ನಮ್ಮ ಮೈಸೂರ ದಸರಾ 2025

Mysuru Dasara | ಜಂಬೂಸವಾರಿ ಸಂಪನ್ನ ; ಖಾಸಗಿ ದರ್ಬಾರ್‌ಗೂ ತೆರೆ

ಮೈಸೂರು : ನಾಡಹಬ್ಬ ಮೈಸೂರು ದಸರಾ ವಿಜಯದಶಮಿ ಮೆರವಣಿಗೆಯ ಪ್ರಮುಖ ಆಕರ್ಷಣೆ ಜಂಬೂ ಸವಾರಿಯೊಂದಿಗೆ ಸಂಪನ್ನಗೊಂಡಿದೆ. ಇದಲ್ಲದೆ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕ್ರಷ್ಣದತ್ತ ಚಾಮರಾಜ ಒಡೆಯರ್ ನಡೆಸುತ್ತಿದ್ದ ಖಾಸಗಿ ದರ್ಬಾರ್ ಕೂಡ ಅಂತ್ಯಗೊಂಡಿದೆ.

ಮೈಸೂರು ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇಗುಲದ ಬಳಿ ಇರುವ ಬನ್ನಿ ಮರಕ್ಕೆ ಯದುವೀರ್ ಅವರು ಶಮೀ ಪೂಜೆ ನೆರವೇರಿಸಿದರು. ವಜ್ರಮುಷ್ಠಿ ಕಾಳಗ ಮುಕ್ತಾಯವಾಗುತ್ತಿದ್ದಂತೆ ಭುವನೇಶ್ವರಿ ದೇವಾಲಯದವರೆಗೆ ವಿಜಯಯಾತ್ರೆ ನಡೆಯಿತು. ಬಳಿಕ ಯದುವೀರ್ ಒಡೆಯರ್, ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು. ಪೂಜೆ ಮುಕ್ತಾಯವಾಗುತ್ತಿದ್ದಂತೆ ಯದುವೀರ್ ಅರಮನೆಗೆ ವಾಪಸ್ ಆದರು. ಇದರೊಂದಿಗೆ ಅರಮನೆ ದಸರಾ ಮುಕ್ತಾಯಗೊಂಡಿದೆ.

ಇದನ್ನು ಓದಿ : Mysuru Dasara | ಬನ್ನಿಮಂಟಪ ತಲುಪಿದ ಜಂಬೂಸವಾರಿ

ಪೊಲೀಸ್ ಬ್ಯಾಂಡ್ ಜೊತೆಗೆ ಪಟ್ಟದ ಆನೆ, ಕುದುರೆ, ಹಸು ವಿಜಯಯಾತ್ರೆಯಲ್ಲಿ ಭಾಗಿಯಾಗಿದ್ದವು. ಖಾಸಾ ಆಯುಧಗಳನ್ನು ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆ ಮಾಡಲಾಯಿತು. ಶ್ರೀಕಂಠದತ್ತ ಒಡೆಯರ್ ಬಳಸುತ್ತಿದ್ದ ಕಾರಿನಲ್ಲಿ ಯದುವೀರ್ ವಿಜಯಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಈ ವರ್ಷ ೧೧ ದಿನ ದಸರಾ ಆಚರಣೆ ಕಂಡಿದೆ. ಇಷ್ಟು ದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ದಸರಾ ಕ್ರೀಡಾಕೂಟ, ದಸರಾ ಕುಸ್ತಿ, ಯುವದಸರಾ, ಫಲಪುಷ್ಪ ಪ್ರದರ್ಶನ ಮುಂತಾದುವುಗಳು ನಡೆದವು. ಚಾಮುಂಡೇಶ್ವರಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

18 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

18 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

18 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

18 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

18 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

18 hours ago