ಮೈಸೂರು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಕುಪ್ಪಣ್ಣ ಪಾರ್ಕ್ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ ಮೈಸೂರು ದಸರಾ ಸ್ವಚ್ಛತೆ ಮತ್ತು ವ್ಯವಸ್ಥೆ ಉಪಸಮಿತಿಯ ಅಧ್ಯಕ್ಷ ಸುಭಾನ್ ಅವರ ಅಧ್ಯಕ್ಷತೆಯಲ್ಲಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಲಾಯಿತು.
ಫಲಪುಷ್ಪ ಪ್ರದರ್ಶನದಲ್ಲಿ ಇಡಲಾಗಿರುವ ಎಲ್ಲಾ ಮಳಿಗೆಗಳಿಗೆ ಭೇಟಿ ನೀಡಿದ ಸುಭಾನ್ ತಂಡ, ಸಾರ್ವಜನಿಕರು ಹಸಿ ಮತ್ತು ಒಣ ಕಸವನ್ನು ಹಾಕಲು ಪ್ರತ್ಯೇಕ ಕಸದ ಬುಟ್ಟಿಗಳನ್ನು ಇಡಬೇಕು. ಕಸವನ್ನು ಮೈಸೂರು ಮಹಾನಗರ ಪಾಲಿಕೆಯ ವಾಹನಗಳಿಗೆ ನೀಡುವಂತೆ ಮಳಿಗೆದಾರರಿಗೆ ಸೂಚನೆ ನೀಡಿದರು.
ಕಸವನ್ನು ಬುಟ್ಟಿಯಲ್ಲಿ ಹಾಕಬೇಕು ಎಂಬ ಸಂದೇಶವಿರುವ ಫಲಕವನ್ನು ಅಳವಡಿಸಿಕೊಳ್ಳುವಂತೆ ಸೂಚನೆ ನೀಡಿದ ಅವರು, ಯಾವುದೇ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಸೂಚನೆ ನೀಡಿದರು.
ಇದನ್ನೂ ಓದಿ:-ಮೈಸೂರು ದಸರಾ: ಪ್ರೇಕ್ಷಕರ ಕಣ್ಮನ ಸೆಳೆದ ಮುದ್ದು ಪ್ರಾಣಿಗಳ ಪ್ರದರ್ಶನ
ಸ್ಥಳದಲ್ಲಿ ಹಾಜರಿದ್ದ ಆರೋಗ್ಯ ನಿರೀಕ್ಷಕರಾದ ಗೀತಾ ಅವರಿಗೆ ಮಳಿಗೆಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ವಶಪಡಿಸಿಕೊಂಡು ನಿಯಮಾನುಸಾರ ದಂಡ ವಿಧಿಸಿ ಎಂದು ಸೂಚನೆ ನೀಡಿದರು.
ಫಲ ಪುಷ್ಪ ಪ್ರದರ್ಶನದ ಪ್ರವೇಶ ದ್ವಾರದ ಹತ್ತಿರ ಸಾರ್ವಜನಿಕರ ಟಿಕೆಟ್ ಪರಿಶೀಲಿಸುವವರಿಗೆ ಟಿಕೆಟ್ ಹರಿದ ನಂತರ ಕಸದ ಬುಟ್ಟಿಯೊಳಗೆ ಹಾಕುವಂತೆ ಸಲಹೆ ನೀಡಿದರು. ಸ್ವಚ್ಛತೆಯಿಂದ ನಡೆಸುತ್ತಿರುವ ಮಳಿಗೆಯ ಮಾಲೀಕರಿಗೆ ಪ್ರಶಂಸೆ ವ್ಯಕ್ತಪಡಿಸಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…