ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಇಂದಿನಿಂದ ಯದುವಂಶದ ಖಾಸಗಿ ದರ್ಬಾರ್ ಆರಂಭವಾಗಲಿದೆ.
ಇಂದಿನಿಂದ ಸೆಪ್ಟೆಂಬರ್.29ರವರೆಗೆ ಖಾಸಗಿ ದರ್ಬಾರ್ ಜರುಗಲಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ರತ್ನಖಚಿತ ಸಿಂಹಾಸನವೇರಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.
ಇಂದು ಬೆಳಿಗ್ಗೆ ಚಾಮುಂಡಿತೊಟ್ಟಿಯಲ್ಲಿ ಯದುವೀರ್ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ಒಡೆಯರ್ ಅವರಿಗೆ ವಾಣಿವಿಲಾಸ ದೇವರ ಮನೆಯಲ್ಲಿ ಕಂಕಣ ಧಾರಣೆ ಮಾಡಲಾಗಿದೆ.
ಬಳಿಕ ಅರಮನೆಯ ಆವರಣದ ಕೋಡಿ ಸೋಮೇಶ್ವರ ದೇವಾಲಯದ ಬಳಿ ಪಟ್ಟದ ಆನೆ ಹಾಗೂ ಕುದುರೆ, ಹಸು ಸೇರಿದಂತೆ ಕಳಸ ಹೊತ್ತು ಮಹಿಳೆಯರು ಬಂದು ಮಂಗಳವಾದ್ಯದೊಂದಿಗೆ ಸವಾರಿ ತೊಟ್ಟಿಯ ಪೂಜಾ ಕೈಂಕರ್ಯಗಳು ನೆರವೇರಿದವು.
ಬಳಿಕ ಯದುವೀರ್ ಒಡೆಯರ್ ಅವರು ರತ್ನ ಖಚಿತ ಸಿಂಹಾಸನ ಅಲಂಕರಿಸಿದರು. ಸೆಪ್ಟೆಂಬರ್.29ರಂದು ಬೆಳಿಗ್ಗೆ 10.10ರಿಂದ 10.30ರ ಒಳಗೆ ಒಡೆಯರ್ ಅವರು ಸರಸ್ವತಿ ಪೂಜೆ ನೆರವೇರಿಸಲಿದ್ದು, ಅಂದು ರಾತ್ರಿ ಖಾಸಗಿ ದರ್ಬಾರ್ ಕೊನೆಗೊಳ್ಳಲಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…