ನಮ್ಮ ಮೈಸೂರ ದಸರಾ 2025

Mysuru dasara | ಯುವ ಸಂಭ್ರಮದಲ್ಲಿ ಸುಗ್ಗಿ ಸಂಭ್ರಮ

ಮೈಸೂರು : ದಸರಾ ಮಹೋತ್ಸವದ ಅಂಗವಾಗಿ ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಿರುವ ೮ ನೇ ದಿನದ ‘ಯುವ ಸಂಭ್ರಮ’ ವೇದಿಕೆಯಲ್ಲಿ ಮಕರ ಸಂಕ್ರಾಂತಿಯ ಸುಗ್ಗಿ ಸಂಭ್ರಮವನ್ನು ವಿದ್ಯಾರ್ಥಿಗಳು ಅನಾವರಣಗೊಳಿಸಿದರು.

ಮೈಸೂರಿನ ಗೋಕುಲಂನ ಮಾತೃಮಂಡಳಿ ಶಿಶು ವಿಕಾಸ ಕೇಂದ್ರದ ವಿದ್ಯಾರ್ಥಿಗಳು ಹೊಸ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಮತ್ತು ಸುಗ್ಗಿ ಸಂಭ್ರಮವನ್ನು ತೆರೆದಿಟ್ಟಾಗ ನೆರೆದಿದ್ದ ಯುವ ಸಮೂಹ ಚಪ್ಪಾಳೆ ತಟ್ಟಿದರು. ಗುಂಡ್ಲುಪೇಟೆಯ ಶ್ರೀ ಡಿ.ಬಿ.ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರೈತರ ಕೃಷಿ ಚಟುವಟಿಕೆಯನ್ನು ಅನಾವರಣಗೊಳಿಸಿದರು.

ಮೈಸೂರಿನ ಶೀರಾಂಪುರದ ನಿರ್ಮಲ ಕಾಂಪೋಸಿಟ್ ಕಾಲೇಜು, ಬೋಗಾದಿಯ ವಿಶ್ವೇಶ್ವರಯ್ಯ ಕೈಗಾರಿಕಾ ತರಬೇತಿ ಸಂಸ್ಥೆ, ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜು, ಕನಕದಾಸ ನಗರದ ಕೌಟಿಲ್ಯ ವಿದ್ಯಾಲಯದ ಪ್ರೀ ಯೂನಿವರ್ಸಿಟಿ ಕಾಲೇಜು, ನಾಗಮಂಗಲದ ಪ್ರಾಚಾರ್ಯ ಕಾರ್ಯಾಲಯ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ , ಮಡಿಕೇರಿಯ ಮಹದೇವ್ ಪೇಟ್ ಶ್ರೀರಾಜೇಶ್ವರಿ ವಿದ್ಯಾಲಯದ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗೆ ಹೆಜ್ಜೆಹಾಕಿದರು.

ಮೈಸೂರಿನ ಜೆ.ಎಸ್.ಎಸ್. ಪಾಲಿಟೆಕ್ನಿಕ್, ಹಾಸನ ಜಿಲ್ಲೆಯ ಅರಕಲಗೂಡಿನ ಏಕತಾರಿ ಸಾಂಸ್ಕ ತಿಕ ಸಂಘಟನೆ , ಹುಣಸೂರಿನ ಬಿಳಿಕೆರೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಾನಪದ ವೈವಿಧ್ಯತೆಯ ಪರಂಪರೆ ಸಾರಿದರೆ, ಬೆಂಗಳೂರಿನ ಮತ್ತಿಕೆರೆ ರಾಯಲ್ ಪಿಯು ಕಾಲೇಜು, ಮೈಸೂರಿನ ದಟ್ಟಗಳ್ಳಿಯ ವಿಶ್ವ ಪ್ರಜ್ಞಾ ಪಿಯು ಕಾಲೇಜು, ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಜೆ.ಪಿ.ನಗರದ ಜೆ.ಎಸ್.ಎಸ್. ಪದವಿಪೂರ್ವ ಕಾಲೇಜು, ವಿದ್ಯಾವರ್ಧಕ ಸಂಯುಕ್ತ ಪದವಿ ಪೂರ್ವ ಕಾಲೆಜು, ತುಮಕೂರು ಜಿಲ್ಲೆ ಹುಲಿಯೂರು ದುರ್ಗ ಸರ್ಕಾರಿ ಪ.ಪೂ. ಕಾಲೇಜು, ಮಂಡ್ಯ ಜಿಲ್ಲೆ ಮದ್ದೂರಿನ ದಿ ಆರ್.ಕೆ. ಕಾಲೇಜು – ಸ್ಕೂಲ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳು ನೃತ್ಯದ ಮೂಲಕ ಕರ್ನಾಟಕ ವೈಭವವನ್ನ ಸಾದರಪಡಿಸಿದರು.

ನಾಳೆ ಯುವ ಸಂಭ್ರಮಕ್ಕೆ ತೆರೆ : ದಸರಾ ಮಹೋತ್ಸವದ ಅಂಗವಾಗಿ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ೮ ದಿನಗಳಿಂದ ನಡೆಯುತ್ತಿರುವ ಯುವ ಸಂಭ್ರಮಕ್ಕೆ ಇಂದು ತೆರೆಬೀಳಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

50 mins ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

51 mins ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

53 mins ago

ಓದುಗರ ಪತ್ರ: ಕೋಚಿಂಗ್ ದಂಧೆಗೆ ಕಡಿವಾಣ ಹಾಕಿ

ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…

55 mins ago

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

4 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

4 hours ago