ಮೈಸೂರು : ಮೈಸೂರು ದಸರಾ ಮಹೋತ್ಸವ – 2025ರ ಹಿನ್ನೆಲೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಮಲ್ಟಿಫ್ಲೆಕ್ಸ್ ಚಿತ್ರಮಂದಿರದಲ್ಲಿ ದಸರಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡ ಕಿರುಚಿತ್ರಗಳಿಗೆ ಗುರುವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸುತನ್ ನಿರ್ದೇಶನದ ಲಕುಮಿ ಕಿರುಚಿತ್ರಕ್ಕೆ ಪ್ರಥಮ ಬಹುಮಾನ ಹಾಗೂ 20 ಸಾವಿರ ರೂ.ಗಳ ಗೌರವಧನ, ಮಣಿಕಂಠ ನಿರ್ದೇಶನದ ಹಿಂಬಾಲಿಸು ಚಿತ್ರಕ್ಕೆ ಎರಡನೇ ಬಹುಮಾನ ಹಾಗೂ 15 ಸಾವಿರ ರೂ.ಗಳ ಗೌರವಧನ ಮತ್ತು ಶಶಿಕುಮಾರ್ ಡಿ ಎಸ್ ನಿರ್ದೇಶನದ ಹಬ್ಬದ ಹಸಿವು ಚಿತ್ರಕ್ಕೆ ಮೂರನೇ ಬಹುಮಾನ ಹಾಗೂ 10 ಸಾವಿರ ರೂ.ಗಳ ಗೌರವಧನ ನೀಡಲಾಯಿತು. ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಲಕುಮಿ ಹಾಗೂ ಅತ್ಯುತ್ತಮ ಸಂಕಲನಕಗಾರ ವಿಭಾಗದಲ್ಲಿ ಹಿಂಬಾಲಿಸು ಕಿರುಚಿತ್ರಕ್ಕೆ ಪ್ರಶಸ್ತಿ ದೊರೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಿರುತೆರೆ ನಟಿ ದೀಪಾ ರವಿಶಂಕರ್ ಅವರು ಮಾತನಾಡಿ, ಪ್ರಶಸ್ತಿ ಸಿಗದವರು ಬೇಸರಗೊಳ್ಳಬೇಡಿ, ಕಡಿಮೆ ಸಮಯದಲ್ಲಿ ಒಂದು ಸಂದೇಶ ಸಾರುವ ಕಿರುಚಿತ್ರ ಮಾಡುವುದು ಕಮರ್ಷಿಯಲ್ ಸಿನಿಮಾಗಿಂತ ಕಷ್ಟಕರ ಹಾಗೂ ಇದಕ್ಕೆ ಶ್ರಧ್ದೆ ಬಹಳ ಮುಖ್ಯವಾಗಿರುತ್ತದೆ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಇನ್ನೂ ಹೆಚ್ಚೆಚ್ಚು ಕಿರುಚಿತ್ರಗಳನ್ನು ಮಾಡಿ ಎಂದು ಹೊಸಬರಿಗೆ ಸಲಹೆ ನೀಡಿದರು.
ಈ ವೇಳೆ ಮುಖ್ಯ ಅತಿಥಿಗಳಾದ ಕಿರುತೆರೆ ನಟಿ ದೀಪಾ ರವಿಶಂಕರ್ , ಕಿರುತೆರೆ ನಟ ಅಶ್ವಿನ್ ಕುಮಾರ್ ಹಾಗೂ ಹಿರಿಯ ಛಾಯಾಗ್ರಾಹಕ ಅಶ್ವತ್ ನಾರಾಯಣ ಅವರನ್ನು ಉಪ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಚಲನಚಿತ್ರ ಉಪ ಸಮಿತಿ ಉಪ ಅಧ್ಯಕ್ಷರಾದ ಸಿದ್ಧರಾಜು, ವಿಶೇಷಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ವಿಜಯ್ ಕುಮಾರ್, ತೀರ್ಪುಗಾರರಾದ ಕಾವಾ ಕಾಲೇಜಿನ ಪ್ರಾಧ್ಯಾಪಕರಾದ ಚರಿತಾ, EMMRC ತಂತ್ರಜ್ಞರಾದ ಗೋಪಿನಾಥ್ ಹಾಗೂ ಉಪ ಸಮಿತಿ ಉಪಾಧ್ಯಕ್ಷರು ಮತ್ತು ಸದಸ್ಯರು ಇದ್ದರು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…