ನಮ್ಮ ಮೈಸೂರ ದಸರಾ 2025

Mysuru Dasara | ಜಂಬೂ ಸವಾರಿ ಆಸನ ಸಾಮರ್ಥ್ಯ ಇಳಿಕೆಗೆ ನಿರ್ಧಾರ

ಮೈಸೂರು : ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದ್ದು, ಇದರಂತೆ ಅಕ್ಟೋಬರ್ 2 ರಂದು ಮೈಸೂರು ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂ ಸವಾರಿ ಮೆರವಣಿಗೆಯ ಆಸನ ಸಾಮರ್ಥ್ಯವನ್ನು 65,000 ರಿಂದ 40,000 ಕ್ಕೆ ಇಳಿಕೆ ಮಾಡಲು ನಿರ್ಧರಿಸಿದೆ.

ಈ ವರ್ಷ ಕನಿಷ್ಠ 25,000 ಆಸನಗಳನ್ನು ಕಡಿಮೆ ಮಾಡಲಾಗುವುದು. ದೊಡ್ಡ ಸಭೆಗಳನ್ನು ನಿರ್ವಹಿಸುವ ಬಗ್ಗೆ ಹೆಚ್ಚು ಜಾಗರೂಕರಾಗಿರಲು ಪಾಸ್‍ಗಳನ್ನೂ ಕೂಡ ಕಡಿಮೆ ಮುದ್ರಿಸಲಾಗಿದೆ.

ಮೈಸೂರು ಜಿಲ್ಲಾ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಅಧಿಕಾರಿಗಳ ಮತ್ತು ದಸರಾ ಉಪಸಮಿತಿಯ ಸಭೆ ನಡೆಸಿ, ದಸರಾ ಹಬ್ಬ ಮತ್ತು ಸುರಕ್ಷಿತಾಕ್ರಮ ಅಗತ್ಯ ಕುರಿತು ಸೂಚನೆಗಳನ್ನು ನೀಡಿದ್ದಾರೆ.ಕಳೆದ ವರ್ಷ ಸುಮಾರು 60,000 ಇದ್ದ ಆಸನ ವ್ಯವಸ್ಥೆಯನ್ನು ಈ ವರ್ಷ 45,000 ಅಥವಾ ಅದಕ್ಕಿಂತ ಕಡಿಮೆಗೆ ಇಳಿಸಲಾಗುವುದು.

ಇದನ್ನು ಓದಿ: ಬೌದ್ಧರುದ್ಯಾನ ಪದ ಸೇರಿಸಿ ನಾಡಗೀತೆ ಪೂರ್ಣಗೊಳಿಸಿ : ಪ್ರೊ.ಅರವಿಂದ ಮಾಲಗತ್ತಿ

ವಿಜಯದಶಮಿ ದಿನದಂದು ನಡೆಯುವ ದಸರಾ ಜಂಬೂ ಸವಾರಿಗೆ ಅತೀ ಹೆಚ್ಚು ಜನರು ಆಗಮಿಸುತ್ತಾರೆ. ಚಾಮುಂಡೇಶ್ವರಿ ದೇವಿಯ ಚಿನ್ನದ ಅಂಬಾರಿಯನ್ನು ಹೊತ್ತೊಯ್ಯುವ ಆನೆಯನ್ನು ವೀಕ್ಷಿಸಲು ಲಕ್ಷಾಂತರ ಜನರು ಸೇರುತ್ತಾರೆ. ಪ್ರತಿ ವರ್ಷ ಪಾಸ್‍ಗಳ ಅವ್ಯವಸ್ಥೆ, ಸಾಮಥ್ರ್ಯಕ್ಕಿಂತ ಹೆಚ್ಚಿನ ಪಾಸ್‍ಗಳನ್ನು ಮುದ್ರಿಸಲಾಗುತ್ತಿದೆ, ಲಾಬಿ ನಡೆಸಲಾಗುತ್ತದೆ ಎಂಬ ದೂರುಗಳು ಕೇಳಿಬರುವ ಹಿನ್ನೆಲೆಯಲ್ಲಿ ವರ್ಷ ಉಪಸಮಿತಿಯು ಆಸನ ಲಭ್ಯತೆ ಇರುವಷ್ಟು ಮಾತ್ರ ಮುದ್ರಿಸಲು ನಿರ್ಧರಿಸಿದೆ.

ಏತನ್ಮಧ್ಯೆ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ತೆರಳುವ ಮಾರ್ಗ ಮದ್ಯೆ ಖಾಕಿ ಸರ್ಪಗಾವಲು ಹಾಕಲಾಗಿದೆ.

ಇದನ್ನು ಓದಿ: ಚಾಮುಂಡಿಬೆಟ್ಟದ ಶಿವಾರ್ಚಕ ವಿಧಿವಶ: ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ

ವಿಐಪಿ ಹಾಗೂ ವಿವಿಐಪಿ ಸಂಚಾರ ಇರುವ ಕಾರಣ ಬೈಕ್ ಗಳನ್ನೂ ಬಿಡುತ್ತಿಲ್ಲ. ಓರ್ವ ಡಿಸಿಪಿ, ಇಬ್ಬರು ಎಸಿಪಿ ಸಂಚಾರಿ ಪೊಲೀಸರು ಸೇರಿದಂತೆ ಕೆ.ಎಸ್.ಆರ್.ಪಿ ಹಾಗೂ ಡಿ.ಆರ್ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಂಡ್ಯ, ಚಾಮರಾಜನಗರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಂದಲೂ ಪೊಲೀಸರನ್ನು ಕರೆಸಿ ನಿಯೋಜನೆ ಮಾಡಲಾಗಿದೆ.

ಹಬ್ಬದ ಸಮಯದಲ್ಲಿ ಎಲ್ಲಾ ಪಾರಂಪರಿಕ ಕಟ್ಟಡಗಳ ಬಾಲ್ಕನಿಗಳು ಮತ್ತು ಮೇಲ್ಛಾವಣಿಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸುವ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಮೆರವಣಿಗೆಯನ್ನು ವೀಕ್ಷಿಸಲು ಯಾವುದೇ ವ್ಯಕ್ತಿ ಅಥವಾ ಗುಂಪು ಪಾರಂಪರಿಕ ರಚನೆಗಳ ತುದಿಗೆ ಹತ್ತಲು ಅವಕಾಶ ನೀಡಬಾರದು ಎಂದು ಆದೇಶಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

35 mins ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

2 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

3 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

3 hours ago

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…

3 hours ago

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

8 hours ago