ನಮ್ಮ ಮೈಸೂರ ದಸರಾ 2025

Mysuru Dasara | ಜಂಬೂ ಸವಾರಿ ಆಸನ ಸಾಮರ್ಥ್ಯ ಇಳಿಕೆಗೆ ನಿರ್ಧಾರ

ಮೈಸೂರು : ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದ್ದು, ಇದರಂತೆ ಅಕ್ಟೋಬರ್ 2 ರಂದು ಮೈಸೂರು ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂ ಸವಾರಿ ಮೆರವಣಿಗೆಯ ಆಸನ ಸಾಮರ್ಥ್ಯವನ್ನು 65,000 ರಿಂದ 40,000 ಕ್ಕೆ ಇಳಿಕೆ ಮಾಡಲು ನಿರ್ಧರಿಸಿದೆ.

ಈ ವರ್ಷ ಕನಿಷ್ಠ 25,000 ಆಸನಗಳನ್ನು ಕಡಿಮೆ ಮಾಡಲಾಗುವುದು. ದೊಡ್ಡ ಸಭೆಗಳನ್ನು ನಿರ್ವಹಿಸುವ ಬಗ್ಗೆ ಹೆಚ್ಚು ಜಾಗರೂಕರಾಗಿರಲು ಪಾಸ್‍ಗಳನ್ನೂ ಕೂಡ ಕಡಿಮೆ ಮುದ್ರಿಸಲಾಗಿದೆ.

ಮೈಸೂರು ಜಿಲ್ಲಾ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಅಧಿಕಾರಿಗಳ ಮತ್ತು ದಸರಾ ಉಪಸಮಿತಿಯ ಸಭೆ ನಡೆಸಿ, ದಸರಾ ಹಬ್ಬ ಮತ್ತು ಸುರಕ್ಷಿತಾಕ್ರಮ ಅಗತ್ಯ ಕುರಿತು ಸೂಚನೆಗಳನ್ನು ನೀಡಿದ್ದಾರೆ.ಕಳೆದ ವರ್ಷ ಸುಮಾರು 60,000 ಇದ್ದ ಆಸನ ವ್ಯವಸ್ಥೆಯನ್ನು ಈ ವರ್ಷ 45,000 ಅಥವಾ ಅದಕ್ಕಿಂತ ಕಡಿಮೆಗೆ ಇಳಿಸಲಾಗುವುದು.

ಇದನ್ನು ಓದಿ: ಬೌದ್ಧರುದ್ಯಾನ ಪದ ಸೇರಿಸಿ ನಾಡಗೀತೆ ಪೂರ್ಣಗೊಳಿಸಿ : ಪ್ರೊ.ಅರವಿಂದ ಮಾಲಗತ್ತಿ

ವಿಜಯದಶಮಿ ದಿನದಂದು ನಡೆಯುವ ದಸರಾ ಜಂಬೂ ಸವಾರಿಗೆ ಅತೀ ಹೆಚ್ಚು ಜನರು ಆಗಮಿಸುತ್ತಾರೆ. ಚಾಮುಂಡೇಶ್ವರಿ ದೇವಿಯ ಚಿನ್ನದ ಅಂಬಾರಿಯನ್ನು ಹೊತ್ತೊಯ್ಯುವ ಆನೆಯನ್ನು ವೀಕ್ಷಿಸಲು ಲಕ್ಷಾಂತರ ಜನರು ಸೇರುತ್ತಾರೆ. ಪ್ರತಿ ವರ್ಷ ಪಾಸ್‍ಗಳ ಅವ್ಯವಸ್ಥೆ, ಸಾಮಥ್ರ್ಯಕ್ಕಿಂತ ಹೆಚ್ಚಿನ ಪಾಸ್‍ಗಳನ್ನು ಮುದ್ರಿಸಲಾಗುತ್ತಿದೆ, ಲಾಬಿ ನಡೆಸಲಾಗುತ್ತದೆ ಎಂಬ ದೂರುಗಳು ಕೇಳಿಬರುವ ಹಿನ್ನೆಲೆಯಲ್ಲಿ ವರ್ಷ ಉಪಸಮಿತಿಯು ಆಸನ ಲಭ್ಯತೆ ಇರುವಷ್ಟು ಮಾತ್ರ ಮುದ್ರಿಸಲು ನಿರ್ಧರಿಸಿದೆ.

ಏತನ್ಮಧ್ಯೆ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ತೆರಳುವ ಮಾರ್ಗ ಮದ್ಯೆ ಖಾಕಿ ಸರ್ಪಗಾವಲು ಹಾಕಲಾಗಿದೆ.

ಇದನ್ನು ಓದಿ: ಚಾಮುಂಡಿಬೆಟ್ಟದ ಶಿವಾರ್ಚಕ ವಿಧಿವಶ: ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ

ವಿಐಪಿ ಹಾಗೂ ವಿವಿಐಪಿ ಸಂಚಾರ ಇರುವ ಕಾರಣ ಬೈಕ್ ಗಳನ್ನೂ ಬಿಡುತ್ತಿಲ್ಲ. ಓರ್ವ ಡಿಸಿಪಿ, ಇಬ್ಬರು ಎಸಿಪಿ ಸಂಚಾರಿ ಪೊಲೀಸರು ಸೇರಿದಂತೆ ಕೆ.ಎಸ್.ಆರ್.ಪಿ ಹಾಗೂ ಡಿ.ಆರ್ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಂಡ್ಯ, ಚಾಮರಾಜನಗರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಂದಲೂ ಪೊಲೀಸರನ್ನು ಕರೆಸಿ ನಿಯೋಜನೆ ಮಾಡಲಾಗಿದೆ.

ಹಬ್ಬದ ಸಮಯದಲ್ಲಿ ಎಲ್ಲಾ ಪಾರಂಪರಿಕ ಕಟ್ಟಡಗಳ ಬಾಲ್ಕನಿಗಳು ಮತ್ತು ಮೇಲ್ಛಾವಣಿಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸುವ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಮೆರವಣಿಗೆಯನ್ನು ವೀಕ್ಷಿಸಲು ಯಾವುದೇ ವ್ಯಕ್ತಿ ಅಥವಾ ಗುಂಪು ಪಾರಂಪರಿಕ ರಚನೆಗಳ ತುದಿಗೆ ಹತ್ತಲು ಅವಕಾಶ ನೀಡಬಾರದು ಎಂದು ಆದೇಶಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

4 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

7 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

7 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

11 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

16 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

16 hours ago