ನಮ್ಮ ಮೈಸೂರ ದಸರಾ 2025

Mysuru dasara | ಅರಮನೆಯಲ್ಲಿ ಥೈಕ್ಕುಡಂ ಬ್ರಿಡ್ಜ್‌ ಸಂಗೀತದ ಹೊಳೆ

ಮೈಸೂರು : ಬಣ್ಣ ಬಣ್ಣಗಳ ವಿದ್ಯುತ್ ಬೆಳಕು, ಕಣ್ಮನ ಸೆಳೆಯುವ ವೇದಿಕೆ, ರಂಜಿಸಿದ ಮಲೆಯಾಳಂ ಗೀತೆ ಹಾಗೂ ಯುವ ಮನಸ್ಸುಗಳ ಕುಣಿತಗಳ ನಡುವೆ ಕೇರಳದ ‘ಥೈಕ್ಕುಡಂ ಬ್ರಿಡ್ಜ್’ ಬ್ಯಾಂಡ್ ಅಂಬಾವಿಲಾಸ ಅರಮನೆ ಮುಂಭಾಗದ ವೇದಿಕೆಯಲ್ಲಿ ಸಂಗೀತದ ಹೊಳೆಯನ್ನೇ ಹರಿಸಿತು.

೩೦ಕ್ಕೂ ಹೆಚ್ಚು ದೇಶಗಳಲ್ಲಿ ೮೦೦ಕ್ಕೂ ಹೆಚ್ಚು ಸಂಗೀತ ಪ್ರರ್ದಶಿಸಿ ಅಪಾರ ಅಭಿಮಾನಿಗಳನ್ನಿ ಪ್ರಂಪಚದ್ಯಾಂತ ಗಳಿಸಿರುವ ಥೈಕ್ಕುಡಂ ಬ್ರಿಡ್ಜ್ ಇದೇ ಮೊದಲ ಬಾರಿಗೆ ಮೈಸೂರು ದಸರಾ ಮಹೋತ್ಸವದಲ್ಲಿ ಪ್ರದರ್ಶನ ನೀಡಿತು.

ಕೇರಳದ ವಿದ್ಯಾರ್ಥಿಗಳು ಬ್ಯಾಂಡ್ ವೀಕ್ಷಣೆಗೆ ಅರಮನೆ ತುಂಬಿದ್ದರು. ಎಲ್ಲರಿಗೂ ನಮಸ್ಕಾರ ದಸರಾ ಹಬ್ಬದ ಶುಭಾಶಯಗಳು ಆರ್ಥಿಕ ಶುಭಾಶಯಗಳು ಎಂದು ಕನ್ನಡದಲ್ಲೇ ಹೇಳಿ ನವರಸಂ ಗೀತೆಯನ್ನು ಬ್ಯಾಂಡ್‌ನ ಸದಸ್ಯರು ಪ್ರಸ್ತುತಪಡಿಸಿದರು.

ಇದನ್ನು ಓದಿ : ಮೈಸೂರಿನಲ್ಲಿ ವಿಂಟೇಜ್ ಕಾರುಗಳ ಹವಾ

ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರ ಸಂಯೋಜನೆಯ ‘ರೆಟ್ಟ್ತ್ಯೈ ವಾಲ್ ಕುರುವಿ’ ಸಿನಿಮಾದ ‘ರಾಜರಾಜ ಸೋ ಳನ್ನ….’ ಎಂಬ ಗೀತೆಯನ್ನು ಹಾಡುತ್ತಿದ್ದಂತೆ ಯುವ ಸಮೂಹ ಹುಚ್ಚೆದ್ದು ಕುಣಿದು ಕುಪ್ಪಳಿಸಿತು.

ತೇರಿ ದಿವಾನಿ ದಿವಾನಿ… ಗೀತೆಯನ್ನು ಭಾವನಾತ್ಮಕವಾಗಿ ಹಾಡಿ ಪ್ರೇಕ್ಷಕರ ಮನಮುಟ್ಟಿದರು. ಬಳಿಕ ಶಾಸ್ತ್ರೀಯ ಆಲಾಪದೊಂದಿಗೆ ‘ಓಂಶಿವೋಂ ರುದ್ರನಾಮ….’ ಎಂಬ ಗೀತೆ ಹಾಡಿ ಭಕ್ತಿ ಸಂಚಲನ ಮೂಡಿಸಿದರು. ನಂತರ ತಮಿಳಿನ ೯೬ ಸಿನಿಮಾದ ‘ಕಾತಲೆ ಕಾತಲೆ’ ಹಾಡಡು ಯುವಸಮೂಹವನ್ನು ಬೇರೊಂದು ಲೋಕಕ್ಕೆ ಕೊಂಡ್ಯೊಯಿತು. ಕನ್ನಡ, ಮಲಯಾಳಂ ಹಾಗೂ ಹಿಂದಿ ಭಾಷೆಯ ಹಲವಾರು ಆಲ್ಬಂ ಹಾಡುಗಳನ್ನು ಹಾಡುಗಳನ್ನು ತಮ್ಮ ವಿಶಿಷ್ಟ ರಾಕ್ ಬ್ಯಾಂಡ್ ಮ್ಯೂಸಿಕ್ ಮೂಲಕ ಹಾಡಿ ನೋಡುಗರನ್ನು ರಂಜಿಸಿದರು.

ಇದಕ್ಕೂ ಮುನ್ನ ರಘುರಾಮ್ ಮತ್ತು ತಂಡ ಕರ್ನಾಟಕ ಶಾಸ್ತ್ರಿಯ ಸಂಗೀತದ ಮೂಲಕ ಶಾಸ್ತ್ರಿಯ ಸಂಗೀತ ರಸಿಕರಿಗೆ ಸಂಗೀತ ರಸದೌತಣ ನೀಡಿದರು ಹಾಗೂ ಡಾ. ಶ್ವೇತಾ ಮಡಪ್ಪಾಡಿ ಅವರು ಜನಪದ ಶೈಲಿಯಲ್ಲಿ ಮಾದಪ್ಪನ ಜನಪದ ಗೀತೆ ಹಾಗೂ ಹಲವು ದೇವರ ಗೀತೆಗಳನ್ನು ತಮ್ಮದೇ ವಿಶಿಷ್ಟ ಶೈಲಿ ಗಾಯನದಿಂದ ಮೋಡಿ ಮಾಡಿದರು.

ಎರಡನೇ ದಿನ ಅರಮನೆ ಆವರಣದಲ್ಲಿ ಪ್ರೇಕ್ಷಕರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದರು. ಆಸನಗಳೆಲ್ಲ ಭರ್ತಿ ಆಗಿದ್ದು, ಸಾವಿರಾರು ಮಂದಿ ನಿಂತುಕೊಂಡೇ ಕಾರ್ಯಕ್ರಮ ವೀಕ್ಷಣೆ ಮಾಡಿದರು.

ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಶಿವಕುಮಾರ್, ಜಿಲ್ಲಾಕಾರಿ ಲಕ್ಷ್ಮಿಕಾಂತ್ ರೆಡ್ಡಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

11 mins ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

15 mins ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

17 mins ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

19 mins ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

23 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

26 mins ago