ನಮ್ಮ ಮೈಸೂರ ದಸರಾ 2025

Mysuru Dasara | ಜಂಬೂ ಸವಾರಿ ಆಸನ ಸಾಮರ್ಥ್ಯ ಇಳಿಕೆಗೆ ನಿರ್ಧಾರ

ಮೈಸೂರು : ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದ್ದು, ಇದರಂತೆ ಅಕ್ಟೋಬರ್ 2 ರಂದು ಮೈಸೂರು ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂ ಸವಾರಿ ಮೆರವಣಿಗೆಯ ಆಸನ ಸಾಮರ್ಥ್ಯವನ್ನು 65,000 ರಿಂದ 40,000 ಕ್ಕೆ ಇಳಿಕೆ ಮಾಡಲು ನಿರ್ಧರಿಸಿದೆ.

ಈ ವರ್ಷ ಕನಿಷ್ಠ 25,000 ಆಸನಗಳನ್ನು ಕಡಿಮೆ ಮಾಡಲಾಗುವುದು. ದೊಡ್ಡ ಸಭೆಗಳನ್ನು ನಿರ್ವಹಿಸುವ ಬಗ್ಗೆ ಹೆಚ್ಚು ಜಾಗರೂಕರಾಗಿರಲು ಪಾಸ್‍ಗಳನ್ನೂ ಕೂಡ ಕಡಿಮೆ ಮುದ್ರಿಸಲಾಗಿದೆ.

ಮೈಸೂರು ಜಿಲ್ಲಾ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಅಧಿಕಾರಿಗಳ ಮತ್ತು ದಸರಾ ಉಪಸಮಿತಿಯ ಸಭೆ ನಡೆಸಿ, ದಸರಾ ಹಬ್ಬ ಮತ್ತು ಸುರಕ್ಷಿತಾಕ್ರಮ ಅಗತ್ಯ ಕುರಿತು ಸೂಚನೆಗಳನ್ನು ನೀಡಿದ್ದಾರೆ.ಕಳೆದ ವರ್ಷ ಸುಮಾರು 60,000 ಇದ್ದ ಆಸನ ವ್ಯವಸ್ಥೆಯನ್ನು ಈ ವರ್ಷ 45,000 ಅಥವಾ ಅದಕ್ಕಿಂತ ಕಡಿಮೆಗೆ ಇಳಿಸಲಾಗುವುದು.

ಇದನ್ನು ಓದಿ: ಬೌದ್ಧರುದ್ಯಾನ ಪದ ಸೇರಿಸಿ ನಾಡಗೀತೆ ಪೂರ್ಣಗೊಳಿಸಿ : ಪ್ರೊ.ಅರವಿಂದ ಮಾಲಗತ್ತಿ

ವಿಜಯದಶಮಿ ದಿನದಂದು ನಡೆಯುವ ದಸರಾ ಜಂಬೂ ಸವಾರಿಗೆ ಅತೀ ಹೆಚ್ಚು ಜನರು ಆಗಮಿಸುತ್ತಾರೆ. ಚಾಮುಂಡೇಶ್ವರಿ ದೇವಿಯ ಚಿನ್ನದ ಅಂಬಾರಿಯನ್ನು ಹೊತ್ತೊಯ್ಯುವ ಆನೆಯನ್ನು ವೀಕ್ಷಿಸಲು ಲಕ್ಷಾಂತರ ಜನರು ಸೇರುತ್ತಾರೆ. ಪ್ರತಿ ವರ್ಷ ಪಾಸ್‍ಗಳ ಅವ್ಯವಸ್ಥೆ, ಸಾಮಥ್ರ್ಯಕ್ಕಿಂತ ಹೆಚ್ಚಿನ ಪಾಸ್‍ಗಳನ್ನು ಮುದ್ರಿಸಲಾಗುತ್ತಿದೆ, ಲಾಬಿ ನಡೆಸಲಾಗುತ್ತದೆ ಎಂಬ ದೂರುಗಳು ಕೇಳಿಬರುವ ಹಿನ್ನೆಲೆಯಲ್ಲಿ ವರ್ಷ ಉಪಸಮಿತಿಯು ಆಸನ ಲಭ್ಯತೆ ಇರುವಷ್ಟು ಮಾತ್ರ ಮುದ್ರಿಸಲು ನಿರ್ಧರಿಸಿದೆ.

ಏತನ್ಮಧ್ಯೆ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ತೆರಳುವ ಮಾರ್ಗ ಮದ್ಯೆ ಖಾಕಿ ಸರ್ಪಗಾವಲು ಹಾಕಲಾಗಿದೆ.

ಇದನ್ನು ಓದಿ: ಚಾಮುಂಡಿಬೆಟ್ಟದ ಶಿವಾರ್ಚಕ ವಿಧಿವಶ: ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ

ವಿಐಪಿ ಹಾಗೂ ವಿವಿಐಪಿ ಸಂಚಾರ ಇರುವ ಕಾರಣ ಬೈಕ್ ಗಳನ್ನೂ ಬಿಡುತ್ತಿಲ್ಲ. ಓರ್ವ ಡಿಸಿಪಿ, ಇಬ್ಬರು ಎಸಿಪಿ ಸಂಚಾರಿ ಪೊಲೀಸರು ಸೇರಿದಂತೆ ಕೆ.ಎಸ್.ಆರ್.ಪಿ ಹಾಗೂ ಡಿ.ಆರ್ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಂಡ್ಯ, ಚಾಮರಾಜನಗರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಂದಲೂ ಪೊಲೀಸರನ್ನು ಕರೆಸಿ ನಿಯೋಜನೆ ಮಾಡಲಾಗಿದೆ.

ಹಬ್ಬದ ಸಮಯದಲ್ಲಿ ಎಲ್ಲಾ ಪಾರಂಪರಿಕ ಕಟ್ಟಡಗಳ ಬಾಲ್ಕನಿಗಳು ಮತ್ತು ಮೇಲ್ಛಾವಣಿಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸುವ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಮೆರವಣಿಗೆಯನ್ನು ವೀಕ್ಷಿಸಲು ಯಾವುದೇ ವ್ಯಕ್ತಿ ಅಥವಾ ಗುಂಪು ಪಾರಂಪರಿಕ ರಚನೆಗಳ ತುದಿಗೆ ಹತ್ತಲು ಅವಕಾಶ ನೀಡಬಾರದು ಎಂದು ಆದೇಶಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

12 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

12 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

12 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

12 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

12 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

12 hours ago