ನಮ್ಮ ಮೈಸೂರ ದಸರಾ 2025

Mysuru Dasara | ಕಾರು ಸಂಗ್ರಹಾಲಯದಲ್ಲಿ ಪಯಣೋತ್ಸವಕ್ಕೆ ಚಾಲನೆ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮೈಸೂರಿನ ಹೊರವಲಯದಲ್ಲಿರುವ ಪಯಣ- ವಿಂಟೇಜ್ ಕಾರು ಸಂಗ್ರಹಾಲಯದಲ್ಲಿ ಪಯಣೋತ್ಸವ ಶೀರ್ಷಿಕೆಯಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸೆ.೨೨ರ ಸೋಮವಾರ ಪಯಣೋತ್ಸವಕ್ಕೆ ಚಾಲನೆ ದೊರಕಿದ್ದು, ಅ. ೨ರವರೆಗೆ ೧೧ ದಿನಗಳವರೆಗೆ ವಿಶಿಷ್ಟ ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಪಯಣೋತ್ಸವವು ಕಲೆ, ಸಂಸ್ಕೃತಿ, ಪರಂಪರೆ ಮತ್ತು ನವೀನತೆಯ ಸಮ್ಮಿಲನವಾಗಿದೆ. ಇದು ದಸರಾ ಹಬ್ಬದ ಸಂಭ್ರಮವನ್ನು ವಿಸ್ತರಿಸಿ, ಸಾರ್ವಜನಿಕರಿಗೆ ಕಲಾತ್ಮಕ ಅನುಭವ ನೀಡುವ ಉದ್ದೇಶದಿಂದ ರೂಪಿಸಲಾಗಿದೆ.

ಇದನ್ನೂ ಓದಿ :- https://andolana.in/mysore-dasara-2025/mysuru-dasara-painting-exhibition-kicks-off/

ಸೆ.೨೨-೨೩ರವರೆಗೆ ರಂಗ ಶಿವ ಕಲಾಬಳಗದ ವತಿಯಿಂದ ರಂಗ-ಗೀತ-ವೈಭವ ರಂಗ ಸಂಗೀತದ ಸಮ್ಮಿಲನ. ೨೦ಕ್ಕೂ ಹೆಚ್ಚು ಕಲಾವಿದರು ರಂಗಗೀತೆಗಳ ಮೂಲಕ ಪ್ರೇಕ್ಷಕರ ಮನರಂಜನೆ ಮಾಡಲಿದ್ದಾರೆ. ಸೆ.೨೪ ರಿಂದ ೨೯ರವರೆಗೆ ವಾದ್ಯ ಸಂಗೀತ ವೈಭವ, ಸಂಗ್ರಹಾಲಯದ ಒಳಾಂಗಣದಲ್ಲಿ ನಾದಪೂರ್ಣ ವಾದ್ಯ ಕಾರ್ಯಕ್ರಮಗಳು ನಡೆಯಲಿವೆ. ಸೆ.೩೦ ರಿಂದ ಅ.೧ರವರೆಗೆ ಕಲಾ ವೈಭವ ತಂಡದಿಂದ ನಾಟ್ಯ ವೈಭವ, ಉಜಿರೆಯ ಪ್ರಸಿದ್ಧ ನೃತ್ಯ ತಂಡದಿಂದ ನೃತ್ಯ ಪ್ರದರ್ಶನವಿದ್ದು, ನೃತ್ಯ, ಭಾವ ಮತ್ತು ಶೈಲಿಯ ಸಮ್ಮಿಲನವಾಗಿದೆ.

ಪ್ರತಿದಿನ ಸಂಜೆ ೬ ರಿಂದ ೯ರವರೆಗೆ ದಸರಾ ವಿಶೇಷ ದಿನಗಳಲ್ಲಿ ಸಂಗ್ರಹಾಲಯ ರಾತ್ರಿ ೮ ಗಂಟೆಯವರೆಗೆ ಸಾರ್ವಜನಿಕರಿಗೆ ತೆರೆಯಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

7 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

7 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

7 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

7 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

7 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

7 hours ago