ನಮ್ಮ ಮೈಸೂರ ದಸರಾ 2025

Mysuru dasara | ಯುವ ಸಂಭ್ರಮದಲ್ಲಿ ಸುಗ್ಗಿ ಸಂಭ್ರಮ

ಮೈಸೂರು : ದಸರಾ ಮಹೋತ್ಸವದ ಅಂಗವಾಗಿ ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಆಯೋಜಿಸಿರುವ ೮ ನೇ ದಿನದ ‘ಯುವ ಸಂಭ್ರಮ’ ವೇದಿಕೆಯಲ್ಲಿ ಮಕರ ಸಂಕ್ರಾಂತಿಯ ಸುಗ್ಗಿ ಸಂಭ್ರಮವನ್ನು ವಿದ್ಯಾರ್ಥಿಗಳು ಅನಾವರಣಗೊಳಿಸಿದರು.

ಮೈಸೂರಿನ ಗೋಕುಲಂನ ಮಾತೃಮಂಡಳಿ ಶಿಶು ವಿಕಾಸ ಕೇಂದ್ರದ ವಿದ್ಯಾರ್ಥಿಗಳು ಹೊಸ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಮತ್ತು ಸುಗ್ಗಿ ಸಂಭ್ರಮವನ್ನು ತೆರೆದಿಟ್ಟಾಗ ನೆರೆದಿದ್ದ ಯುವ ಸಮೂಹ ಚಪ್ಪಾಳೆ ತಟ್ಟಿದರು. ಗುಂಡ್ಲುಪೇಟೆಯ ಶ್ರೀ ಡಿ.ಬಿ.ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರೈತರ ಕೃಷಿ ಚಟುವಟಿಕೆಯನ್ನು ಅನಾವರಣಗೊಳಿಸಿದರು.

ಮೈಸೂರಿನ ಶೀರಾಂಪುರದ ನಿರ್ಮಲ ಕಾಂಪೋಸಿಟ್ ಕಾಲೇಜು, ಬೋಗಾದಿಯ ವಿಶ್ವೇಶ್ವರಯ್ಯ ಕೈಗಾರಿಕಾ ತರಬೇತಿ ಸಂಸ್ಥೆ, ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜು, ಕನಕದಾಸ ನಗರದ ಕೌಟಿಲ್ಯ ವಿದ್ಯಾಲಯದ ಪ್ರೀ ಯೂನಿವರ್ಸಿಟಿ ಕಾಲೇಜು, ನಾಗಮಂಗಲದ ಪ್ರಾಚಾರ್ಯ ಕಾರ್ಯಾಲಯ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ , ಮಡಿಕೇರಿಯ ಮಹದೇವ್ ಪೇಟ್ ಶ್ರೀರಾಜೇಶ್ವರಿ ವಿದ್ಯಾಲಯದ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗೆ ಹೆಜ್ಜೆಹಾಕಿದರು.

ಮೈಸೂರಿನ ಜೆ.ಎಸ್.ಎಸ್. ಪಾಲಿಟೆಕ್ನಿಕ್, ಹಾಸನ ಜಿಲ್ಲೆಯ ಅರಕಲಗೂಡಿನ ಏಕತಾರಿ ಸಾಂಸ್ಕ ತಿಕ ಸಂಘಟನೆ , ಹುಣಸೂರಿನ ಬಿಳಿಕೆರೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಾನಪದ ವೈವಿಧ್ಯತೆಯ ಪರಂಪರೆ ಸಾರಿದರೆ, ಬೆಂಗಳೂರಿನ ಮತ್ತಿಕೆರೆ ರಾಯಲ್ ಪಿಯು ಕಾಲೇಜು, ಮೈಸೂರಿನ ದಟ್ಟಗಳ್ಳಿಯ ವಿಶ್ವ ಪ್ರಜ್ಞಾ ಪಿಯು ಕಾಲೇಜು, ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಜೆ.ಪಿ.ನಗರದ ಜೆ.ಎಸ್.ಎಸ್. ಪದವಿಪೂರ್ವ ಕಾಲೇಜು, ವಿದ್ಯಾವರ್ಧಕ ಸಂಯುಕ್ತ ಪದವಿ ಪೂರ್ವ ಕಾಲೆಜು, ತುಮಕೂರು ಜಿಲ್ಲೆ ಹುಲಿಯೂರು ದುರ್ಗ ಸರ್ಕಾರಿ ಪ.ಪೂ. ಕಾಲೇಜು, ಮಂಡ್ಯ ಜಿಲ್ಲೆ ಮದ್ದೂರಿನ ದಿ ಆರ್.ಕೆ. ಕಾಲೇಜು – ಸ್ಕೂಲ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳು ನೃತ್ಯದ ಮೂಲಕ ಕರ್ನಾಟಕ ವೈಭವವನ್ನ ಸಾದರಪಡಿಸಿದರು.

ನಾಳೆ ಯುವ ಸಂಭ್ರಮಕ್ಕೆ ತೆರೆ : ದಸರಾ ಮಹೋತ್ಸವದ ಅಂಗವಾಗಿ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ೮ ದಿನಗಳಿಂದ ನಡೆಯುತ್ತಿರುವ ಯುವ ಸಂಭ್ರಮಕ್ಕೆ ಇಂದು ತೆರೆಬೀಳಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

21 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

21 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

21 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

22 hours ago