ನಮ್ಮ ಮೈಸೂರ ದಸರಾ 2025

Mysuru Dasara | ಯುವ ದಸರಕ್ಕೆ ಸಂಭ್ರಮದ ತೆರೆ

ಮೈಸೂರು : ಧೂಮ್ ಮಚಾಲೇ ಧೂಮ್ ಮಚಾಲೇ ಧೂಮ್ ಎಂದು ಸುನಿಧಿ ಚೌಹಾಣ್ ಕುಣಿತ ಜೊತೆಗಿನ ಗಾಯನಕ್ಕೆ, ನೆರೆದಿದ್ದ ಪ್ರೇಕ್ಷಕರೆಲ್ಲ ಹಾಡಿನ ಮತ್ತಿನಲ್ಲಿ ತೇಲಿ, ಹಾಡುತ ಹುಚ್ಚೆದ್ದು ಜೊತೆ ಭರ್ಜರಿ ಡ್ಯಾನ್ಸ್ ಮಾಡುತ ಯುವ ದಸರಾಕ್ಕೆ ತೆರೆ ಎಳೆಯಲಾಯಿತು.

ನಗರದ ಹೊರವಲಯದ ಉತ್ತನಹಳ್ಳಿ ದಸರಾ ಉಪ ಸಮಿತಿ ಆಯೋಜಿಸಿದ್ದ ಐದು ದಿನಗಳ ಯುವ ದಸರಾ ಸಡಗರಕ್ಕೆ ಮುಕ್ತಾಯ ಹಾಡಲಾಯಿತು. ಕೊನೆಯ ದಿನದ ಸಂಗೀತ ಗಾಯನ ನಡೆಸಿಕೊಟ್ಟ ಜನಪ್ರಿಯ ಬಾಲಿವುಡ್ ಗಾಯಕಿ ಸುನಿಧಿ ಚೌಹಾಣ್ ಗಾಯನ ಶೈಲಿ, ಸಂಗೀತ ಪ್ರಿಯರು ಹಾಗೂ ಪಡ್ಡೆ ಹುಡುಗರಿಗೆ ಮೋಡಿ ಮಾಡಿ ಸಕ್ಕತ್ ತ್ರಿಲ್ ನೀಡಿತು.

ಗಾಯಕಿ ಸುನಿಧಿ ಗಾಯನಕ್ಕೆ ಕಾದು ಕುಳಿತ ಪ್ರೇಕ್ಷಕರಿಗೆ ವೇದಿಕೆಯಲ್ಲಿ ಹೆಜ್ಜೆ ಇಟ್ಟು, ಧೂಮ್ ಹಿಂದಿ ಚಲನಚಿತ್ರ ಹಾಡು ಹಾಡುತ್ತಲೇ ಯುವ ಜನತೆಗೆ ಕಿಕ್ ಏರಿಸಿ ಕುಣಿದು ಕುಪ್ಪಳಿಸುವಂತೆ ಪ್ರಚೋಽಸಿದರು. ಗಾಯನದ ವೇಳೆ ತುಂತುರು ಮಳೆಯ ಆಗಮನದಲ್ಲೂ ಯುವಕ ಯುವತಿಯರು ಜಗ್ಗದೆ ಹಾಡಿಗೆ ಸಕ್ಕತ್ ಹೆಜ್ಜೆ ಹಾಕಿದರು.

ಇದನ್ನೂ ಓದಿ:-Mysuru Dasara | ಯುವ ದಸರಕ್ಕೆ ಸಂಭ್ರಮದ ತೆರೆ

ಬಾಲಿವುಡ್ ಸಿನಿಮಾಗಳ ಮೇನ್ ಇಸ್ಕು ಮೇರೆ, ಐಸಾ ಮೇರಿ ಪ್ಯಾರ್ ಹೈ, ಹ್ಯಾನೀ ಹ್ಯಾನಿ ಚುಟ್ಕೆಯ, ಮೈ ಕ್ರೇಜಿ ಗರ್ಲ್ ಮೈ ಕ್ರೇಜಿ ಗರ್ಲ್, ಫನಾ ಚಿತ್ರದ ಮೇರೆ ಹಾತ್ ಮೇ , ತೇರಿ ಮೇರಿ ಇಸ್ಕು ಸೇ, ಮೇರಿ ಕಮಲಿ ಕಮಲಿ, ಪುಷ್ಪ ಚಿತ್ರದ ಸಾಮಿ ಸಾಮಿ ಹಾಡುಗಳನ್ನು ಹಾಡಿ ಯುವ ದಸರಾ ಅದ್ದೂರಿ ಸಂಭ್ರಮಕ್ಕೆ ಸಾಕ್ಷಿಯಾದರು.

ಕನ್ನಡ ಹಾಡಿನ ಕರಾಮತ್ತು
ಮುಂಗಾರು ಮಳೆ ಚಿತ್ರದ ಕುಣಿದು ಕುಣಿದು ಬಾರೇ ಹಾಗೂ ಜೋಗಿ ಚಿತ್ರದ ಚಿಕು ಬುಕ್ ರೈಲು ನಿಲ್ಲೋದಿಲ್ಲ ಎಲ್ಲೂ, ರಾ ರಾ ರಾಕಮ್ಮ ಹಾಡು ಹಾಡುತ್ತಲೇ ಇಡೀ ಮೈದಾನದಲ್ಲಿ ನೆರೆದಿದ್ದ ಪ್ರೇಕ್ಷಕರು ತಾವು ಕೂಡ ಧ್ವನಿಗೂಡಿಸಿ ಶಿಳ್ಳೆ, ಕೇಕೆ ಹಾಕಿ ಕುಣಿದು ಕುಪ್ಪಳಿಸಿದರು. ಯುವ ದಸರಾ ಅಂತಿಮ ದಿನ ಮೈದಾನ ಕಿಕ್ಕಿರಿದು ತುಂಬಿತ್ತು. ಸುನಿಽ ಚೌಹಾಣ್ ಗಾಯನಕ್ಕೆ ಕುಣಿದು ಶಿಳ್ಳೆ ಚಪ್ಪಾಳೆ ತಟ್ಟುವ ಮೂಲಕ ಯುವಕರು, ಪ್ರಸ್ತುತ ವರ್ಷದ ಯುವ ದಸರಾ ಸಂಗೀತ ಸಂಜೆಯನ್ನು ಪೂರ್ಣಗೊಳಿಸಿದರು.

ರಾಜಕಾರಣಿಗಳ ಕುಟುಂಬಕ್ಕೆ ಆತಿಥ್ಯ, ಪೊಲೀಸರ ಪತ್ರಕರ್ತರ ನಡುವೆ ಮಾತಿನ ಚಕಮಕಿ
ಕೊನೆಯ ದಿನದ ಯುವ ದಸರಾ ಕಾರ್ಯಕ್ರಮದಲ್ಲಿ ಪ್ರತಿ ಭಾರಿಯಂತೆ ರಾಜಕಾರಣಿಗಳು, ಅಧಿಕಾರಿಗಳು ವರ್ಗ ಹೆಚ್ಚೆ ಇತ್ತು. ಕುಟುಂಬಸ್ಥರೇ ಎಲ್ಲೆಡೆ ಕುಳಿತು ಕಾರುಬಾರು ನಡೆಸಿದರು. ವಿಐಪಿ ಪಾಸ್ ವಿತರಣೆಗಳು, ರಾಜಕಾರಣಿಗಳ ಆಪ್ತರು ಎಗ್ಗಿಲ್ಲದೇ ವಿಐಪಿ ಸ್ಥಳಕ್ಕೆ ಲಗ್ಗೆಯಿಟ್ಟು ಪೊಲೀಸರನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದರು. ಅಧಿಕಾರಿಗಳು ತಮ್ಮ ಮಕ್ಕಳು, ಕುಟುಂಬದವರನ್ನು ಮಾಧ್ಯಮ ಗ್ಯಾಲರಿಗೆ ಕೂರಿಸಲು ಯತ್ನಿಸಿದರ ಪರಿಣಾಮ ಪತ್ರಕರ್ತ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು, ಪೊಲೀಸರು ಏನು ಮಾಡಲಾಗದೇ ಆಸಹಾಯಕಂತೆ ವರ್ತಿಸಿದರು. ಇದರ ನಡುವೆ ಸುನಿಧಿ ಚೌಹಾಣ್ ಗಾಯನಕ್ಕೆ ಸ್ವಲ್ಪ ಸಮಯ ಅಡೆತಡೆ ಉಂಟಾಯಿತು.

ಆಂದೋಲನ ಡೆಸ್ಕ್

Recent Posts

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

24 mins ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

2 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

5 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

7 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

13 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

13 hours ago