ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | ಅತ್ಯಾಕರ್ಷಕ ಡ್ರೋನ್ ಪ್ರದರ್ಶನಕ್ಕೆ ಮನಸೋತ ಮೈಸೂರಿಗರು

– ಬಣ್ಣಬಣ್ಣದ ಚಿತ್ತಾರ ಬಿಡಿಸಿದ 3000 ಡ್ರೋನ್ ಗಳು

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಹೊಸ ಮೆರಗು ನೀಡಿದ ಅತ್ಯಾಕರ್ಷಕ ಡ್ರೋನ್ ಪ್ರದರ್ಶನ, ಬಾನಂಗಳದಲ್ಲಿ ವಿವಿಧ ಕಲಾಕೃತಿಗಳ ಬಣ್ಣಬಣ್ಣದ ಚಿತ್ತಾರಗಳನ್ನು ಬಿಡಿಸಿದ 3000 ಡ್ರೋನ್ ಗಳು ಹೊಸ ಲೋಕವನ್ನು ಸೃಷ್ಟಿಸಿತು. ಇದರೊಂದಿಗೆ 2983 ಡ್ರೋನ್ ಗಳನ್ನು ಬಳಸಿ ರಾಷ್ಟ್ರೀಯ ಪ್ರಾಣಿ ಹುಲಿಯ ಕಲಾಕೃತಿ ರಚಿಸಿ ವಿಶ್ವದಾಖಲೆ‌ ನಿರ್ಮಿಸುವ ಮೂಲಕ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಮೈಸೂರಿನ ಹಿರಿಮೆಯನ್ನು ಹೆಚ್ಚಿಸಿದೆ.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವತಿಯಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಭಾನುವಾರ ಆಯೋಜಿಸಿದ್ದ ರೋಮಾಂಚಕಾರಿ ಡ್ರೋನ್ ಪ್ರದರ್ಶನ
ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನೆರೆದಿದ್ದ ಸಾವಿರಾರು ಜನರ ಕಣ್ಮನ ಸೆಳೆಯಿತು. ನೋಡುಗರನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ ಡ್ರೋನ್ ಪ್ರದರ್ಶನ ದಸರಾ ಮಹೋತ್ಸವದ ಸಂಭ್ರಮಕ್ಕೆ ರಂಗು ನೀಡಿತು.

ಗಿನ್ನಿಸ್ ವಿಶ್ವ ದಾಖಲೆ ನಿರ್ಮಾಣ
ಸೆಸ್ಕ್ ವತಿಯಿಂದ ನಡೆಸಲಾದ ಅತ್ಯಾಕರ್ಷಕ ಡ್ರೋನ್ ಪ್ರದರ್ಶನದಲ್ಲಿ ಹೊಸ ಗಿನ್ನಿಸ್ ವಿಶ್ವ ದಾಖಲೆ ನಿರ್ಮಾಣಗೊಂಡಿತು. ಈ ಬಾರಿಯ ಡ್ರೋನ್ ಪ್ರದರ್ಶನದಲ್ಲಿ ಒಟ್ಟು 2983 ಡ್ರೋನ್ ಗಳನ್ನು ಬಳಸಿಕೊಂಡು ಬಾನಂಗಳದಲ್ಲಿ ಬೃಹದಾಕಾರದ ಪ್ರಾಣಿ(ಹುಲಿ) ಕಲಾಕೃತಿಯನ್ನು ನಿರ್ಮಾಣ ಮಾಡುವ ಮೂಲಕ ಹೊಸದಾಗಿ ಗಿನ್ನಿಸ್ ವಿಶ್ವ ದಾಖಲೆ‌ ನಿರ್ಮಾಣ ಮಾಡಲಾಯಿತು. ಈ ಮೊದಲು 1985 ಡ್ರೋನ್ ಗಳನ್ನು ಬಳಸಿಕೊಂಡು ಹುಲಿಯ ಕಲಾಕೃತಿ ರಚಿಸುವ ಮೂಲಕ ದಾಖಲೆ ನಿರ್ಮಿಸಲಾಗಿತ್ತು.

ಇದನ್ನೂ ಓದಿ:-ಶ್ವಾನ ಪ್ರದರ್ಶನ : ಜರ್ಮನ್ ಶಫರ್ಡ್‌ಗೆ ಮೊದಲ ಸ್ಥಾನ

3000 ಡ್ರೋನ್ ಗಳ ಚಿತ್ತಾರ:
ಕಳೆದ ವರ್ಷ ನಡೆದ ಡ್ರೋನ್ ಪ್ರದರ್ಶನದಲ್ಲಿ 1500 ಡ್ರೋನ್ ಗಳ ಮೂಲಕ ಆಕರ್ಷಕ ಪ್ರದರ್ಶನವನ್ನು ನೀಡಲಾಗಿತ್ತು. ಆದರೆ ಈ ಬಾರಿಯ ಪ್ರದರ್ಶನವನ್ನು ಮತ್ತಷ್ಟು ಆಕರ್ಷಣೀಯವಾಗಿಸುವ ಸಲುವಾಗಿ ಒಟ್ಟು 3000 ಡ್ರೋನ್ ಬಳಸಿಕೊಂಡು ನಡೆಸಲಾದ ಡ್ರೋನ್ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಿತು. ಏಕಕಾಲದಲ್ಲಿ ಬಾನೆತ್ತರಕ್ಕೆ ಹಾರಿದ ಡ್ರೋನ್ ಗಳು ಬಣ್ಣಬಣ್ಣದ ದೀಪಗಳಿಂದ ಮಿನುಗುತ್ತಾ ಆಕರ್ಷಕ ಕಲಾಕೃತಿಗಳನ್ನು ಸೃಷ್ಟಿಸಿದವು.

ಸೌರಮಂಡಲ, ವಿಶ್ವಭೂಪಟ, ದೇಶದ ಹೆಮ್ಮೆಯ ಸೈನಿಕ, ನವಿಲು, ರಾಷ್ಟ್ರೀಯ ಪ್ರಾಣಿ ಹುಲಿ, ಡಾಲ್ಫಿನ್, ಈಗಲ್, ಸರ್ಪದ ಮೇಲೆ ಶ್ರೀಕೃಷ್ಣ ನೃತ್ಯ ಮಾಡುವುದು, ಕಾವೇರಿ ಮಾತೆ, ಕರ್ನಾಟಕ ಭೂಪಟದೊಂದಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್, ಪಂಚ ಗ್ಯಾರಂಟಿ ಯೋಜನೆಗಳಿಂದ ಕೂಡಿದ್ದ ಕರ್ನಾಟಕ ಭೂಪಟ‌, ಅಂಬಾರಿ ಆನೆ, ನಾಡದೇವತೆ ಚಾಮುಂಡೇಶ್ವರಿ ಕಲಾಕೃತಿಗಳು ನೋಡುಗರಿಗೆ ಅದ್ಭುತ ಮನರಂಜನೆ ನೀಡಿದವು.

ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಜ್ಯೋತಿ ಬೆಳಗುವ ಮೂಲಕ ಡ್ರೋನ್ ಪ್ರದರ್ಶನಕ್ಕೆ ಚಾಲನೆ ನೀಡಿದರು. ಡ್ರೋನ್ ಪ್ರದರ್ಶನದ ಆಕರ್ಷಣೆ ಕಣ್ತುಂಬಿಕೊಳ್ಳಲು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಜನರು ಕಿಕ್ಕಿರಿದು ತುಂಬಿದ್ದರು.

ಕುನಾಲ್ ಗಾಂಜಾವಾಲ ಹಾಡಿನ ಮೋಡಿ
ಡ್ರೋನ್ ಪ್ರದರ್ಶನ ಆರಂಭಕ್ಕೂ ಮುನ್ನ ಖ್ಯಾತ ಹಿನ್ನಲೆ ಗಾಯಕ ಕುನಾಲ್ ಗಾಂಜಾವಾಲ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ವೇದಿಕೆಗೆ ಬರುತ್ತಿದ್ದಂತೆ ಮೊದಲಿಗೆ ಪುನೀತ್ ರಾಜ್‍ಕುಮಾರ್ ಅಭಿನಯದ “ನೀನೆ ನೀನೆ”.. ಗೀತೆಯನ್ನು ಹಾಡಿ ರಂಜಿಸಿದ ಕುನಾಲ್ ಗಾಂಜಾವಾಲ, ಆ ನಂತರದಲ್ಲಿ ಕನ್ನಡದ “ಖುಷಿಯಾಗಿದೆ ಏಕೋ ನಿನ್ನಿಂದಲೆ…”, “ಒಂದೇ ಒಂದು ಸಾರಿ ಕಣ್ಮುಂದೆ ಬಾರೆ…”, “ನಿನ್ನ ಕಂಡ ಕ್ಷಣದಿಂದ…”, “ಹುಡುಗಿ ಹುಡುಗಿ ನಿನ್ನ ಕಂಡಾಗ”, “ಕಿವಿ ಮಾತೊಂದು ಹೇಳಲೆ ನಾನಿಂದು” ಸೇರಿದಂತೆ ಹಿಂದಿಯ ಹಲವು ಗೀತೆಗಳನ್ನು ಹಾಡುವ ಮೂಲಕ ಪ್ರೇಕ್ಷಕರು ಹುಚ್ಚೆದ್ದು ಕುಣಿಯುವಂತೆ ಮಾಡಿದರು.

ಕಾರ್ಯಕ್ರಮದಲ್ಲಿ ಶಾಸಕ ತನ್ವೀರ್ ಸೇಠ್, ಎಂಎಲ್ಸಿ ಕೆ. ಶಿವಕುಮಾರ್, ಅಪರ‌ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಅಪರ‌ ಜಿಲ್ಲಾಧಿಕಾರಿ ಶಿವರಾಜ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು, ತಾಂತ್ರಿಕ ‌ವಿಭಾಗದ ನಿರ್ದೇಶಕ ಡಿ.ಜೆ. ದಿವಾಕರ್, ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಎಂಡಿಎ ಆಯುಕ್ತ ಕೆ.ಆರ್. ರಕ್ಷಿತ್, ಎಸ್ಪಿ ವಿಷ್ಣುವರ್ಧನ್, ಸೆಸ್ಕ್ ಅಧೀಕ್ಷಕ ಇಂಜಿನಿಯರ್ ಸುನೀಲ್, ದಸರಾ ದೀಪಾಲಂಕಾರ ಉಪ ಸಮಿತಿ(ಅಧಿಕಾರೇತರ) ಅಧ್ಯಕ್ಷ ರಾಘವೇಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

17 mins ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

41 mins ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

1 hour ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

2 hours ago

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…

2 hours ago

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

2 hours ago