ನಮ್ಮ ಮೈಸೂರ ದಸರಾ 2025

Mysuru dasara | ದಸರಾ ಚಲನಚಿತ್ರೋತ್ಸವ : ಕಿರುಚಿತ್ರಗಳಿಗೆ ಪ್ರಶಸ್ತಿ ಪ್ರದಾನ

ಮೈಸೂರು : ಮೈಸೂರು ದಸರಾ ಮಹೋತ್ಸವ – 2025ರ ಹಿನ್ನೆಲೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಮಲ್ಟಿಫ್ಲೆಕ್ಸ್ ಚಿತ್ರಮಂದಿರದಲ್ಲಿ ದಸರಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡ ಕಿರುಚಿತ್ರಗಳಿಗೆ ಗುರುವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸುತನ್ ನಿರ್ದೇಶನದ ಲಕುಮಿ ಕಿರುಚಿತ್ರಕ್ಕೆ ಪ್ರಥಮ ಬಹುಮಾನ ಹಾಗೂ 20 ಸಾವಿರ ರೂ.ಗಳ ಗೌರವಧನ, ಮಣಿಕಂಠ ನಿರ್ದೇಶನದ ಹಿಂಬಾಲಿಸು ಚಿತ್ರಕ್ಕೆ ಎರಡನೇ ಬಹುಮಾನ ಹಾಗೂ 15 ಸಾವಿರ ರೂ.ಗಳ ಗೌರವಧನ ಮತ್ತು ಶಶಿಕುಮಾರ್ ಡಿ ಎಸ್ ನಿರ್ದೇಶನದ ಹಬ್ಬದ ಹಸಿವು ಚಿತ್ರಕ್ಕೆ ಮೂರನೇ ಬಹುಮಾನ ಹಾಗೂ 10 ಸಾವಿರ ರೂ.ಗಳ ಗೌರವಧನ ನೀಡಲಾಯಿತು. ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಲಕುಮಿ ಹಾಗೂ ಅತ್ಯುತ್ತಮ ಸಂಕಲನಕಗಾರ ವಿಭಾಗದಲ್ಲಿ ಹಿಂಬಾಲಿಸು ಕಿರುಚಿತ್ರಕ್ಕೆ ಪ್ರಶಸ್ತಿ ದೊರೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಿರುತೆರೆ ನಟಿ ದೀಪಾ ರವಿಶಂಕರ್ ಅವರು ಮಾತನಾಡಿ, ಪ್ರಶಸ್ತಿ ಸಿಗದವರು ಬೇಸರಗೊಳ್ಳಬೇಡಿ, ಕಡಿಮೆ ಸಮಯದಲ್ಲಿ ಒಂದು ಸಂದೇಶ ಸಾರುವ ಕಿರುಚಿತ್ರ ಮಾಡುವುದು ಕಮರ್ಷಿಯಲ್ ಸಿನಿಮಾಗಿಂತ ಕಷ್ಟಕರ ಹಾಗೂ ಇದಕ್ಕೆ ಶ್ರಧ್ದೆ ಬಹಳ ಮುಖ್ಯವಾಗಿರುತ್ತದೆ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಇನ್ನೂ ಹೆಚ್ಚೆಚ್ಚು ಕಿರುಚಿತ್ರಗಳನ್ನು ಮಾಡಿ ಎಂದು ಹೊಸಬರಿಗೆ ಸಲಹೆ ನೀಡಿದರು.

ಈ ವೇಳೆ ಮುಖ್ಯ ಅತಿಥಿಗಳಾದ ಕಿರುತೆರೆ ನಟಿ ದೀಪಾ ರವಿಶಂಕರ್ , ಕಿರುತೆರೆ ನಟ ಅಶ್ವಿನ್ ಕುಮಾರ್ ಹಾಗೂ ಹಿರಿಯ ಛಾಯಾಗ್ರಾಹಕ ಅಶ್ವತ್ ನಾರಾಯಣ ಅವರನ್ನು ಉಪ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಚಲನಚಿತ್ರ ಉಪ ಸಮಿತಿ ಉಪ ಅಧ್ಯಕ್ಷರಾದ ಸಿದ್ಧರಾಜು, ವಿಶೇಷಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ವಿಜಯ್ ಕುಮಾರ್, ತೀರ್ಪುಗಾರರಾದ ಕಾವಾ ಕಾಲೇಜಿನ ಪ್ರಾಧ್ಯಾಪಕರಾದ ಚರಿತಾ, EMMRC ತಂತ್ರಜ್ಞರಾದ ಗೋಪಿನಾಥ್ ಹಾಗೂ ಉಪ ಸಮಿತಿ ಉಪಾಧ್ಯಕ್ಷರು ಮತ್ತು ಸದಸ್ಯರು ಇದ್ದರು.

ಆಂದೋಲನ ಡೆಸ್ಕ್

Recent Posts

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

3 mins ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

17 mins ago

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

11 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

11 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

14 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

14 hours ago