ನಮ್ಮ ಮೈಸೂರ ದಸರಾ 2025

Mysuru dasara | ಯುವ ಸಂಭ್ರಮದಲ್ಲಿ ಸುಗ್ಗಿ ಸಂಭ್ರಮ

ಮೈಸೂರು : ದಸರಾ ಮಹೋತ್ಸವದ ಅಂಗವಾಗಿ ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಿರುವ ೮ ನೇ ದಿನದ ‘ಯುವ ಸಂಭ್ರಮ’ ವೇದಿಕೆಯಲ್ಲಿ ಮಕರ ಸಂಕ್ರಾಂತಿಯ ಸುಗ್ಗಿ ಸಂಭ್ರಮವನ್ನು ವಿದ್ಯಾರ್ಥಿಗಳು ಅನಾವರಣಗೊಳಿಸಿದರು.

ಮೈಸೂರಿನ ಗೋಕುಲಂನ ಮಾತೃಮಂಡಳಿ ಶಿಶು ವಿಕಾಸ ಕೇಂದ್ರದ ವಿದ್ಯಾರ್ಥಿಗಳು ಹೊಸ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಮತ್ತು ಸುಗ್ಗಿ ಸಂಭ್ರಮವನ್ನು ತೆರೆದಿಟ್ಟಾಗ ನೆರೆದಿದ್ದ ಯುವ ಸಮೂಹ ಚಪ್ಪಾಳೆ ತಟ್ಟಿದರು. ಗುಂಡ್ಲುಪೇಟೆಯ ಶ್ರೀ ಡಿ.ಬಿ.ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರೈತರ ಕೃಷಿ ಚಟುವಟಿಕೆಯನ್ನು ಅನಾವರಣಗೊಳಿಸಿದರು.

ಮೈಸೂರಿನ ಶೀರಾಂಪುರದ ನಿರ್ಮಲ ಕಾಂಪೋಸಿಟ್ ಕಾಲೇಜು, ಬೋಗಾದಿಯ ವಿಶ್ವೇಶ್ವರಯ್ಯ ಕೈಗಾರಿಕಾ ತರಬೇತಿ ಸಂಸ್ಥೆ, ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜು, ಕನಕದಾಸ ನಗರದ ಕೌಟಿಲ್ಯ ವಿದ್ಯಾಲಯದ ಪ್ರೀ ಯೂನಿವರ್ಸಿಟಿ ಕಾಲೇಜು, ನಾಗಮಂಗಲದ ಪ್ರಾಚಾರ್ಯ ಕಾರ್ಯಾಲಯ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ , ಮಡಿಕೇರಿಯ ಮಹದೇವ್ ಪೇಟ್ ಶ್ರೀರಾಜೇಶ್ವರಿ ವಿದ್ಯಾಲಯದ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗೆ ಹೆಜ್ಜೆಹಾಕಿದರು.

ಮೈಸೂರಿನ ಜೆ.ಎಸ್.ಎಸ್. ಪಾಲಿಟೆಕ್ನಿಕ್, ಹಾಸನ ಜಿಲ್ಲೆಯ ಅರಕಲಗೂಡಿನ ಏಕತಾರಿ ಸಾಂಸ್ಕ ತಿಕ ಸಂಘಟನೆ , ಹುಣಸೂರಿನ ಬಿಳಿಕೆರೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಾನಪದ ವೈವಿಧ್ಯತೆಯ ಪರಂಪರೆ ಸಾರಿದರೆ, ಬೆಂಗಳೂರಿನ ಮತ್ತಿಕೆರೆ ರಾಯಲ್ ಪಿಯು ಕಾಲೇಜು, ಮೈಸೂರಿನ ದಟ್ಟಗಳ್ಳಿಯ ವಿಶ್ವ ಪ್ರಜ್ಞಾ ಪಿಯು ಕಾಲೇಜು, ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಜೆ.ಪಿ.ನಗರದ ಜೆ.ಎಸ್.ಎಸ್. ಪದವಿಪೂರ್ವ ಕಾಲೇಜು, ವಿದ್ಯಾವರ್ಧಕ ಸಂಯುಕ್ತ ಪದವಿ ಪೂರ್ವ ಕಾಲೆಜು, ತುಮಕೂರು ಜಿಲ್ಲೆ ಹುಲಿಯೂರು ದುರ್ಗ ಸರ್ಕಾರಿ ಪ.ಪೂ. ಕಾಲೇಜು, ಮಂಡ್ಯ ಜಿಲ್ಲೆ ಮದ್ದೂರಿನ ದಿ ಆರ್.ಕೆ. ಕಾಲೇಜು – ಸ್ಕೂಲ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳು ನೃತ್ಯದ ಮೂಲಕ ಕರ್ನಾಟಕ ವೈಭವವನ್ನ ಸಾದರಪಡಿಸಿದರು.

ನಾಳೆ ಯುವ ಸಂಭ್ರಮಕ್ಕೆ ತೆರೆ : ದಸರಾ ಮಹೋತ್ಸವದ ಅಂಗವಾಗಿ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ೮ ದಿನಗಳಿಂದ ನಡೆಯುತ್ತಿರುವ ಯುವ ಸಂಭ್ರಮಕ್ಕೆ ಇಂದು ತೆರೆಬೀಳಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಟಿವಿಕೆ ವಿಜಯ್ ಪಕ್ಷಕ್ಕೆ ಸೀಟಿ ಗುರುತು ನೀಡಿದ ಆಯೋಗ

ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…

28 mins ago

ಮ.ಬೆಟ್ಟ | ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

39 mins ago

MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ ಇರಲಿದೆ : ಸಿಎಂ

ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…

49 mins ago

ಒಂದು ಎಕರೆಯಲ್ಲಿ 102 ವಿವಿಧ ಬೆಳೆ : ರೋಗರಹಿತ ಬೆಳೆಗಳ ತಳಿ ಪ್ರದರ್ಶನ

ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…

1 hour ago

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ 2 ತಿಂಗಳಲ್ಲಿ ದಾಖಲೆಯ ಆದಾಯ

ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್‌ ಹಾಗೂ…

3 hours ago

ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…

3 hours ago