ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ದಸರಾ ಪುಸ್ತಕ ಮೇಳದಲ್ಲಿಂದು 4 ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ವತಿಯಿಂದ ಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಆಯೋಜಿಸಲಾಗಿರುವ ಕನ್ನಡ ಪುಸ್ತಕ ರಿಯಾಯಿತಿ ಮಾರಾಟ ಮೇಳದಲ್ಲಿ ಇಂದು 4 ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.
ಇದನ್ನು ಓದಿ: ಮೈಸೂರು ದಸರಾ ಮಹೋತ್ಸವ: ರೈತ ದಸರಾದ ಪ್ರಮುಖ ಆಕರ್ಷಣೆಗಳಿವು.!
ಪ್ರೊ. ಜಿ. ಅಬ್ದುಲ್ ಬಶೀರ್ ಅವರ ಚಿಂತನ ಮತ್ತು ಮನದಂಗಳದ ಮಾತುಕತೆ, ಡಾ. ನರಸಿಂಹಮೂರ್ತಿ ಹೂವಿನಹಳ್ಳಿ ಅವರ ತುಂಬಿ ಬಂದಿತ್ತಾ- ಬೇಂದ್ರೆ ಕಾವ್ಯದ ಅಧ್ಯಯನ ಹಾಗೂ ಡಾಕ್ಟರ್ ರೇಣುಕಾ ತಾಯಿ ಅವರ ದಿಲ್ಕಶ್ ಗಜಲ್ ಕೃತಿಗಳನ್ನು ಡಾ. ಬೋರೇಗೌಡ ಚಿಕ್ಕಮರಳಿ ಅವರು ಬಿಡುಗಡೆ ಮಾಡಿದರು.
ಕೃತಿಯ ಲೇಖಕರಾದ ಡಾ. ನರಸಿಂಹಮೂರ್ತಿ ಹೂವಿನಹಳ್ಳಿ ಹಾಗೂ ಡಾ. ರೇಣುಕಾ ತಾಯಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಸಮಿತಿ ಸದಸ್ಯರಾದ ಕವಯತ್ರಿ ಸುಚಿತ್ರ ಹೆಗಡೆ, ರಾಜಶೇಖರ ಕದಂಬ ಹಾಜರಿದ್ದರು.
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…
ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…