ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಇಂದಿನಿಂದ ಯದುವಂಶದ ಖಾಸಗಿ ದರ್ಬಾರ್ ಆರಂಭವಾಗಲಿದೆ.
ಇಂದಿನಿಂದ ಸೆಪ್ಟೆಂಬರ್.29ರವರೆಗೆ ಖಾಸಗಿ ದರ್ಬಾರ್ ಜರುಗಲಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ರತ್ನಖಚಿತ ಸಿಂಹಾಸನವೇರಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.
ಇಂದು ಬೆಳಿಗ್ಗೆ ಚಾಮುಂಡಿತೊಟ್ಟಿಯಲ್ಲಿ ಯದುವೀರ್ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ಒಡೆಯರ್ ಅವರಿಗೆ ವಾಣಿವಿಲಾಸ ದೇವರ ಮನೆಯಲ್ಲಿ ಕಂಕಣ ಧಾರಣೆ ಮಾಡಲಾಗಿದೆ.
ಬಳಿಕ ಅರಮನೆಯ ಆವರಣದ ಕೋಡಿ ಸೋಮೇಶ್ವರ ದೇವಾಲಯದ ಬಳಿ ಪಟ್ಟದ ಆನೆ ಹಾಗೂ ಕುದುರೆ, ಹಸು ಸೇರಿದಂತೆ ಕಳಸ ಹೊತ್ತು ಮಹಿಳೆಯರು ಬಂದು ಮಂಗಳವಾದ್ಯದೊಂದಿಗೆ ಸವಾರಿ ತೊಟ್ಟಿಯ ಪೂಜಾ ಕೈಂಕರ್ಯಗಳು ನೆರವೇರಿದವು.
ಬಳಿಕ ಯದುವೀರ್ ಒಡೆಯರ್ ಅವರು ರತ್ನ ಖಚಿತ ಸಿಂಹಾಸನ ಅಲಂಕರಿಸಿದರು. ಸೆಪ್ಟೆಂಬರ್.29ರಂದು ಬೆಳಿಗ್ಗೆ 10.10ರಿಂದ 10.30ರ ಒಳಗೆ ಒಡೆಯರ್ ಅವರು ಸರಸ್ವತಿ ಪೂಜೆ ನೆರವೇರಿಸಲಿದ್ದು, ಅಂದು ರಾತ್ರಿ ಖಾಸಗಿ ದರ್ಬಾರ್ ಕೊನೆಗೊಳ್ಳಲಿದೆ.
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…