ಮೈಸೂರು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಕುಪ್ಪಣ್ಣ ಪಾರ್ಕ್ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ ಮೈಸೂರು ದಸರಾ ಸ್ವಚ್ಛತೆ ಮತ್ತು ವ್ಯವಸ್ಥೆ ಉಪಸಮಿತಿಯ ಅಧ್ಯಕ್ಷ ಸುಭಾನ್ ಅವರ ಅಧ್ಯಕ್ಷತೆಯಲ್ಲಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಲಾಯಿತು.
ಫಲಪುಷ್ಪ ಪ್ರದರ್ಶನದಲ್ಲಿ ಇಡಲಾಗಿರುವ ಎಲ್ಲಾ ಮಳಿಗೆಗಳಿಗೆ ಭೇಟಿ ನೀಡಿದ ಸುಭಾನ್ ತಂಡ, ಸಾರ್ವಜನಿಕರು ಹಸಿ ಮತ್ತು ಒಣ ಕಸವನ್ನು ಹಾಕಲು ಪ್ರತ್ಯೇಕ ಕಸದ ಬುಟ್ಟಿಗಳನ್ನು ಇಡಬೇಕು. ಕಸವನ್ನು ಮೈಸೂರು ಮಹಾನಗರ ಪಾಲಿಕೆಯ ವಾಹನಗಳಿಗೆ ನೀಡುವಂತೆ ಮಳಿಗೆದಾರರಿಗೆ ಸೂಚನೆ ನೀಡಿದರು.
ಕಸವನ್ನು ಬುಟ್ಟಿಯಲ್ಲಿ ಹಾಕಬೇಕು ಎಂಬ ಸಂದೇಶವಿರುವ ಫಲಕವನ್ನು ಅಳವಡಿಸಿಕೊಳ್ಳುವಂತೆ ಸೂಚನೆ ನೀಡಿದ ಅವರು, ಯಾವುದೇ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಸೂಚನೆ ನೀಡಿದರು.
ಇದನ್ನೂ ಓದಿ:-ಮೈಸೂರು ದಸರಾ: ಪ್ರೇಕ್ಷಕರ ಕಣ್ಮನ ಸೆಳೆದ ಮುದ್ದು ಪ್ರಾಣಿಗಳ ಪ್ರದರ್ಶನ
ಸ್ಥಳದಲ್ಲಿ ಹಾಜರಿದ್ದ ಆರೋಗ್ಯ ನಿರೀಕ್ಷಕರಾದ ಗೀತಾ ಅವರಿಗೆ ಮಳಿಗೆಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ವಶಪಡಿಸಿಕೊಂಡು ನಿಯಮಾನುಸಾರ ದಂಡ ವಿಧಿಸಿ ಎಂದು ಸೂಚನೆ ನೀಡಿದರು.
ಫಲ ಪುಷ್ಪ ಪ್ರದರ್ಶನದ ಪ್ರವೇಶ ದ್ವಾರದ ಹತ್ತಿರ ಸಾರ್ವಜನಿಕರ ಟಿಕೆಟ್ ಪರಿಶೀಲಿಸುವವರಿಗೆ ಟಿಕೆಟ್ ಹರಿದ ನಂತರ ಕಸದ ಬುಟ್ಟಿಯೊಳಗೆ ಹಾಕುವಂತೆ ಸಲಹೆ ನೀಡಿದರು. ಸ್ವಚ್ಛತೆಯಿಂದ ನಡೆಸುತ್ತಿರುವ ಮಳಿಗೆಯ ಮಾಲೀಕರಿಗೆ ಪ್ರಶಂಸೆ ವ್ಯಕ್ತಪಡಿಸಿದರು.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…