ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | ಮಾವುತ ಕಾವಾಡಿಗಳಿಗೆ ಕಿಟ್ ವಿತರಣೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಕಿಟ್‌ ವಿತರಣೆ ಮಾಡಲಾಯಿತು.

ಕಿಟ್‌ ವಿತರಣೆ ಮಾಡಿ ಮಾತನಾಡಿದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು, ಅರ್ಜುನ ಆನೆಯನ್ನು ನೆನೆದರು. ಈ ಕುರಿತು ಮಾತನಾಡಿದ ಅವರು, ಅರ್ಜುನ ಸ್ಮಾರಕವನ್ನು ಶೀಘ್ರದಲ್ಲೆ ಉದ್ಘಾಟನೆ ಮಾಡಲಾಗುವುದು ಎಂದರು.

ಇದನ್ನು ಓದಿ : Mysuru Dasara | ಗಜಪಡೆಗಳ ಸೆಲ್ಫೀ, ರೀಲ್ಸ್ ಗೆ ಅವಕಾಶವಿಲ್ಲ

ಇನ್ನು ಮಾವುತರು, ಕಾವಾಡಿಗಳ ಕಾರ್ಯ ವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿದ ಸಚಿವರು, ಗೋವಾ, ಆಂಧ್ರದಿಂದಲೂ ನಮ್ಮ ಮಾವುತರಿಗೆ ಬೇಡಿಕೆ ಇದೆ. ಆನೆ ಸೆರೆ ಹಾಗೂ ಪಳಗಿಸುವಲ್ಲಿ ನಮ್ಮ ಮಾವುತರು ಮಂಚೂಣಿಯಲ್ಲಿದ್ದಾರೆ. 218 ಜನ ಮಾವುತ ಕಾವಾಡಿಗಳು ಇದ್ದಾರೆ. ನಿಮ್ಮ ಸಂಬಳ ಹೆಚ್ಚಳ ಮಾಡುವ ಪ್ರಸ್ತಾವನೆ ಇದೆ. ಪುಂಡಾನೆ ಸೆರೆ, ಆನೆಗಳ ಆರೋಗ್ಯ ಎಲ್ಲವನ್ನೂ ಮಾವುತ ಕಾವಾಡಿಗಳೇ ನೋಡಿಕೊಳ್ಳುತ್ತಿದ್ದಾರೆ. ನಿಮ್ಮದು ಮಹತ್ವವಾದ ಕಲೆ. ವೈಜ್ಞಾನಿಕ ತರಬೇತಿ ಕೊಡುವ ಕೆಲಸ ಮಾಡುತ್ತಿದ್ದೇವೆ.

8 ಸಾವಿರ ಮೌಲ್ಯದ ಒಂದು ಕಿಟ್ ವಿತರಣೆ ಮಾಡುತ್ತಿದ್ದೇನೆ. ನಿಮಗೆ ಬೇಕಾದ ಎಲ್ಲಾ ಸೌಲಭ್ಯವನ್ನು ಅರಣ್ಯ ಇಲಾಖೆ ನೀಡಲಿದೆ ಎಂದು ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

15 mins ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

1 hour ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

2 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

8 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

15 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

15 hours ago