ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಸೆಪ್ಟಂಬರ್ 22 ರಿಂದ ಅಕ್ಟೋಬರ್ 2ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಇದೀಗ ಜಿಲ್ಲಾಡಳಿತ ದಸರಾ ಟಿಕೆಟ್, ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಹಾಗೂ ದಸರಾ ವಿಶೇಷಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು, ನಾಡಹಬ್ಬ ಮೈಸೂರು ದಸರಾ ಪ್ರಮುಖ ಆಕರ್ಷಣೆಯಾದ ಜಂಬೂವಾರಿ, ಪಂಜಿನ ಕವಾಯತು ಕಾರ್ಯಕ್ರಮಗಳ ವೀಕ್ಷಣೆಗೆ ಟಿಕೆಟ್ ಹಾಗೂ ಗೋಲ್ಡ್ ಕಾರ್ಡುಗಳನ್ನು ಖರೀದಿಸಲು ಸಾರ್ವಜನಿಕರಿಗೆ ಅನುಕೂಲವಾಗಲೆಂದು ಟಿಕೆಟ್ ಮತ್ತು ಗೋಲ್ಡ್ ಕಾರ್ಡುಗಳನ್ನು ಮಾರಾಟಕ್ಕೆ ಬಿಡುಗಡೆಗೊಳಿಸಲಾಗಿರುತ್ತದೆ.
ಸಾರ್ವಜನಿಕರಿಗೆ ದಸರಾ ಗೋರ್ಡ್ ಕಾರ್ಡ್ ಮತ್ತು ಟಿಕೆಟ್ಗಳು ದಿನಾಂಕ: 06.09.2025ರ ಅಪರಾಹ್ನ 3-00 ಗಂಟೆಯಿಂದ ನಾಡಹಬ್ಬ ಮೈಸೂರು ದಸರಾ ಅಧಿಕೃತ ಜಾಲತಾಣ https://mysoredasara.gov.in/ರಲ್ಲಿ ಖರೀದಿಗೆ ಲಭ್ಯವಿರುತ್ತದೆ. ಸಾರ್ವಜನಿಕರು ಆನ್ ಲೈನ್ ಮೂಲಕ ಖರೀದಿಸಬಹುದಾಗಿರುತ್ತದೆ. ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…