ನಮ್ಮ ಮೈಸೂರ ದಸರಾ 2025

Mysuru dasara | ದಸರಾ ಚಲನಚಿತ್ರೋತ್ಸವ : ಕಿರುಚಿತ್ರಗಳಿಗೆ ಪ್ರಶಸ್ತಿ ಪ್ರದಾನ

ಮೈಸೂರು : ಮೈಸೂರು ದಸರಾ ಮಹೋತ್ಸವ – 2025ರ ಹಿನ್ನೆಲೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಮಲ್ಟಿಫ್ಲೆಕ್ಸ್ ಚಿತ್ರಮಂದಿರದಲ್ಲಿ ದಸರಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡ ಕಿರುಚಿತ್ರಗಳಿಗೆ ಗುರುವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸುತನ್ ನಿರ್ದೇಶನದ ಲಕುಮಿ ಕಿರುಚಿತ್ರಕ್ಕೆ ಪ್ರಥಮ ಬಹುಮಾನ ಹಾಗೂ 20 ಸಾವಿರ ರೂ.ಗಳ ಗೌರವಧನ, ಮಣಿಕಂಠ ನಿರ್ದೇಶನದ ಹಿಂಬಾಲಿಸು ಚಿತ್ರಕ್ಕೆ ಎರಡನೇ ಬಹುಮಾನ ಹಾಗೂ 15 ಸಾವಿರ ರೂ.ಗಳ ಗೌರವಧನ ಮತ್ತು ಶಶಿಕುಮಾರ್ ಡಿ ಎಸ್ ನಿರ್ದೇಶನದ ಹಬ್ಬದ ಹಸಿವು ಚಿತ್ರಕ್ಕೆ ಮೂರನೇ ಬಹುಮಾನ ಹಾಗೂ 10 ಸಾವಿರ ರೂ.ಗಳ ಗೌರವಧನ ನೀಡಲಾಯಿತು. ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಲಕುಮಿ ಹಾಗೂ ಅತ್ಯುತ್ತಮ ಸಂಕಲನಕಗಾರ ವಿಭಾಗದಲ್ಲಿ ಹಿಂಬಾಲಿಸು ಕಿರುಚಿತ್ರಕ್ಕೆ ಪ್ರಶಸ್ತಿ ದೊರೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಿರುತೆರೆ ನಟಿ ದೀಪಾ ರವಿಶಂಕರ್ ಅವರು ಮಾತನಾಡಿ, ಪ್ರಶಸ್ತಿ ಸಿಗದವರು ಬೇಸರಗೊಳ್ಳಬೇಡಿ, ಕಡಿಮೆ ಸಮಯದಲ್ಲಿ ಒಂದು ಸಂದೇಶ ಸಾರುವ ಕಿರುಚಿತ್ರ ಮಾಡುವುದು ಕಮರ್ಷಿಯಲ್ ಸಿನಿಮಾಗಿಂತ ಕಷ್ಟಕರ ಹಾಗೂ ಇದಕ್ಕೆ ಶ್ರಧ್ದೆ ಬಹಳ ಮುಖ್ಯವಾಗಿರುತ್ತದೆ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಇನ್ನೂ ಹೆಚ್ಚೆಚ್ಚು ಕಿರುಚಿತ್ರಗಳನ್ನು ಮಾಡಿ ಎಂದು ಹೊಸಬರಿಗೆ ಸಲಹೆ ನೀಡಿದರು.

ಈ ವೇಳೆ ಮುಖ್ಯ ಅತಿಥಿಗಳಾದ ಕಿರುತೆರೆ ನಟಿ ದೀಪಾ ರವಿಶಂಕರ್ , ಕಿರುತೆರೆ ನಟ ಅಶ್ವಿನ್ ಕುಮಾರ್ ಹಾಗೂ ಹಿರಿಯ ಛಾಯಾಗ್ರಾಹಕ ಅಶ್ವತ್ ನಾರಾಯಣ ಅವರನ್ನು ಉಪ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಚಲನಚಿತ್ರ ಉಪ ಸಮಿತಿ ಉಪ ಅಧ್ಯಕ್ಷರಾದ ಸಿದ್ಧರಾಜು, ವಿಶೇಷಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ವಿಜಯ್ ಕುಮಾರ್, ತೀರ್ಪುಗಾರರಾದ ಕಾವಾ ಕಾಲೇಜಿನ ಪ್ರಾಧ್ಯಾಪಕರಾದ ಚರಿತಾ, EMMRC ತಂತ್ರಜ್ಞರಾದ ಗೋಪಿನಾಥ್ ಹಾಗೂ ಉಪ ಸಮಿತಿ ಉಪಾಧ್ಯಕ್ಷರು ಮತ್ತು ಸದಸ್ಯರು ಇದ್ದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

5 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

6 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 hours ago