ನಮ್ಮ ಮೈಸೂರ ದಸರಾ 2025

Mysuru dasara | ಯುವ ಸಂಭ್ರಮದಲ್ಲಿ ಸುಗ್ಗಿ ಸಂಭ್ರಮ

ಮೈಸೂರು : ದಸರಾ ಮಹೋತ್ಸವದ ಅಂಗವಾಗಿ ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಿರುವ ೮ ನೇ ದಿನದ ‘ಯುವ ಸಂಭ್ರಮ’ ವೇದಿಕೆಯಲ್ಲಿ ಮಕರ ಸಂಕ್ರಾಂತಿಯ ಸುಗ್ಗಿ ಸಂಭ್ರಮವನ್ನು ವಿದ್ಯಾರ್ಥಿಗಳು ಅನಾವರಣಗೊಳಿಸಿದರು.

ಮೈಸೂರಿನ ಗೋಕುಲಂನ ಮಾತೃಮಂಡಳಿ ಶಿಶು ವಿಕಾಸ ಕೇಂದ್ರದ ವಿದ್ಯಾರ್ಥಿಗಳು ಹೊಸ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಮತ್ತು ಸುಗ್ಗಿ ಸಂಭ್ರಮವನ್ನು ತೆರೆದಿಟ್ಟಾಗ ನೆರೆದಿದ್ದ ಯುವ ಸಮೂಹ ಚಪ್ಪಾಳೆ ತಟ್ಟಿದರು. ಗುಂಡ್ಲುಪೇಟೆಯ ಶ್ರೀ ಡಿ.ಬಿ.ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರೈತರ ಕೃಷಿ ಚಟುವಟಿಕೆಯನ್ನು ಅನಾವರಣಗೊಳಿಸಿದರು.

ಮೈಸೂರಿನ ಶೀರಾಂಪುರದ ನಿರ್ಮಲ ಕಾಂಪೋಸಿಟ್ ಕಾಲೇಜು, ಬೋಗಾದಿಯ ವಿಶ್ವೇಶ್ವರಯ್ಯ ಕೈಗಾರಿಕಾ ತರಬೇತಿ ಸಂಸ್ಥೆ, ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜು, ಕನಕದಾಸ ನಗರದ ಕೌಟಿಲ್ಯ ವಿದ್ಯಾಲಯದ ಪ್ರೀ ಯೂನಿವರ್ಸಿಟಿ ಕಾಲೇಜು, ನಾಗಮಂಗಲದ ಪ್ರಾಚಾರ್ಯ ಕಾರ್ಯಾಲಯ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ , ಮಡಿಕೇರಿಯ ಮಹದೇವ್ ಪೇಟ್ ಶ್ರೀರಾಜೇಶ್ವರಿ ವಿದ್ಯಾಲಯದ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗೆ ಹೆಜ್ಜೆಹಾಕಿದರು.

ಮೈಸೂರಿನ ಜೆ.ಎಸ್.ಎಸ್. ಪಾಲಿಟೆಕ್ನಿಕ್, ಹಾಸನ ಜಿಲ್ಲೆಯ ಅರಕಲಗೂಡಿನ ಏಕತಾರಿ ಸಾಂಸ್ಕ ತಿಕ ಸಂಘಟನೆ , ಹುಣಸೂರಿನ ಬಿಳಿಕೆರೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಾನಪದ ವೈವಿಧ್ಯತೆಯ ಪರಂಪರೆ ಸಾರಿದರೆ, ಬೆಂಗಳೂರಿನ ಮತ್ತಿಕೆರೆ ರಾಯಲ್ ಪಿಯು ಕಾಲೇಜು, ಮೈಸೂರಿನ ದಟ್ಟಗಳ್ಳಿಯ ವಿಶ್ವ ಪ್ರಜ್ಞಾ ಪಿಯು ಕಾಲೇಜು, ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಜೆ.ಪಿ.ನಗರದ ಜೆ.ಎಸ್.ಎಸ್. ಪದವಿಪೂರ್ವ ಕಾಲೇಜು, ವಿದ್ಯಾವರ್ಧಕ ಸಂಯುಕ್ತ ಪದವಿ ಪೂರ್ವ ಕಾಲೆಜು, ತುಮಕೂರು ಜಿಲ್ಲೆ ಹುಲಿಯೂರು ದುರ್ಗ ಸರ್ಕಾರಿ ಪ.ಪೂ. ಕಾಲೇಜು, ಮಂಡ್ಯ ಜಿಲ್ಲೆ ಮದ್ದೂರಿನ ದಿ ಆರ್.ಕೆ. ಕಾಲೇಜು – ಸ್ಕೂಲ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳು ನೃತ್ಯದ ಮೂಲಕ ಕರ್ನಾಟಕ ವೈಭವವನ್ನ ಸಾದರಪಡಿಸಿದರು.

ನಾಳೆ ಯುವ ಸಂಭ್ರಮಕ್ಕೆ ತೆರೆ : ದಸರಾ ಮಹೋತ್ಸವದ ಅಂಗವಾಗಿ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ೮ ದಿನಗಳಿಂದ ನಡೆಯುತ್ತಿರುವ ಯುವ ಸಂಭ್ರಮಕ್ಕೆ ಇಂದು ತೆರೆಬೀಳಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

17 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

17 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

17 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

17 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

17 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

17 hours ago