dasara (23)
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇಂದು(ಸೆ.22) ವಿದ್ಯುಕ್ತ ಚಾಲನೆ ನೀಡಲಾಗಿದೆ. ಲೇಖಕಿ ಬಾನು ಮುಷ್ತಾಕ್ ಅವರು ನಾಡದೇವಿ ಚಾಮುಂಡಿಗೆ ಪುಷ್ಪರ್ಚನೆ ಮಾಡುವ ಮೂಲಕ ದಸರೆಯ ಉದ್ಘಾಟಿಸಿ ತಮ್ಮ ಭಾಷಣದುದ್ದಕ್ಕೂ ಸಾಮರಸ್ಯದ ಕುರಿತು ಹೇಳಿದ್ದಾರೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮೈಸೂರು ನಗರ ಹಾಗೂ ಚಾಮುಂಡಿಬೆಟ್ಟಕ್ಕೆ ಪೊಲೀಸ್ ಪಹರೆ ಹಾಕಲಾಗಿತ್ತು. ಉದ್ಘಾಟನಾ ಸಮಾರಂಭಕ್ಕೆ ಈ ಬಾರಿ ಹಿಂದೆಂದೂ ಕಾಣದ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಪೊಲೀಸರು ಹೆಜ್ಜೆ ಹೆಜ್ಜೆಗೂ ನಿಯೋಜನೆಗೊಂಡಿದ್ದರು. ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಭದ್ರತೆಯ ನೇತೃತ್ವ ವಹಿಸಿದ್ದರು. ಅಲ್ಲದೆ ಪಾಸ್ ಇದ್ದವರಿಗೆ ಮಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು, ಚಾಮುಂಡಿಬೆಟ್ಟಕ್ಕೆ ಬರಲು ಅವಕಾಶ ನೀಡಲಾಗಿತ್ತು. ಮಹಿಷಾಸುರ ಪ್ರತಿಮೆಯಿಂದ ಚಾಮುಂಡೇಶ್ವರಿ ದೇವಸ್ಥಾನದ ತನಕ ಹೆಜ್ಜೆ ಹೆಜ್ಜೆಗೂ ಪೊಲೀಸರನ್ನು ನಿಯೋಜಿಸಲಾಗಿತ್ತು. ಪಾಸ್ ಇದ್ದವರಿಗೆ, ವಿಐಪಿ, ಮಾಧ್ಯಮದವರಿಗೆ ಪ್ರತ್ಯೇಕ ಬ್ಯಾರಿಕೇಡ್ ಮಾರ್ಗವನ್ನು ನಿರ್ಮಿಸಲಾಗಿತ್ತು.
ಇದನ್ನು ಓದಿ: ದೇವಿ ಚಾಮುಂಡಿ ದ್ವೇಷ, ಅಸಹಿಷ್ಣುತೆಯನ್ನು ನಾಶ ಮಾಡಲಿ : ದಸರಾ ಉದ್ಘಾಟಕಿ ಬಾನು
ಎಲ್ಲೆಲ್ಲೂ ಪೊಲೀಸರ ಕಣ್ಗಾವಲು
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ, ಚಾಮುಂಡಿ ಬೆಟ್ಟಕ್ಕೆ ತೆರಳುವ ಪ್ರವಾಸಿಗರ ತೀವ್ರ ತಪಾಸಣೆ ಮಾಡಿದರು. ವಿಐಪಿ ಮತ್ತು ವಿವಿಐಪಿ ಸಂಚಾರ ಇರುವ ಕಾರಣ ಬೈಕ್ಗಳನ್ನು ಸಹ ಬಿಡುತ್ತಿರಲಿಲ್ಲ. ದ್ವಿಚಕ್ರ ವಾಹನದಲ್ಲಿ ಬಂದ ಪ್ರವಾಸಿಗರ ಡಿಕ್ಕಿ, ಕಾರುಗಳ ಡಿಕ್ಕಿ ತೆಗೆದು ಪೊಲೀಸರು ಪರಿಶೀಲಿಸಿದರು. ಬೆಳಗಿನ ಉಪಹಾರವನ್ನೂ ತೆಗೆದುಕೊಂಡು ಹೋಗದಂತೆ ತಡೆದರು. ಉಪಹಾರವೂ ಒಳಗೆ ಬಿಡದಿದ್ದಕ್ಕೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದರು.
ಒಬ್ಬ ಡಿಸಿಪಿ, ಇಬ್ಬರು ಎಸಿಪಿ, ಸಂಚಾರಿ ಪೊಲೀಸರು, ಕೆಎಸ್ಆರ್ಪಿ ಮತ್ತು ಡಿಎಆರ್ ಪೊಲೀಸರನ್ನು ನಿಯೋಜಿಸಲಾಗಿದೆ. ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳಿಂದಲೂ ಪೊಲೀಸರನ್ನು ಕರೆಸಲಾಗಿದೆ. ಮೂರು ಸಾವಿರ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ.
ಬಾನು ಮುಷ್ತಾಕ್ಗೆ ಬಿಗಿಭದ್ರತೆ
ಇನ್ನೂ ದಸರಾ ಉದ್ಘಾಟನೆಗೆ ಆಗಮಿಸಿರುವ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮಷ್ತಾಕ್ ಹಾಗೂ ಅವರ ಕುಟುಂಬದವರಿಗೆ ಪೊಲೀಸ್ ಭದ್ರತೆಯನ್ನು ನೀಡಲಾಗಿದೆ. ಅವರು ವಾಸ್ತವ್ಯ ಹೂಡಿದ್ದ ಹೋಟೆಲ್ಗೂ ಪೊಲೀಸರ ಕಾವಲು ಹಾಕಲಾಗಿದೆ. ಬಾನು ಮುಷ್ತಾಕ್ ಅವರು ವೇದಿಕೆಯಲ್ಲಿ ಆಸೀನರಾಗಿದ್ದಾಗ ಮಹಿಳಾ ಪಿಎಸ್ಐ ಭದ್ರತೆಗೆ ನಿಯೋಜನೆಗೊಂಡಿದ್ದರು.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…