ಮೈಸೂರು: ನಮ್ಮ ಪರಿಸರವನ್ನು, ಸಂಸ್ಕಾರವನ್ನು, ಹಿಂದೆ ನಡೆದುಬಂದ ವಿಚಾರಗಳನ್ನು ಮುಂದುವರೆಸುವಲ್ಲಿ ನಮ್ಮ ನಾಡಿನ ರೈತರು ಎಂದೆಂದಿಗೂ ಸಹ ಮುಂದು. ಈ ಬಾರಿ ರೈತ ದಸರಾದಲ್ಲಿ ರೈತರಿಗೆ ಹೆಚ್ಚು ಅವಕಾಶ ನೀಡಬೇಕು, ರೈತರ ಬದುಕಿಗೆ ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು ಎಂದು ಹೇಳಿ ರೈತ ದಸರಾಗೆ ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಅವರು ಚಾಲನೆ ನೀಡಿದರು.
ಇಂದು ಮೈಸೂರು ದಸರಾ ಅಂಗವಾಗಿ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ, ರೈತ ದಸರಾ ಮೆರವಣಿಗೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು ದಸರಾ ರಾಜ್ಯ ಮತ್ತು ರಾಷ್ಟ್ರ ಮಟ್ಟ ಅಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವುದು ನಮ್ಮ ದೇಶದ ಹೆಮ್ಮೆಯ ವಿಷಯವಾಗಿದೆ ಎಂದರು.
ಇದನ್ನು ಓದಿ : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರೈತ ದಸರಾ ಸಂಭ್ರಮ
ಪಶುಸಂಗೋಪನಾ ಹಾಗೂ ರೇಷ್ಮೆ ಖಾತೆ ಸಚಿವರಾದ ಕೆ. ವೆಂಕಟೇಶ್ ಅವರು ಮಾತನಾಡಿ, ರೈತ ದಸರಾದಲ್ಲಿ ಹೊಸ ಹೊಸ ತಂತ್ರಜ್ಞಾನದ ಪರಿಚಯ ಮಾಡುವುದು, ಅವುಗಳ ಉಪಯೋಗದ ಬಗ್ಗೆ ತಿಳಿಸುವಂತಹ ಕೆಲಸ ಮಾಡುತ್ತಿರುವುದು ಬಹಳ ಸಂತೋಷದ ವಿಷಯವಾಗಿದೆ ಎಂದು ಹೇಳಿದರು.
ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ದೇವರಾಜ ಅರಸು ರಸ್ತೆಯ ಮೂಲಕ ಜೆ. ಕೆ ಗ್ರೌಂಡ್ವರೆಗೂ ಸಾಗಿದ ರೈತ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗವಹಿಸಿದರು. ಈ ಬಾರಿ ವಿಶೇಷವಾಗಿ ನಂದಿ ಧ್ವಜ, ನಗಾರಿ ಹಾಗೂ ತಮಟೆ, ವೀರಗಾಸೆ, ವೀರಗಾಸೆ ವೀರಭದ್ರ ನೃತ್ಯ, ಖಡ್ಗ ಪ್ರದರ್ಶನ, ಕಂಸಾಳೆ ನೃತ್ಯ, ಚಿಲಿಪಿಲಿ ಗೊಂಬೆ, ನಾದಸ್ವರ ಪೂಜೆ ಕುಣಿತ ಜೊತೆಗೆ ವಿವಿಧ ತಳಿಯ ಎತ್ತುಗಳು, ಕರುಗಳು, ಆಂಧ್ರ ತಳಿಯಾದ ಪುಂಗನೂರು ಎತ್ತು, ಹೋರಿ, ಹಳ್ಳಿಕಾರ್ ತಳಿ , ಬಂಡೂರು ಕುರಿಗಳು, ಎತ್ತಿನಗಾಡಿ ಎತ್ತುಗಳನ್ನು ಕರೆಸಲಾಗಿತ್ತು, ಹೊಸ ಹೊಸ ಕೃಷಿ ತಂತ್ರಜ್ಞಾನಗಳಾದ ಬೆಳೆ ಸಿಂಪಡಿಸುವ ಡ್ರೋನ್ ತಂತ್ರಜ್ಞಾನ ಯಂತ್ರ, ಭತ್ತ ನಾಟಿ ಯಂತ್ರ, ಇಪ್ಕೋ ನ್ಯಾನೋ ಯೂರಿಯಾ ಲಿಕ್ವಿಡ್, ಸ್ವರಾಜ್ ಯಂತ್ರ, ಕಿಸಾನ್ ಬಂಡಿ, ಪವರ್ ಇಂಟರ್ ಕಲ್ಟಿವೇಟರ್ ಯಂತ್ರ, ಕಳೆ ತೆಗೆಯುವ ಯಂತ್ರ, ಹೈಟೆಕ್ ಹಾರ್ವೆಸ್ಟರ್ ಹಬ್, ಬಹು ಬೆಳೆಯ ಒಕ್ಕಣೆ ಯಂತ್ರ, ಭತ್ತದ ಬೇಲರ್, ಕಬ್ಬು ನಾಟಿ ಯಂತ್ರ, ಕಬ್ಬು ಕಟಾವು ಯಂತ್ರ ತೋಟಗಾರಿಕೆ ಇಲಾಖೆಯ ಟ್ಯಾಬ್ಲೋಗಳಂತಹ ಹೊಸ ಹೊಸ ತಂತ್ರಜ್ಞಾನಗಳನ್ನು ಪ್ರದರ್ಶಿಸಲಾಯಿತು.
ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…
ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…
ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…
ಬೆಂಗಳೂರಿನ ಯಶವಂತಪುರ, ಎಸ್ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…
ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್ನ್ಯೂಸ್ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್ಪ್ರೆಸ್ಗೆ ಅನುಮೋದನೆ…
ಹೇಮಂತ್ಕುಮಾರ್ ರೈತ ಸಂಘ-ಕೆಆರ್ಎಸ್ ಪಕ್ಷ, ಎಸ್ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…