ನಮ್ಮ ಮೈಸೂರ ದಸರಾ 2025

Mysuru Dasara | ಬನ್ನಿಮಂಟಪ ತಲುಪಿದ ಜಂಬೂಸವಾರಿ

ಮೈಸೂರು : ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆ​ ಬನ್ನಿ ಮಂಟಪ ತಲುಪಿದೆ. ಈ ಮೂಲಕ ಮೈಸೂರು ದಸರಾ ಜಂಬೂಸವಾರಿ ಯಶಸ್ವಿಯಾಗಿ ನಡೆದಿದೆ. ಅರಮನೆಯಿಂದ ಬನ್ನಿಮಂಟಪದ ವರೆಗೆ ಒಟ್ಟು 2 ಗಂಟೆ ಕಾಲ ಜಂಬೂಸವಾರಿ ನಡೆದಿದ್ದು, ಜಂಬೂಸವಾರಿ ಬನ್ನಿಮಂಟಕ್ಕೆ ತಲುಪಿದ ಬಳಿಕ ಪೊಲೀರು ರಾಷ್ಟ್ರಗೀತೆ ನುಡಿಸಿ ಗೌರವ ವಂದನೆ ಸಲ್ಲಿಸಿದರು.

ಜಂಬೂ ಸವಾರಿಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ್ದರು. ಜಂಬೂ ಸವಾರಿ ಅರಮನೆಯಿಂದ ಹೊರಟು ಕೆ.ಆರ್ ಸರ್ಕಲ್, ಸಯ್ಯಾಜಿ ರಾವ್, ರಸ್ತೆ, ಆಯುರ್ವೇದಿಕ್ ವೃತ್ತ, ಆರ್.ಎಂ.ಸಿ, ತಿಲಕ್ ನಗರ, ಹೈವೇ ಸರ್ಕಲ್ ರಸ್ತೆ ಮೂಲಕ ಜಂಬೂ ಸವಾರಿ ಬನ್ನಿ ಮಂಟಪ ತಲುಪಿದೆ. ಈ ಮೂಲಕ 2025ನೇ ಸಾಲಿನ ಮೈಸೂರು ದಸರಾ ಜಂಬೂಸವಾರಿ ಯಶಸ್ವಿಯಾಗಿ ಸಂಪನ್ನಗೊಂಡಿತು.

ಇದನ್ನು ಓದಿ : Mysuru Dasara | ರೋಮಾಂಚಕ ಜಂಬೂ ಸವಾರಿ, ಸಂಭ್ರಮಿಸಿದ ಲಕ್ಷಾಂತರ ಜನ..

ಜಂಬೂಸವಾರಿ ಈ ಭಾರಿ ಬಹಳ ವಿಜೃಂಭಣೆಯಿಂದ ನಡೆಯಿತು. ಜಂಬೂಸವಾರಿ ಸಾಗುತ್ತಿದ್ದ ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ಜನ ಸೇರಿದ್ದರು, ಹಾಗೇ ಜಂಬೂಸವಾರಿ ಮುಂದೆ ಕಲಾ ತಂಡಗಳು ಸಹ ಮೆರಗು ನೀಡಿದವು. ಇದೆಲ್ಲವನ್ನು ಸಹಸ್ರಾರು ಜನರು ಕಣ್ತುಂಬಿಕೊಂಡು, ಚಾಮುಂಡೇಶ್ವರಿಗೆ ಕೈ ಮುಗಿದು ಪ್ರಾರ್ಥಿಸಿಕೊಂಡರು.

ಈ ಭಾರೀ ಲೇಖಕಿ ಭಾನು ಮುಷ್ತಾಕ್‌ ಮೈಸೂರು ದಸರಾಕ್ಕೆ ಚಾಲನೆ ನೀಡಿದ್ದರು. ಈ ಬಾರಿಯೂ ಅಂಬಾರಿಯನ್ನು ಅಭಿಮನ್ಯು ಹೊತ್ತಿದ್ದಾನೆ . ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿ ವಿರಾಜಮಾನಳಾಗಿದ್ದಾಳೆ.

ಜಂಬೂಸವಾರಿ ಮೆರವಣಿಗೆ ವೇಳೆ 58 ಸ್ತಬ್ಧಚಿತ್ರ ಪ್ರದರ್ಶನವಾಗಿದೆ. 31 ಜಿಲ್ಲೆಗಳ ಕಲೆ, ಸಾಹಿತ್ಯ, ಇತಿಹಾಸವನ್ನು ಸ್ತಬ್ಧಚಿತ್ರ ಪ್ರತಿಬಿಂಬಿಸಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

20 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

20 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

20 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

20 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago