸಚಿವರು ಉದ್ಘಾಟಿಸಿದರು.
ಬಾನು ಮುಸ್ತಾಕ್ ಬದುಕು ಬರಹ ಕೃತಿ ಬಿಡುಗಡೆ
ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ ಬಿ.ಶಿವಾನಂದ್ ಆವರು ರಚಿಸಿರುವ ‘ಬುಕರ್ ಬಾನು’ ಬಾನು ಮುಷ್ತಾಕರ ಬದುಕು ಬರಹ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ ಆವರು ಬಿಡುಗಡೆಗೊಳಿಸಿದರು.
ಇದನ್ನೂ ಓದಿ:-https://andolana.in/mysore-dasara-2025/mysuru-dasara-cm-inaugurates-the-dasara-wrestling-tournament/
ರಿಯಾಯಿತಿ:
ಪುಸ್ತಕ ಮೇಳದಲ್ಲಿ ಭಾಗವಹಿಸುವ ಪ್ರಕಾಶನಗಳು ವಿಶೇಷ ರಿಯಾಯಿತಿ ನೀಡಿವೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಸಾರದ ಪುಸ್ತಕಗಳಿಗೆ ೫೦% ರಿಯಾಯಿತಿ ನೀಡಿವೆ. ಶ್ರವಣ ಬೆಳಗೊಳದ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಪ್ರಕಾಶನವು ೨೦% ರಿಯಾಯಿತಿ ನೀಡಿವೆ. ಅಲ್ಲದೆ ಉಳಿದ ಪ್ರಕಾಶನಗಳು ಅವರದೇ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ನೀಡುತ್ತೇವೆ. ರಾಜಕೀಯ ಆಸಕ್ತರಿಗೆ ನರೇಂದ್ರ ಮೋದಿ ಯಾರೂ ತುಳಿಯದ ಹಾದಿ, ಸದನದಲ್ಲಿ ಸಿದ್ಧರಾಮಯ್ಯ ಸೇರಿದಂತೆ , ಮಹಿಳೆಯರಿಗಾಗಿ ರುಚಿಕರ ವಿವಿಧ ಖಾದ್ಯಗಳನ್ನು ವಿವಿರಿಸುವ ಪುಸ್ತಕಗಳು, ಪುರಾಣ ಕಥೆಗಳು, ಮಕ್ಕಳ ಕಥೆಗಳು, ಸಾಮಾಜಿಕ ಕ್ರಾಂತಿ, ಗಾಂದಿಜೀ, ಅಂಬೇಡ್ಕರ್ ಮುಂತಾದ ಪುಸ್ತಕಗಳು ಸಾಹಿತ್ಯಕ್ತರನ್ನು ಕೈ ಬಿಸಿ ಕರೆಯುತ್ತಿವೆ.
93 ಮಳಿಗೆಗಳು
ನಾಡಿನ ಹೆಸರಾಂತ ಪ್ರಕಾಶನ ಸಂಸ್ಥೆಗಳು ದಸರಾ ಪುಸ್ತಕ ಮೇಳದಲ್ಲಿ ಭಾಗವಿಸಿವೆ. ಚೇತನ ಚಿತ್ತಾರ ಮೈಸೂರು, ಸ್ನೇಹ ಬುಕ್ ಹೌಸ್ ಮೈಸೂರು, ಅನುಷಾ ಬುಕ್ ಸ್ಟೋರ್ ಬೆಂಗಳೂರು, ಬುಕ್ಸ್ ಲೋಕ ಮೈಸೂರು, ಆರ್ಯ ಸಮಾಜ ನೇರಳೆ ಕಟ್ಟೆ ದಕ್ಷಿಣ ಕನ್ನಡ, ರೂಪಶ್ರೀ ಪ್ರಕಾಶನ ಮೈಸೂರು ಸೇರಿದಂತೆ 93 ಪ್ರಕಾಶನಗಳು ಮೇಳದಲ್ಲಿವೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…