ಮೈಸೂರು : ದಸರಾ ಮಹೋತ್ಸವದ ಅಂಗವಾಗಿ ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಿರುವ ೮ ನೇ ದಿನದ ‘ಯುವ ಸಂಭ್ರಮ’ ವೇದಿಕೆಯಲ್ಲಿ ಮಕರ ಸಂಕ್ರಾಂತಿಯ ಸುಗ್ಗಿ ಸಂಭ್ರಮವನ್ನು ವಿದ್ಯಾರ್ಥಿಗಳು ಅನಾವರಣಗೊಳಿಸಿದರು.
ಮೈಸೂರಿನ ಗೋಕುಲಂನ ಮಾತೃಮಂಡಳಿ ಶಿಶು ವಿಕಾಸ ಕೇಂದ್ರದ ವಿದ್ಯಾರ್ಥಿಗಳು ಹೊಸ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಮತ್ತು ಸುಗ್ಗಿ ಸಂಭ್ರಮವನ್ನು ತೆರೆದಿಟ್ಟಾಗ ನೆರೆದಿದ್ದ ಯುವ ಸಮೂಹ ಚಪ್ಪಾಳೆ ತಟ್ಟಿದರು. ಗುಂಡ್ಲುಪೇಟೆಯ ಶ್ರೀ ಡಿ.ಬಿ.ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರೈತರ ಕೃಷಿ ಚಟುವಟಿಕೆಯನ್ನು ಅನಾವರಣಗೊಳಿಸಿದರು.
ಮೈಸೂರಿನ ಶೀರಾಂಪುರದ ನಿರ್ಮಲ ಕಾಂಪೋಸಿಟ್ ಕಾಲೇಜು, ಬೋಗಾದಿಯ ವಿಶ್ವೇಶ್ವರಯ್ಯ ಕೈಗಾರಿಕಾ ತರಬೇತಿ ಸಂಸ್ಥೆ, ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜು, ಕನಕದಾಸ ನಗರದ ಕೌಟಿಲ್ಯ ವಿದ್ಯಾಲಯದ ಪ್ರೀ ಯೂನಿವರ್ಸಿಟಿ ಕಾಲೇಜು, ನಾಗಮಂಗಲದ ಪ್ರಾಚಾರ್ಯ ಕಾರ್ಯಾಲಯ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ , ಮಡಿಕೇರಿಯ ಮಹದೇವ್ ಪೇಟ್ ಶ್ರೀರಾಜೇಶ್ವರಿ ವಿದ್ಯಾಲಯದ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗೆ ಹೆಜ್ಜೆಹಾಕಿದರು.
ಮೈಸೂರಿನ ಜೆ.ಎಸ್.ಎಸ್. ಪಾಲಿಟೆಕ್ನಿಕ್, ಹಾಸನ ಜಿಲ್ಲೆಯ ಅರಕಲಗೂಡಿನ ಏಕತಾರಿ ಸಾಂಸ್ಕ ತಿಕ ಸಂಘಟನೆ , ಹುಣಸೂರಿನ ಬಿಳಿಕೆರೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಾನಪದ ವೈವಿಧ್ಯತೆಯ ಪರಂಪರೆ ಸಾರಿದರೆ, ಬೆಂಗಳೂರಿನ ಮತ್ತಿಕೆರೆ ರಾಯಲ್ ಪಿಯು ಕಾಲೇಜು, ಮೈಸೂರಿನ ದಟ್ಟಗಳ್ಳಿಯ ವಿಶ್ವ ಪ್ರಜ್ಞಾ ಪಿಯು ಕಾಲೇಜು, ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಜೆ.ಪಿ.ನಗರದ ಜೆ.ಎಸ್.ಎಸ್. ಪದವಿಪೂರ್ವ ಕಾಲೇಜು, ವಿದ್ಯಾವರ್ಧಕ ಸಂಯುಕ್ತ ಪದವಿ ಪೂರ್ವ ಕಾಲೆಜು, ತುಮಕೂರು ಜಿಲ್ಲೆ ಹುಲಿಯೂರು ದುರ್ಗ ಸರ್ಕಾರಿ ಪ.ಪೂ. ಕಾಲೇಜು, ಮಂಡ್ಯ ಜಿಲ್ಲೆ ಮದ್ದೂರಿನ ದಿ ಆರ್.ಕೆ. ಕಾಲೇಜು – ಸ್ಕೂಲ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳು ನೃತ್ಯದ ಮೂಲಕ ಕರ್ನಾಟಕ ವೈಭವವನ್ನ ಸಾದರಪಡಿಸಿದರು.
ನಾಳೆ ಯುವ ಸಂಭ್ರಮಕ್ಕೆ ತೆರೆ : ದಸರಾ ಮಹೋತ್ಸವದ ಅಂಗವಾಗಿ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ೮ ದಿನಗಳಿಂದ ನಡೆಯುತ್ತಿರುವ ಯುವ ಸಂಭ್ರಮಕ್ಕೆ ಇಂದು ತೆರೆಬೀಳಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…
ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…