ನಮ್ಮ ಮೈಸೂರ ದಸರಾ 2025

Mysuru Dasara | ಗಜಪಡೆಗಳ ಸೆಲ್ಫೀ, ರೀಲ್ಸ್ ಗೆ ಅವಕಾಶವಿಲ್ಲ

ಮೈಸೂರು : ದಸರಾ ಆನೆಗಳ ಸೊಂಡಿಲು, ದಂತ ಹಿಡಿದುಕೊಂಡು ಫೋಟೋ ರೀಲ್ಸ್ ಮಾಡಿ ಸಾಮಾಜಿಕ ತಾಣಗಳಲ್ಲಿ ಹಾಕುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತದಕ್ಕೆ ಕಡಿವಾಣ ಹಾಕಲಾಗಿದೆ ಎಂದು ಸಚಿವ ಈಶ್ವರ್‌ ಬಿ. ಖಂಡ್ರೆತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಆನೆಗಳನ್ನು ಪಳಗಿಸಿದ್ದರೂ, ಕೆಲವೊಂದು ಸಂದರ್ಭದಲ್ಲಿ ಪ್ರಾಣಿಗಳ ವರ್ತನೆಯನ್ನು ಊಹಿಸುವುದೂ ಅಸಾಧ್ಯ. ಹೀಗಾಗಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿರುವ ಆನೆಗಳ ಬಳಿ ಯಾರಿಗೂ ಬಿಡದಂತೆ ಸೂಚನೆ ನೀಡಲಾಗಿದೆ. ಆದರೂ ಕೆಲವರು ಫೋಟೋ, ರೀಲ್ಸ್ ಮಾಡಿದ್ದು ಇಂತಹವರಿಗೆ ನಿರ್ದಾಕ್ಷಿಣ್ಯವಾಗಿ ದಂಡ ಹಾಕಲು ಸೂಚಿಸಲಾಗಿದೆ ಎಂದರು.

ಇದನ್ನು ಓದಿ : ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ ಜಂಬೂಸವಾರಿ ರಿಹರ್ಸಲ್‌

ಕಳೆದ 18ರಂದು ಮಹಿಳೆಯೊಬ್ಬರು ಸಿಬ್ಬಂದಿಯ ಕಣ್ತಪ್ಪಿಸಿ ರೀಲ್ಸ್ ಮಾಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯನ್ನು ನೀಡಲಾಗಿದೆ. ಇದು ಮೇಲ್ನೋಟಕ್ಕೆ ಕರ್ತವ್ಯಲೋಪವಾಗಿದೆ ಎಂಬುದನ್ನು ಪುಷ್ಟೀಕರಿಸಿದ್ದು, ಅಧಿಕಾರಿ, ಸಿಬ್ಬಂದಿಗೂ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಯಸಳೂರಿನಲ್ಲಿ ಅರ್ಜುನ ಆನೆ ಸ್ಮಾರಕ ಅನಾವರಣ:
ಮೈಸೂರು ದಸರಾ ಜಂಬೂಸವಾರಿಯಲ್ಲಿ 8 ಬಾರಿ ಅಂಬಾರಿ ಹೊತ್ತು ಗಜಗಾಂಭೀರ್ಯದಿಂದ ಹೆಜ್ಜೆಹಾಕುತ್ತಾ ಜನಮನ ಗೆದ್ದಿದ್ದ ಅರ್ಜುನ ಆನೆ ಹಾಸನ ಜಿಲ್ಲೆ ಯಸಳೂರು ಬಳಿ ಆನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾಗಿದ್ದು, ಸರ್ಕಾರ ಅರ್ಜುನ ಇದ್ದ ನಾಗರಹೊಳೆಯ ಬಳ್ಳೆ ಮತ್ತು ಯಸಳೂರಿನಲ್ಲಿ ಸ್ಮಾರಕ ನಿರ್ಮಿಸಿದೆ ಎಂದರು.

ಈಗಾಗಲೇ ಬಳ್ಳೆಯ ಸ್ಮಾರಕವನ್ನು ವಿಧ್ಯುಕ್ತವಾಗಿ ಉದ್ಘಾಟಿಸಲಾಗಿದ್ದು, ಈ ತಿಂಗಳಲ್ಲಿ ಯಸಳೂರಿನಲ್ಲೂ ಅರ್ಜುನ ಆನೆ ಸ್ಮಾರಕ ಉದ್ಘಾಟಿಸುವುದಾಗಿ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

10 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

10 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

10 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

11 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

11 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

12 hours ago