ನಮ್ಮ ಮೈಸೂರ ದಸರಾ 2025

Mysuru Dasara | ಕಾರು ಸಂಗ್ರಹಾಲಯದಲ್ಲಿ ಪಯಣೋತ್ಸವಕ್ಕೆ ಚಾಲನೆ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮೈಸೂರಿನ ಹೊರವಲಯದಲ್ಲಿರುವ ಪಯಣ- ವಿಂಟೇಜ್ ಕಾರು ಸಂಗ್ರಹಾಲಯದಲ್ಲಿ ಪಯಣೋತ್ಸವ ಶೀರ್ಷಿಕೆಯಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸೆ.೨೨ರ ಸೋಮವಾರ ಪಯಣೋತ್ಸವಕ್ಕೆ ಚಾಲನೆ ದೊರಕಿದ್ದು, ಅ. ೨ರವರೆಗೆ ೧೧ ದಿನಗಳವರೆಗೆ ವಿಶಿಷ್ಟ ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಪಯಣೋತ್ಸವವು ಕಲೆ, ಸಂಸ್ಕೃತಿ, ಪರಂಪರೆ ಮತ್ತು ನವೀನತೆಯ ಸಮ್ಮಿಲನವಾಗಿದೆ. ಇದು ದಸರಾ ಹಬ್ಬದ ಸಂಭ್ರಮವನ್ನು ವಿಸ್ತರಿಸಿ, ಸಾರ್ವಜನಿಕರಿಗೆ ಕಲಾತ್ಮಕ ಅನುಭವ ನೀಡುವ ಉದ್ದೇಶದಿಂದ ರೂಪಿಸಲಾಗಿದೆ.

ಇದನ್ನೂ ಓದಿ :- https://andolana.in/mysore-dasara-2025/mysuru-dasara-painting-exhibition-kicks-off/

ಸೆ.೨೨-೨೩ರವರೆಗೆ ರಂಗ ಶಿವ ಕಲಾಬಳಗದ ವತಿಯಿಂದ ರಂಗ-ಗೀತ-ವೈಭವ ರಂಗ ಸಂಗೀತದ ಸಮ್ಮಿಲನ. ೨೦ಕ್ಕೂ ಹೆಚ್ಚು ಕಲಾವಿದರು ರಂಗಗೀತೆಗಳ ಮೂಲಕ ಪ್ರೇಕ್ಷಕರ ಮನರಂಜನೆ ಮಾಡಲಿದ್ದಾರೆ. ಸೆ.೨೪ ರಿಂದ ೨೯ರವರೆಗೆ ವಾದ್ಯ ಸಂಗೀತ ವೈಭವ, ಸಂಗ್ರಹಾಲಯದ ಒಳಾಂಗಣದಲ್ಲಿ ನಾದಪೂರ್ಣ ವಾದ್ಯ ಕಾರ್ಯಕ್ರಮಗಳು ನಡೆಯಲಿವೆ. ಸೆ.೩೦ ರಿಂದ ಅ.೧ರವರೆಗೆ ಕಲಾ ವೈಭವ ತಂಡದಿಂದ ನಾಟ್ಯ ವೈಭವ, ಉಜಿರೆಯ ಪ್ರಸಿದ್ಧ ನೃತ್ಯ ತಂಡದಿಂದ ನೃತ್ಯ ಪ್ರದರ್ಶನವಿದ್ದು, ನೃತ್ಯ, ಭಾವ ಮತ್ತು ಶೈಲಿಯ ಸಮ್ಮಿಲನವಾಗಿದೆ.

ಪ್ರತಿದಿನ ಸಂಜೆ ೬ ರಿಂದ ೯ರವರೆಗೆ ದಸರಾ ವಿಶೇಷ ದಿನಗಳಲ್ಲಿ ಸಂಗ್ರಹಾಲಯ ರಾತ್ರಿ ೮ ಗಂಟೆಯವರೆಗೆ ಸಾರ್ವಜನಿಕರಿಗೆ ತೆರೆಯಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ವಿಬಿ-ಜೀ ರಾಮ್‌ ಜೀ ಹೆಸರಿನಲ್ಲಿ ರಾಜ್ಯ ಸರ್ಕಾರಗಳ ಮೇಲೆ ಹೊರೆ: ವಿ.ಶಿವದಾಸನ್‌

ಮಂಡ್ಯ: ದೇಶದ ಗ್ರಾಮೀಣ ಭಾಗದ ಜನರ ಜೀವನಾಡಿ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಬಿ ಜೀ ರಾಮ್‌…

21 mins ago

ಸಿರಿ ಧಾನ್ಯಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವುದು ಆದ್ಯ ಕರ್ತವ್ಯ: ಕೆ.ಆರ್.‌ನಂದಿನಿ

ಮಂಡ್ಯ: ಸಿರಿಧಾನ್ಯಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.‌ನಂದಿನಿ…

34 mins ago

ಹೊಸ ವರ್ಷಾಚರಣೆಗೆ ಕೊಡಗಿನಲ್ಲೂ ಕಟ್ಟೆಚ್ಚರ

ಕೊಡಗು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಇನ ಡೋರ್‌ನಲ್ಲಿ ಮಾತ್ರ ಹೆಚ್ಚಿನ ಸೌಂಡ್‌ ಬಳಸಲು ಅವಕಾಶವಿದೆ.…

46 mins ago

ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು: ಸೀಮಂತ್‌ ಕುಮಾರ್‌ ಹೇಳಿದ್ದಿಷ್ಟು.!

ಬೆಂಗಳೂರು: ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಆಯುಕ್ತ ಸೀಮಂತ್‌…

1 hour ago

ಕೋಗಿಲು ಲೇಔಟ್‌ ಒತ್ತುವರಿ ತೆರವು: ಸತ್ಯಶೋಧನಾ ತಂಡ ರಚಿಸಿ ವಿಜಯೇಂದ್ರ ಆದೇಶ

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್‍ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ…

1 hour ago

ನನ್ನ ವಿರುದ್ಧ 17 ಕೇಸ್‌ ಇದೆ, ಇನ್ನೂ ಹಾಕೋಕೆ ಹೇಳಿ ಆದ್ರೆ ದಾರಿ ತಪ್ಪಿಸಬೇಡಿ: ಪ್ರತಾಪ್‌ ಸಿಂಹ

ಬೆಂಗಳೂರು: ನನ್ನ ವಿರುದ್ಧ 17 ಕೇಸ್‌ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…

1 hour ago