ಮೈಸೂರು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಕುಪ್ಪಣ್ಣ ಪಾರ್ಕ್ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ ಮೈಸೂರು ದಸರಾ ಸ್ವಚ್ಛತೆ ಮತ್ತು ವ್ಯವಸ್ಥೆ ಉಪಸಮಿತಿಯ ಅಧ್ಯಕ್ಷ ಸುಭಾನ್ ಅವರ ಅಧ್ಯಕ್ಷತೆಯಲ್ಲಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಲಾಯಿತು.
ಫಲಪುಷ್ಪ ಪ್ರದರ್ಶನದಲ್ಲಿ ಇಡಲಾಗಿರುವ ಎಲ್ಲಾ ಮಳಿಗೆಗಳಿಗೆ ಭೇಟಿ ನೀಡಿದ ಸುಭಾನ್ ತಂಡ, ಸಾರ್ವಜನಿಕರು ಹಸಿ ಮತ್ತು ಒಣ ಕಸವನ್ನು ಹಾಕಲು ಪ್ರತ್ಯೇಕ ಕಸದ ಬುಟ್ಟಿಗಳನ್ನು ಇಡಬೇಕು. ಕಸವನ್ನು ಮೈಸೂರು ಮಹಾನಗರ ಪಾಲಿಕೆಯ ವಾಹನಗಳಿಗೆ ನೀಡುವಂತೆ ಮಳಿಗೆದಾರರಿಗೆ ಸೂಚನೆ ನೀಡಿದರು.
ಕಸವನ್ನು ಬುಟ್ಟಿಯಲ್ಲಿ ಹಾಕಬೇಕು ಎಂಬ ಸಂದೇಶವಿರುವ ಫಲಕವನ್ನು ಅಳವಡಿಸಿಕೊಳ್ಳುವಂತೆ ಸೂಚನೆ ನೀಡಿದ ಅವರು, ಯಾವುದೇ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಸೂಚನೆ ನೀಡಿದರು.
ಇದನ್ನೂ ಓದಿ:-ಮೈಸೂರು ದಸರಾ: ಪ್ರೇಕ್ಷಕರ ಕಣ್ಮನ ಸೆಳೆದ ಮುದ್ದು ಪ್ರಾಣಿಗಳ ಪ್ರದರ್ಶನ
ಸ್ಥಳದಲ್ಲಿ ಹಾಜರಿದ್ದ ಆರೋಗ್ಯ ನಿರೀಕ್ಷಕರಾದ ಗೀತಾ ಅವರಿಗೆ ಮಳಿಗೆಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ವಶಪಡಿಸಿಕೊಂಡು ನಿಯಮಾನುಸಾರ ದಂಡ ವಿಧಿಸಿ ಎಂದು ಸೂಚನೆ ನೀಡಿದರು.
ಫಲ ಪುಷ್ಪ ಪ್ರದರ್ಶನದ ಪ್ರವೇಶ ದ್ವಾರದ ಹತ್ತಿರ ಸಾರ್ವಜನಿಕರ ಟಿಕೆಟ್ ಪರಿಶೀಲಿಸುವವರಿಗೆ ಟಿಕೆಟ್ ಹರಿದ ನಂತರ ಕಸದ ಬುಟ್ಟಿಯೊಳಗೆ ಹಾಕುವಂತೆ ಸಲಹೆ ನೀಡಿದರು. ಸ್ವಚ್ಛತೆಯಿಂದ ನಡೆಸುತ್ತಿರುವ ಮಳಿಗೆಯ ಮಾಲೀಕರಿಗೆ ಪ್ರಶಂಸೆ ವ್ಯಕ್ತಪಡಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…