ನಮ್ಮ ಮೈಸೂರ ದಸರಾ 2025

Mysuru dasara | ದಸರಾ ಚಲನಚಿತ್ರೋತ್ಸವ : ಕಿರುಚಿತ್ರಗಳಿಗೆ ಪ್ರಶಸ್ತಿ ಪ್ರದಾನ

ಮೈಸೂರು : ಮೈಸೂರು ದಸರಾ ಮಹೋತ್ಸವ – 2025ರ ಹಿನ್ನೆಲೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಮಲ್ಟಿಫ್ಲೆಕ್ಸ್ ಚಿತ್ರಮಂದಿರದಲ್ಲಿ ದಸರಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡ ಕಿರುಚಿತ್ರಗಳಿಗೆ ಗುರುವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸುತನ್ ನಿರ್ದೇಶನದ ಲಕುಮಿ ಕಿರುಚಿತ್ರಕ್ಕೆ ಪ್ರಥಮ ಬಹುಮಾನ ಹಾಗೂ 20 ಸಾವಿರ ರೂ.ಗಳ ಗೌರವಧನ, ಮಣಿಕಂಠ ನಿರ್ದೇಶನದ ಹಿಂಬಾಲಿಸು ಚಿತ್ರಕ್ಕೆ ಎರಡನೇ ಬಹುಮಾನ ಹಾಗೂ 15 ಸಾವಿರ ರೂ.ಗಳ ಗೌರವಧನ ಮತ್ತು ಶಶಿಕುಮಾರ್ ಡಿ ಎಸ್ ನಿರ್ದೇಶನದ ಹಬ್ಬದ ಹಸಿವು ಚಿತ್ರಕ್ಕೆ ಮೂರನೇ ಬಹುಮಾನ ಹಾಗೂ 10 ಸಾವಿರ ರೂ.ಗಳ ಗೌರವಧನ ನೀಡಲಾಯಿತು. ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಲಕುಮಿ ಹಾಗೂ ಅತ್ಯುತ್ತಮ ಸಂಕಲನಕಗಾರ ವಿಭಾಗದಲ್ಲಿ ಹಿಂಬಾಲಿಸು ಕಿರುಚಿತ್ರಕ್ಕೆ ಪ್ರಶಸ್ತಿ ದೊರೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಿರುತೆರೆ ನಟಿ ದೀಪಾ ರವಿಶಂಕರ್ ಅವರು ಮಾತನಾಡಿ, ಪ್ರಶಸ್ತಿ ಸಿಗದವರು ಬೇಸರಗೊಳ್ಳಬೇಡಿ, ಕಡಿಮೆ ಸಮಯದಲ್ಲಿ ಒಂದು ಸಂದೇಶ ಸಾರುವ ಕಿರುಚಿತ್ರ ಮಾಡುವುದು ಕಮರ್ಷಿಯಲ್ ಸಿನಿಮಾಗಿಂತ ಕಷ್ಟಕರ ಹಾಗೂ ಇದಕ್ಕೆ ಶ್ರಧ್ದೆ ಬಹಳ ಮುಖ್ಯವಾಗಿರುತ್ತದೆ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಇನ್ನೂ ಹೆಚ್ಚೆಚ್ಚು ಕಿರುಚಿತ್ರಗಳನ್ನು ಮಾಡಿ ಎಂದು ಹೊಸಬರಿಗೆ ಸಲಹೆ ನೀಡಿದರು.

ಈ ವೇಳೆ ಮುಖ್ಯ ಅತಿಥಿಗಳಾದ ಕಿರುತೆರೆ ನಟಿ ದೀಪಾ ರವಿಶಂಕರ್ , ಕಿರುತೆರೆ ನಟ ಅಶ್ವಿನ್ ಕುಮಾರ್ ಹಾಗೂ ಹಿರಿಯ ಛಾಯಾಗ್ರಾಹಕ ಅಶ್ವತ್ ನಾರಾಯಣ ಅವರನ್ನು ಉಪ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಚಲನಚಿತ್ರ ಉಪ ಸಮಿತಿ ಉಪ ಅಧ್ಯಕ್ಷರಾದ ಸಿದ್ಧರಾಜು, ವಿಶೇಷಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ವಿಜಯ್ ಕುಮಾರ್, ತೀರ್ಪುಗಾರರಾದ ಕಾವಾ ಕಾಲೇಜಿನ ಪ್ರಾಧ್ಯಾಪಕರಾದ ಚರಿತಾ, EMMRC ತಂತ್ರಜ್ಞರಾದ ಗೋಪಿನಾಥ್ ಹಾಗೂ ಉಪ ಸಮಿತಿ ಉಪಾಧ್ಯಕ್ಷರು ಮತ್ತು ಸದಸ್ಯರು ಇದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

53 mins ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

54 mins ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

56 mins ago

ಓದುಗರ ಪತ್ರ: ಕೋಚಿಂಗ್ ದಂಧೆಗೆ ಕಡಿವಾಣ ಹಾಕಿ

ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…

58 mins ago

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

4 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

4 hours ago