ನಮ್ಮ ಮೈಸೂರ ದಸರಾ 2025

Mysuru dasara | ದಸರಾ ಚಲನಚಿತ್ರೋತ್ಸವ : ಕಿರುಚಿತ್ರಗಳಿಗೆ ಪ್ರಶಸ್ತಿ ಪ್ರದಾನ

ಮೈಸೂರು : ಮೈಸೂರು ದಸರಾ ಮಹೋತ್ಸವ – 2025ರ ಹಿನ್ನೆಲೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಮಲ್ಟಿಫ್ಲೆಕ್ಸ್ ಚಿತ್ರಮಂದಿರದಲ್ಲಿ ದಸರಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡ ಕಿರುಚಿತ್ರಗಳಿಗೆ ಗುರುವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸುತನ್ ನಿರ್ದೇಶನದ ಲಕುಮಿ ಕಿರುಚಿತ್ರಕ್ಕೆ ಪ್ರಥಮ ಬಹುಮಾನ ಹಾಗೂ 20 ಸಾವಿರ ರೂ.ಗಳ ಗೌರವಧನ, ಮಣಿಕಂಠ ನಿರ್ದೇಶನದ ಹಿಂಬಾಲಿಸು ಚಿತ್ರಕ್ಕೆ ಎರಡನೇ ಬಹುಮಾನ ಹಾಗೂ 15 ಸಾವಿರ ರೂ.ಗಳ ಗೌರವಧನ ಮತ್ತು ಶಶಿಕುಮಾರ್ ಡಿ ಎಸ್ ನಿರ್ದೇಶನದ ಹಬ್ಬದ ಹಸಿವು ಚಿತ್ರಕ್ಕೆ ಮೂರನೇ ಬಹುಮಾನ ಹಾಗೂ 10 ಸಾವಿರ ರೂ.ಗಳ ಗೌರವಧನ ನೀಡಲಾಯಿತು. ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಲಕುಮಿ ಹಾಗೂ ಅತ್ಯುತ್ತಮ ಸಂಕಲನಕಗಾರ ವಿಭಾಗದಲ್ಲಿ ಹಿಂಬಾಲಿಸು ಕಿರುಚಿತ್ರಕ್ಕೆ ಪ್ರಶಸ್ತಿ ದೊರೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಿರುತೆರೆ ನಟಿ ದೀಪಾ ರವಿಶಂಕರ್ ಅವರು ಮಾತನಾಡಿ, ಪ್ರಶಸ್ತಿ ಸಿಗದವರು ಬೇಸರಗೊಳ್ಳಬೇಡಿ, ಕಡಿಮೆ ಸಮಯದಲ್ಲಿ ಒಂದು ಸಂದೇಶ ಸಾರುವ ಕಿರುಚಿತ್ರ ಮಾಡುವುದು ಕಮರ್ಷಿಯಲ್ ಸಿನಿಮಾಗಿಂತ ಕಷ್ಟಕರ ಹಾಗೂ ಇದಕ್ಕೆ ಶ್ರಧ್ದೆ ಬಹಳ ಮುಖ್ಯವಾಗಿರುತ್ತದೆ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಇನ್ನೂ ಹೆಚ್ಚೆಚ್ಚು ಕಿರುಚಿತ್ರಗಳನ್ನು ಮಾಡಿ ಎಂದು ಹೊಸಬರಿಗೆ ಸಲಹೆ ನೀಡಿದರು.

ಈ ವೇಳೆ ಮುಖ್ಯ ಅತಿಥಿಗಳಾದ ಕಿರುತೆರೆ ನಟಿ ದೀಪಾ ರವಿಶಂಕರ್ , ಕಿರುತೆರೆ ನಟ ಅಶ್ವಿನ್ ಕುಮಾರ್ ಹಾಗೂ ಹಿರಿಯ ಛಾಯಾಗ್ರಾಹಕ ಅಶ್ವತ್ ನಾರಾಯಣ ಅವರನ್ನು ಉಪ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಚಲನಚಿತ್ರ ಉಪ ಸಮಿತಿ ಉಪ ಅಧ್ಯಕ್ಷರಾದ ಸಿದ್ಧರಾಜು, ವಿಶೇಷಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ವಿಜಯ್ ಕುಮಾರ್, ತೀರ್ಪುಗಾರರಾದ ಕಾವಾ ಕಾಲೇಜಿನ ಪ್ರಾಧ್ಯಾಪಕರಾದ ಚರಿತಾ, EMMRC ತಂತ್ರಜ್ಞರಾದ ಗೋಪಿನಾಥ್ ಹಾಗೂ ಉಪ ಸಮಿತಿ ಉಪಾಧ್ಯಕ್ಷರು ಮತ್ತು ಸದಸ್ಯರು ಇದ್ದರು.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

8 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

8 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

9 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

9 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

9 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

10 hours ago