ನಮ್ಮ ಮೈಸೂರ ದಸರಾ 2025

Mysuru dasara | ದಸರಾ ದೀಪಾಲಂಕಾರಕ್ಕೆ ತೆರೆ

ಮೈಸೂರು : ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ದೀಪಾಲಂಕಾರಕ್ಕೆ ಭಾನುವಾರ ಅದ್ದೂರಿ ತೆರೆ ಬಿದ್ದಿತ್ತು.

ದೇಶ-ವಿದೇಶಗಳಿಂದ ಬಂದಿದ್ದ ಲಕ್ಷಾಂತರ ಪ್ರವಾಸಿಗರನ್ನು ಈ ಬಾರಿಯ ದಸರಾ ವಿದ್ಯುತ್ ದೀಪಾಲಂಕಾರ ಆಕರ್ಷಿಸಿತ್ತು. ಪ್ರತಿಬಾರಿಯಂತೆ ಈ ವರ್ಷವೂ ದೀಪಾಲಂಕಾರದ ನಿರ್ವಹಣೆ ಜವಾಬ್ದಾರಿ ಹೊತ್ತಿದ್ದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಗಮಿತ(ಸೆಸ್ಕ್) ಹಿಂದಿನ ವರ್ಷಕ್ಕಿಂತಲ್ಲೂ ಅತ್ಯಂತ ಆಕರ್ಷಣೀಯವಾಗಿ ದೀಪಾಲಂಕಾರವನ್ನು ಮಾಡುವಲ್ಲಿ ಯಶಸ್ವಿಯಾಗಿತ್ತು.

೧೩೬ ಕಿಮೀ ದೀಪಾಲಂಕಾರ
ದಸರಾ ಹಿನ್ನೆಲೆಯಲ್ಲಿ ಈ ಬಾರಿ ನಗರದ ೧೩೬ ಕಿ.ಮೀ ವ್ಯಾಪ್ತಿಯ ರಸ್ತೆಗಳು ಹಾಗೂ ೧೧೮ ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗಿತ್ತು. ಇದರೊಂದಿಗೆ ನಗರದ ಪ್ರಮುಖ ಕಡೆಗಳಲ್ಲಿ ಎಲ್‌ಇಡಿ ಬಲ್ಬ್‌ಗಳಿಂದ ನಿರ್ಮಿಸಲಾದ ೮೦ ವಿವಿಧ ಪ್ರತಿಕೃತಿಗಳು ದೀಪಾಲಂಕಾರದ ಅಂದವನ್ನು ಹೆಚ್ಚು ಮಾಡುವುದರ ಜತೆಗೆ ನೋಡುಗರನ್ನು ಆಕರ್ಷಿಸಿತ್ತು. ಸೆ.೨೨ರಂದು ನಗರದ ಸಯ್ಯಾಜಿರಾವ್ ರಸ್ತೆಯಲ್ಲಿರುವ ಹಸಿರು ಚಪ್ಪರದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರು ದೀಪಾಲಂಕಾರಕ್ಕೆ ವಿದ್ಯುತ್ ಚಾಲನೆಯನ್ನು ನೀಡಿದ್ದರು.

ಇದನ್ನು ಓದಿ: Mysuru Dasara | ದೀಪಾಲಂಕಾರ ಕಣ್ತುಂಬಿಕೊಂಡ ಜನಸಾಗರ

ಕೊಲ್ಕತ್ತಾ ಲೈಟಿಂಗ್ ಮೆರಗು
ದೀಪಾಲಂಕಾರದ ಆಕರ್ಷಣೆ ಹೆಚ್ಚಿಸುವ ಸಲುವಾಗಿ ಸೆಸ್ಕ್ ವತಿಯಿಂದ ಈ ಬಾರಿ ಸಾಕಷ್ಟು ಹೊಸತನದ ಪ್ರಯತ್ನಗಳನ್ನು ಮಾಡಲಾಗಿತ್ತು. ಅದರಂತೆ ಈ ಬಾರಿ ಕೊಲ್ಕತ್ತಾ ಮಾದರಿ ಲೈಟಿಂಗ್‌ಗಳನ್ನು ನಗರದ ಹಲವು ಕಡೆಗಳಲ್ಲಿ ಅಳವಡಿಸಲಾಗಿತ್ತು. ಇದರಿಂದಾಗಿ ನಗರದ ಹಲವು ಕಡೆಗಳಲ್ಲಿ ಬಣ್ಣಬಣ್ಣದ ದೀಪಗಳಿಂದ ಅಲಂಕೃತಗೊಂಡಿದ್ದ ರಸ್ತೆ ಹಾಗೂ ವೃತ್ತಗಳು ದಸರಾ ವಿದ್ಯುತ್ ದೀಪಾಲಂಕಾರದ ಮೆರಗು ಹೆಚ್ಚಿಸಿತ್ತು.

ಅಗತ್ಯ ಸುರಕ್ಷತಾ ಕ್ರಮ
ದಸರಾ ವಿದ್ಯುತ್ ದೀಪಾಲಂಕಾರದಲ್ಲಿ ಸೆಸ್ಕ್ ವತಿಯಿಂದ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲಾಗಿತ್ತು. ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳುವುದು, ಕಂಬಗಳ ಹತ್ತಿರ ನಿಂತು ಫೋಟೋ/ವಿಡಿಯೋ ಶೂಟ್ ಮಾಡುವುದನ್ನು ತಪ್ಪಿಸುವುದು ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿತ್ತು.

ದೀಪಾಲಂಕಾರ ವೀಕ್ಷಿಸಿದ್ದ ಸಿಎಂ
ಸ್ಥಳೀಯರು, ಪ್ರವಾಸಿಗರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಈ ಬಾರಿಯ ದಸರಾ ದೀಪಾಲಂಕಾರವನ್ನು ವೀಕ್ಷಿಸಿದರು. ಅಂಬಾರಿ ಬಸ್ಸಿನ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಮುಖ್ಯಮಂತ್ರಿಗಳು ವಿದ್ಯುತ್ ದೀಪಾಲಂಕಾರವನ್ನು ಕಣ್ತುಂಬಿಕೊಂಡರು. ಆ ಮೂಲಕವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಗಮಿತದ ಪ್ರಯತ್ನಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದರು.

ಆಂದೋಲನ ಡೆಸ್ಕ್

Recent Posts

ಸದ್ಯದಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಯುಎಲ್ಎಂಎಸ್

• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…

16 mins ago

ಎಲ್‌ಪಿಜಿ ಸಿಲಿಂಡರ್‌ ಅಭಾವಕ್ಕೇನು ಕಾರಣ? ಇಂಧನ ಸಚಿವಾಲಯ ಹೇಳೋದೇನು?

ಹೊಸದಿಲ್ಲಿ : ಇರಾನ್-ಇಸ್ರೇಲ್‌,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್‌,ಪೆಟ್ರೋಲ್‌ ಮತ್ತು ಅಡುಗೆ ಅನಿಲ…

37 mins ago

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…

1 hour ago

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು…

2 hours ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ…

3 hours ago

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

4 hours ago