ನಮ್ಮ ಮೈಸೂರ ದಸರಾ 2025

Mysuru Dasara | ಮೈಸೂರಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸ್‌ ಪಹರೆ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇಂದು(ಸೆ.22) ವಿದ್ಯುಕ್ತ ಚಾಲನೆ ನೀಡಲಾಗಿದೆ. ಲೇಖಕಿ ಬಾನು ಮುಷ್ತಾಕ್‌ ಅವರು ನಾಡದೇವಿ ಚಾಮುಂಡಿಗೆ ಪುಷ್ಪರ್ಚನೆ ಮಾಡುವ ಮೂಲಕ ದಸರೆಯ ಉದ್ಘಾಟಿಸಿ ತಮ್ಮ ಭಾಷಣದುದ್ದಕ್ಕೂ ಸಾಮರಸ್ಯದ ಕುರಿತು ಹೇಳಿದ್ದಾರೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೈಸೂರು ನಗರ ಹಾಗೂ ಚಾಮುಂಡಿಬೆಟ್ಟಕ್ಕೆ ಪೊಲೀಸ್ ಪಹರೆ ಹಾಕಲಾಗಿತ್ತು. ಉದ್ಘಾಟನಾ ಸಮಾರಂಭಕ್ಕೆ ಈ ಬಾರಿ ಹಿಂದೆಂದೂ ಕಾಣದ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಪೊಲೀಸರು ಹೆಜ್ಜೆ ಹೆಜ್ಜೆಗೂ ನಿಯೋಜನೆಗೊಂಡಿದ್ದರು. ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಭದ್ರತೆಯ ನೇತೃತ್ವ ವಹಿಸಿದ್ದರು. ಅಲ್ಲದೆ ಪಾಸ್ ಇದ್ದವರಿಗೆ ಮಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು, ಚಾಮುಂಡಿಬೆಟ್ಟಕ್ಕೆ ಬರಲು ಅವಕಾಶ ನೀಡಲಾಗಿತ್ತು. ಮಹಿಷಾಸುರ ಪ್ರತಿಮೆಯಿಂದ ಚಾಮುಂಡೇಶ್ವರಿ ದೇವಸ್ಥಾನದ ತನಕ ಹೆಜ್ಜೆ ಹೆಜ್ಜೆಗೂ ಪೊಲೀಸರನ್ನು ನಿಯೋಜಿಸಲಾಗಿತ್ತು. ಪಾಸ್ ಇದ್ದವರಿಗೆ, ವಿಐಪಿ, ಮಾಧ್ಯಮದವರಿಗೆ ಪ್ರತ್ಯೇಕ ಬ್ಯಾರಿಕೇಡ್ ಮಾರ್ಗವನ್ನು ನಿರ್ಮಿಸಲಾಗಿತ್ತು.

ಇದನ್ನು ಓದಿ: ದೇವಿ ಚಾಮುಂಡಿ ದ್ವೇಷ, ಅಸಹಿಷ್ಣುತೆಯನ್ನು ನಾಶ ಮಾಡಲಿ : ದಸರಾ ಉದ್ಘಾಟಕಿ ಬಾನು

ಎಲ್ಲೆಲ್ಲೂ ಪೊಲೀಸರ ಕಣ್ಗಾವಲು
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ, ಚಾಮುಂಡಿ ಬೆಟ್ಟಕ್ಕೆ ತೆರಳುವ ಪ್ರವಾಸಿಗರ ತೀವ್ರ ತಪಾಸಣೆ ಮಾಡಿದರು. ವಿಐಪಿ ಮತ್ತು ವಿವಿಐಪಿ ಸಂಚಾರ ಇರುವ ಕಾರಣ ಬೈಕ್‌ಗಳನ್ನು ಸಹ ಬಿಡುತ್ತಿರಲಿಲ್ಲ. ದ್ವಿಚಕ್ರ ವಾಹನದಲ್ಲಿ ಬಂದ ಪ್ರವಾಸಿಗರ ಡಿಕ್ಕಿ, ಕಾರುಗಳ ಡಿಕ್ಕಿ ತೆಗೆದು ಪೊಲೀಸರು ಪರಿಶೀಲಿಸಿದರು. ಬೆಳಗಿನ ಉಪಹಾರವನ್ನೂ ತೆಗೆದುಕೊಂಡು ಹೋಗದಂತೆ ತಡೆದರು. ಉಪಹಾರವೂ ಒಳಗೆ ಬಿಡದಿದ್ದಕ್ಕೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದರು.

ಒಬ್ಬ ಡಿಸಿಪಿ, ಇಬ್ಬರು ಎಸಿಪಿ, ಸಂಚಾರಿ ಪೊಲೀಸರು, ಕೆಎಸ್‌ಆರ್‌ಪಿ ಮತ್ತು ಡಿಎಆರ್ ಪೊಲೀಸರನ್ನು ನಿಯೋಜಿಸಲಾಗಿದೆ. ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳಿಂದಲೂ ಪೊಲೀಸರನ್ನು ಕರೆಸಲಾಗಿದೆ. ಮೂರು ಸಾವಿರ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ.

ಬಾನು ಮುಷ್ತಾಕ್‌ಗೆ ಬಿಗಿಭದ್ರತೆ
ಇನ್ನೂ ದಸರಾ ಉದ್ಘಾಟನೆಗೆ ಆಗಮಿಸಿರುವ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮಷ್ತಾಕ್ ಹಾಗೂ ಅವರ ಕುಟುಂಬದವರಿಗೆ ಪೊಲೀಸ್ ಭದ್ರತೆಯನ್ನು ನೀಡಲಾಗಿದೆ. ಅವರು ವಾಸ್ತವ್ಯ ಹೂಡಿದ್ದ ಹೋಟೆಲ್‌ಗೂ ಪೊಲೀಸರ ಕಾವಲು ಹಾಕಲಾಗಿದೆ. ಬಾನು ಮುಷ್ತಾಕ್ ಅವರು ವೇದಿಕೆಯಲ್ಲಿ ಆಸೀನರಾಗಿದ್ದಾಗ ಮಹಿಳಾ ಪಿಎಸ್‌ಐ ಭದ್ರತೆಗೆ ನಿಯೋಜನೆಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಯುದ್ಧ ಎಲ್ಲಿ ನಡೆದರೂ ಸಂಕಷ್ಟ ಬರುವುದು ಅಡುಗೆ ಮನೆಯೊಳಗೆ

ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್‌: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…

21 mins ago

ಸಫಾರಿ ವೇಳೆ ಮೊಬೈಲ್ ನಿಷೇಧ: ವನ್ಯಜೀವಿ ಛಾಯಾಗ್ರಾಹಕರಿಂದ ಸ್ವಾಗತ: ಕೆಲ ಸಫಾರಿ ಪ್ರಿಯರಿಗೆ ಬೇಸರ

ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…

31 mins ago

ಮಂಡ್ಯ: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ: ವಾಟಾಳ್‌ ನಾಗರಾಜ್‌ ಬಂಧನ

ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…

58 mins ago

ಸಫಾರಿ ಸ್ಥಗಿತ, ಪುನರಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…

1 hour ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ಅದ್ಧೂರಿಯಾಗಿ ಜರುಗಿದ ಅಗ್ನಿ ಕುಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…

2 hours ago

ಕೊಡಗು| 13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂರನೇ ಬಲಿ: ಕಾಫಿ ಬೆಳೆಗಾರ ದಾರುಣ ಸಾವು

ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…

2 hours ago