ನಮ್ಮ ಮೈಸೂರ ದಸರಾ 2025

ಮೈಸೂರು ದಸರಾ | ಅತ್ಯಾಕರ್ಷಕ ಡ್ರೋನ್ ಪ್ರದರ್ಶನಕ್ಕೆ ಮನಸೋತ ಮೈಸೂರಿಗರು

– ಬಣ್ಣಬಣ್ಣದ ಚಿತ್ತಾರ ಬಿಡಿಸಿದ 3000 ಡ್ರೋನ್ ಗಳು

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಹೊಸ ಮೆರಗು ನೀಡಿದ ಅತ್ಯಾಕರ್ಷಕ ಡ್ರೋನ್ ಪ್ರದರ್ಶನ, ಬಾನಂಗಳದಲ್ಲಿ ವಿವಿಧ ಕಲಾಕೃತಿಗಳ ಬಣ್ಣಬಣ್ಣದ ಚಿತ್ತಾರಗಳನ್ನು ಬಿಡಿಸಿದ 3000 ಡ್ರೋನ್ ಗಳು ಹೊಸ ಲೋಕವನ್ನು ಸೃಷ್ಟಿಸಿತು. ಇದರೊಂದಿಗೆ 2983 ಡ್ರೋನ್ ಗಳನ್ನು ಬಳಸಿ ರಾಷ್ಟ್ರೀಯ ಪ್ರಾಣಿ ಹುಲಿಯ ಕಲಾಕೃತಿ ರಚಿಸಿ ವಿಶ್ವದಾಖಲೆ‌ ನಿರ್ಮಿಸುವ ಮೂಲಕ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಮೈಸೂರಿನ ಹಿರಿಮೆಯನ್ನು ಹೆಚ್ಚಿಸಿದೆ.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವತಿಯಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಭಾನುವಾರ ಆಯೋಜಿಸಿದ್ದ ರೋಮಾಂಚಕಾರಿ ಡ್ರೋನ್ ಪ್ರದರ್ಶನ
ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನೆರೆದಿದ್ದ ಸಾವಿರಾರು ಜನರ ಕಣ್ಮನ ಸೆಳೆಯಿತು. ನೋಡುಗರನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ ಡ್ರೋನ್ ಪ್ರದರ್ಶನ ದಸರಾ ಮಹೋತ್ಸವದ ಸಂಭ್ರಮಕ್ಕೆ ರಂಗು ನೀಡಿತು.

ಗಿನ್ನಿಸ್ ವಿಶ್ವ ದಾಖಲೆ ನಿರ್ಮಾಣ
ಸೆಸ್ಕ್ ವತಿಯಿಂದ ನಡೆಸಲಾದ ಅತ್ಯಾಕರ್ಷಕ ಡ್ರೋನ್ ಪ್ರದರ್ಶನದಲ್ಲಿ ಹೊಸ ಗಿನ್ನಿಸ್ ವಿಶ್ವ ದಾಖಲೆ ನಿರ್ಮಾಣಗೊಂಡಿತು. ಈ ಬಾರಿಯ ಡ್ರೋನ್ ಪ್ರದರ್ಶನದಲ್ಲಿ ಒಟ್ಟು 2983 ಡ್ರೋನ್ ಗಳನ್ನು ಬಳಸಿಕೊಂಡು ಬಾನಂಗಳದಲ್ಲಿ ಬೃಹದಾಕಾರದ ಪ್ರಾಣಿ(ಹುಲಿ) ಕಲಾಕೃತಿಯನ್ನು ನಿರ್ಮಾಣ ಮಾಡುವ ಮೂಲಕ ಹೊಸದಾಗಿ ಗಿನ್ನಿಸ್ ವಿಶ್ವ ದಾಖಲೆ‌ ನಿರ್ಮಾಣ ಮಾಡಲಾಯಿತು. ಈ ಮೊದಲು 1985 ಡ್ರೋನ್ ಗಳನ್ನು ಬಳಸಿಕೊಂಡು ಹುಲಿಯ ಕಲಾಕೃತಿ ರಚಿಸುವ ಮೂಲಕ ದಾಖಲೆ ನಿರ್ಮಿಸಲಾಗಿತ್ತು.

ಇದನ್ನೂ ಓದಿ:-ಶ್ವಾನ ಪ್ರದರ್ಶನ : ಜರ್ಮನ್ ಶಫರ್ಡ್‌ಗೆ ಮೊದಲ ಸ್ಥಾನ

3000 ಡ್ರೋನ್ ಗಳ ಚಿತ್ತಾರ:
ಕಳೆದ ವರ್ಷ ನಡೆದ ಡ್ರೋನ್ ಪ್ರದರ್ಶನದಲ್ಲಿ 1500 ಡ್ರೋನ್ ಗಳ ಮೂಲಕ ಆಕರ್ಷಕ ಪ್ರದರ್ಶನವನ್ನು ನೀಡಲಾಗಿತ್ತು. ಆದರೆ ಈ ಬಾರಿಯ ಪ್ರದರ್ಶನವನ್ನು ಮತ್ತಷ್ಟು ಆಕರ್ಷಣೀಯವಾಗಿಸುವ ಸಲುವಾಗಿ ಒಟ್ಟು 3000 ಡ್ರೋನ್ ಬಳಸಿಕೊಂಡು ನಡೆಸಲಾದ ಡ್ರೋನ್ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಿತು. ಏಕಕಾಲದಲ್ಲಿ ಬಾನೆತ್ತರಕ್ಕೆ ಹಾರಿದ ಡ್ರೋನ್ ಗಳು ಬಣ್ಣಬಣ್ಣದ ದೀಪಗಳಿಂದ ಮಿನುಗುತ್ತಾ ಆಕರ್ಷಕ ಕಲಾಕೃತಿಗಳನ್ನು ಸೃಷ್ಟಿಸಿದವು.

ಸೌರಮಂಡಲ, ವಿಶ್ವಭೂಪಟ, ದೇಶದ ಹೆಮ್ಮೆಯ ಸೈನಿಕ, ನವಿಲು, ರಾಷ್ಟ್ರೀಯ ಪ್ರಾಣಿ ಹುಲಿ, ಡಾಲ್ಫಿನ್, ಈಗಲ್, ಸರ್ಪದ ಮೇಲೆ ಶ್ರೀಕೃಷ್ಣ ನೃತ್ಯ ಮಾಡುವುದು, ಕಾವೇರಿ ಮಾತೆ, ಕರ್ನಾಟಕ ಭೂಪಟದೊಂದಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್, ಪಂಚ ಗ್ಯಾರಂಟಿ ಯೋಜನೆಗಳಿಂದ ಕೂಡಿದ್ದ ಕರ್ನಾಟಕ ಭೂಪಟ‌, ಅಂಬಾರಿ ಆನೆ, ನಾಡದೇವತೆ ಚಾಮುಂಡೇಶ್ವರಿ ಕಲಾಕೃತಿಗಳು ನೋಡುಗರಿಗೆ ಅದ್ಭುತ ಮನರಂಜನೆ ನೀಡಿದವು.

ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಜ್ಯೋತಿ ಬೆಳಗುವ ಮೂಲಕ ಡ್ರೋನ್ ಪ್ರದರ್ಶನಕ್ಕೆ ಚಾಲನೆ ನೀಡಿದರು. ಡ್ರೋನ್ ಪ್ರದರ್ಶನದ ಆಕರ್ಷಣೆ ಕಣ್ತುಂಬಿಕೊಳ್ಳಲು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಜನರು ಕಿಕ್ಕಿರಿದು ತುಂಬಿದ್ದರು.

ಕುನಾಲ್ ಗಾಂಜಾವಾಲ ಹಾಡಿನ ಮೋಡಿ
ಡ್ರೋನ್ ಪ್ರದರ್ಶನ ಆರಂಭಕ್ಕೂ ಮುನ್ನ ಖ್ಯಾತ ಹಿನ್ನಲೆ ಗಾಯಕ ಕುನಾಲ್ ಗಾಂಜಾವಾಲ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ವೇದಿಕೆಗೆ ಬರುತ್ತಿದ್ದಂತೆ ಮೊದಲಿಗೆ ಪುನೀತ್ ರಾಜ್‍ಕುಮಾರ್ ಅಭಿನಯದ “ನೀನೆ ನೀನೆ”.. ಗೀತೆಯನ್ನು ಹಾಡಿ ರಂಜಿಸಿದ ಕುನಾಲ್ ಗಾಂಜಾವಾಲ, ಆ ನಂತರದಲ್ಲಿ ಕನ್ನಡದ “ಖುಷಿಯಾಗಿದೆ ಏಕೋ ನಿನ್ನಿಂದಲೆ…”, “ಒಂದೇ ಒಂದು ಸಾರಿ ಕಣ್ಮುಂದೆ ಬಾರೆ…”, “ನಿನ್ನ ಕಂಡ ಕ್ಷಣದಿಂದ…”, “ಹುಡುಗಿ ಹುಡುಗಿ ನಿನ್ನ ಕಂಡಾಗ”, “ಕಿವಿ ಮಾತೊಂದು ಹೇಳಲೆ ನಾನಿಂದು” ಸೇರಿದಂತೆ ಹಿಂದಿಯ ಹಲವು ಗೀತೆಗಳನ್ನು ಹಾಡುವ ಮೂಲಕ ಪ್ರೇಕ್ಷಕರು ಹುಚ್ಚೆದ್ದು ಕುಣಿಯುವಂತೆ ಮಾಡಿದರು.

ಕಾರ್ಯಕ್ರಮದಲ್ಲಿ ಶಾಸಕ ತನ್ವೀರ್ ಸೇಠ್, ಎಂಎಲ್ಸಿ ಕೆ. ಶಿವಕುಮಾರ್, ಅಪರ‌ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಅಪರ‌ ಜಿಲ್ಲಾಧಿಕಾರಿ ಶಿವರಾಜ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು, ತಾಂತ್ರಿಕ ‌ವಿಭಾಗದ ನಿರ್ದೇಶಕ ಡಿ.ಜೆ. ದಿವಾಕರ್, ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಎಂಡಿಎ ಆಯುಕ್ತ ಕೆ.ಆರ್. ರಕ್ಷಿತ್, ಎಸ್ಪಿ ವಿಷ್ಣುವರ್ಧನ್, ಸೆಸ್ಕ್ ಅಧೀಕ್ಷಕ ಇಂಜಿನಿಯರ್ ಸುನೀಲ್, ದಸರಾ ದೀಪಾಲಂಕಾರ ಉಪ ಸಮಿತಿ(ಅಧಿಕಾರೇತರ) ಅಧ್ಯಕ್ಷ ರಾಘವೇಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

18 mins ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

1 hour ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

1 hour ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

2 hours ago

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

3 hours ago

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

4 hours ago