ನಮ್ಮ ಮೈಸೂರ ದಸರಾ 2025

Mysuru Dasara | ಮೈಸೂರಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸ್‌ ಪಹರೆ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇಂದು(ಸೆ.22) ವಿದ್ಯುಕ್ತ ಚಾಲನೆ ನೀಡಲಾಗಿದೆ. ಲೇಖಕಿ ಬಾನು ಮುಷ್ತಾಕ್‌ ಅವರು ನಾಡದೇವಿ ಚಾಮುಂಡಿಗೆ ಪುಷ್ಪರ್ಚನೆ ಮಾಡುವ ಮೂಲಕ ದಸರೆಯ ಉದ್ಘಾಟಿಸಿ ತಮ್ಮ ಭಾಷಣದುದ್ದಕ್ಕೂ ಸಾಮರಸ್ಯದ ಕುರಿತು ಹೇಳಿದ್ದಾರೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೈಸೂರು ನಗರ ಹಾಗೂ ಚಾಮುಂಡಿಬೆಟ್ಟಕ್ಕೆ ಪೊಲೀಸ್ ಪಹರೆ ಹಾಕಲಾಗಿತ್ತು. ಉದ್ಘಾಟನಾ ಸಮಾರಂಭಕ್ಕೆ ಈ ಬಾರಿ ಹಿಂದೆಂದೂ ಕಾಣದ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಪೊಲೀಸರು ಹೆಜ್ಜೆ ಹೆಜ್ಜೆಗೂ ನಿಯೋಜನೆಗೊಂಡಿದ್ದರು. ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಭದ್ರತೆಯ ನೇತೃತ್ವ ವಹಿಸಿದ್ದರು. ಅಲ್ಲದೆ ಪಾಸ್ ಇದ್ದವರಿಗೆ ಮಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು, ಚಾಮುಂಡಿಬೆಟ್ಟಕ್ಕೆ ಬರಲು ಅವಕಾಶ ನೀಡಲಾಗಿತ್ತು. ಮಹಿಷಾಸುರ ಪ್ರತಿಮೆಯಿಂದ ಚಾಮುಂಡೇಶ್ವರಿ ದೇವಸ್ಥಾನದ ತನಕ ಹೆಜ್ಜೆ ಹೆಜ್ಜೆಗೂ ಪೊಲೀಸರನ್ನು ನಿಯೋಜಿಸಲಾಗಿತ್ತು. ಪಾಸ್ ಇದ್ದವರಿಗೆ, ವಿಐಪಿ, ಮಾಧ್ಯಮದವರಿಗೆ ಪ್ರತ್ಯೇಕ ಬ್ಯಾರಿಕೇಡ್ ಮಾರ್ಗವನ್ನು ನಿರ್ಮಿಸಲಾಗಿತ್ತು.

ಇದನ್ನು ಓದಿ: ದೇವಿ ಚಾಮುಂಡಿ ದ್ವೇಷ, ಅಸಹಿಷ್ಣುತೆಯನ್ನು ನಾಶ ಮಾಡಲಿ : ದಸರಾ ಉದ್ಘಾಟಕಿ ಬಾನು

ಎಲ್ಲೆಲ್ಲೂ ಪೊಲೀಸರ ಕಣ್ಗಾವಲು
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ, ಚಾಮುಂಡಿ ಬೆಟ್ಟಕ್ಕೆ ತೆರಳುವ ಪ್ರವಾಸಿಗರ ತೀವ್ರ ತಪಾಸಣೆ ಮಾಡಿದರು. ವಿಐಪಿ ಮತ್ತು ವಿವಿಐಪಿ ಸಂಚಾರ ಇರುವ ಕಾರಣ ಬೈಕ್‌ಗಳನ್ನು ಸಹ ಬಿಡುತ್ತಿರಲಿಲ್ಲ. ದ್ವಿಚಕ್ರ ವಾಹನದಲ್ಲಿ ಬಂದ ಪ್ರವಾಸಿಗರ ಡಿಕ್ಕಿ, ಕಾರುಗಳ ಡಿಕ್ಕಿ ತೆಗೆದು ಪೊಲೀಸರು ಪರಿಶೀಲಿಸಿದರು. ಬೆಳಗಿನ ಉಪಹಾರವನ್ನೂ ತೆಗೆದುಕೊಂಡು ಹೋಗದಂತೆ ತಡೆದರು. ಉಪಹಾರವೂ ಒಳಗೆ ಬಿಡದಿದ್ದಕ್ಕೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದರು.

ಒಬ್ಬ ಡಿಸಿಪಿ, ಇಬ್ಬರು ಎಸಿಪಿ, ಸಂಚಾರಿ ಪೊಲೀಸರು, ಕೆಎಸ್‌ಆರ್‌ಪಿ ಮತ್ತು ಡಿಎಆರ್ ಪೊಲೀಸರನ್ನು ನಿಯೋಜಿಸಲಾಗಿದೆ. ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳಿಂದಲೂ ಪೊಲೀಸರನ್ನು ಕರೆಸಲಾಗಿದೆ. ಮೂರು ಸಾವಿರ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ.

ಬಾನು ಮುಷ್ತಾಕ್‌ಗೆ ಬಿಗಿಭದ್ರತೆ
ಇನ್ನೂ ದಸರಾ ಉದ್ಘಾಟನೆಗೆ ಆಗಮಿಸಿರುವ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮಷ್ತಾಕ್ ಹಾಗೂ ಅವರ ಕುಟುಂಬದವರಿಗೆ ಪೊಲೀಸ್ ಭದ್ರತೆಯನ್ನು ನೀಡಲಾಗಿದೆ. ಅವರು ವಾಸ್ತವ್ಯ ಹೂಡಿದ್ದ ಹೋಟೆಲ್‌ಗೂ ಪೊಲೀಸರ ಕಾವಲು ಹಾಕಲಾಗಿದೆ. ಬಾನು ಮುಷ್ತಾಕ್ ಅವರು ವೇದಿಕೆಯಲ್ಲಿ ಆಸೀನರಾಗಿದ್ದಾಗ ಮಹಿಳಾ ಪಿಎಸ್‌ಐ ಭದ್ರತೆಗೆ ನಿಯೋಜನೆಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

6 mins ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

54 mins ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

1 hour ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

1 hour ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

1 hour ago

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

2 hours ago